AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎಎಫ್ ಅಧಿಕಾರಿಯ ಪತ್ನಿ ಮೇಲೆ ಲೈಂಗಿಕ ದೌರ್ಜನ್ಯ, ಬಲವಂತದ ಮತಾಂತರ

ಮಹಾರಾಷ್ಟ್ರದ ನಾಗ್ಪುರದಲ್ಲಿ ಭಾರತೀಯ ವಾಯುಪಡೆ (IAF) ಅಧಿಕಾರಿಯೊಬ್ಬರ ಪತ್ನಿಯ ಮೇಲೆ ನಡೆದಿರುವ ಭೀಕರ ದೌರ್ಜನ್ಯ, ಬ್ಲ್ಯಾಕ್‌ಮೇಲ್ ಹಾಗೂ ಬಲವಂತದ ಮತಾಂತರ ಯತ್ನದ ಆಘಾತಕಾರಿ ಘಟನೆ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ನಾಗ್ಪುರದಲ್ಲಿ ವಾಯುಪಡೆಯ ಅಧಿಕಾರಿಯೊಬ್ಬರ ಪತ್ನಿಯ ಮೇಲೆ ಅತ್ಯಾಚಾರ, ಬ್ಲ್ಯಾಕ್‌ಮೇಲ್, ಬಲವಂತದ ಮತಾಂತರ ಮತ್ತು ಕಿರುಕುಳ ನೀಡಿದ ಆರೋಪಗಳು ಹೊರಬಿದ್ದಿವೆ. ಪ್ರಮುಖ ಆರೋಪಿ ಅಯಾಜ್ ಮದಾರೆ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮತಾಂತರದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಮೌಲಾನಾಗಾಗಿ ವಿಶೇಷ ತಂಡಗಳು ಹುಡುಕಾಟ ನಡೆಸುತ್ತಿವೆ.

ಐಎಎಫ್ ಅಧಿಕಾರಿಯ ಪತ್ನಿ ಮೇಲೆ ಲೈಂಗಿಕ ದೌರ್ಜನ್ಯ, ಬಲವಂತದ ಮತಾಂತರ
HarassmentImage Credit source: iStock
ಸುಷ್ಮಾ ಚಕ್ರೆ
|

Updated on: Jun 16, 2026 | 4:19 PM

Share

ನಾಗ್ಪುರ, ಜೂನ್ 16: ಮಹಾರಾಷ್ಟ್ರದ ನಾಗ್ಪುರದಲ್ಲಿ ಭಾರತೀಯ ವಾಯುಪಡೆಯ (ಐಎಎಫ್) ಅಧಿಕಾರಿಯ ಪತ್ನಿ ಅತ್ಯಾಚಾರ, ಬ್ಲ್ಯಾಕ್‌ಮೇಲ್ ಮತ್ತು ಬಲವಂತದ ಮತಾಂತರದ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ನನ್ನನ್ನು ಬಿಟ್ಟುಬಿಡಿ ಎಂದು 24 ವರ್ಷದ ಯುವತಿಯೊಬ್ಬಳು ಅಳುತ್ತಾ ಕೈಬಿಡಿಸಿಕೊಳ್ಳಲು ಹೆಣಗಾಡುತ್ತಿರುವ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Viral Video) ಆಗಿದೆ. ಈ ಆಘಾತಕಾರಿ ವೀಡಿಯೊ ಭಾರತೀಯ ವಾಯುಪಡೆ (IAF) ಅಧಿಕಾರಿಯೊಬ್ಬರ ಪತ್ನಿಯ ಮೇಲೆ ನಡೆದಿರುವ ಭೀಕರ ದೌರ್ಜನ್ಯದ ಪ್ರಮುಖ ಸಾಕ್ಷಿಯಾಗಿದೆ. ನಾಗ್ಪುರದಲ್ಲಿ ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಎಸಗಲಾಗಿದ್ದು, ಆ ದೃಶ್ಯಗಳನ್ನು ವೀಡಿಯೊ ಮಾಡಿ ಬ್ಲ್ಯಾಕ್‌ಮೇಲ್ ಮೂಲಕ ಲಕ್ಷಾಂತರ ರೂ. ಸುಲಿಗೆ ಮಾಡಲಾಗಿದೆ. ಜೊತೆಗೆ ಆಕೆಯನ್ನು ಬಲವಂತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಳಿಸಲು ಯತ್ನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಾರಾಷ್ಟ್ರದ ನಾಗ್ಪುರದಲ್ಲಿ ಮಾನವೀಯತೆಯನ್ನೇ ತಲೆತಗ್ಗಿಸುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. ವಾಯುಪಡೆ ಅಧಿಕಾರಿಯ ಪತ್ನಿಯಾಗಿರುವ 24 ವರ್ಷದ ಯುವತಿಯನ್ನು ಆಕೆಯ ಹಳೆಯ ಸಹಪಾಠಿಯೇ ಅತ್ಯಾಚಾರ ನಡೆಸಿ, ಬ್ಲ್ಯಾಕ್‌ಮೇಲ್ ಮಾಡಿ, ಬಲವಂತವಾಗಿ ಮತಾಂತರಗೊಳಿಸಲು ಯತ್ನಿಸಿರುವ ಘಟನೆ ವರದಿಯಾಗಿದೆ. ಈ ಘಟನೆ ನಡೆದು ಒಂದು ವರ್ಷ ಕಳೆದಿದ್ದರೂ, ಇತ್ತೀಚೆಗೆ ಮಹಿಳೆ ಧೈರ್ಯ ಮಾಡಿ ತನ್ನ ಪತಿಗೆ ವಿಷಯ ತಿಳಿಸಿದ ನಂತರ ಜೂನ್ 13 ರಂದು ನಾಗ್ಪುರದ ಸೋನೆಗಾಂವ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಂತ್ರಸ್ತೆಯ ದೂರಿನ ಆಧಾರದ ಮೇಲೆ, ಪೊಲೀಸರು ಪ್ರಮುಖ ಆರೋಪಿ ಅಯಾಜ್ ಮದಾರೆ ಮತ್ತು ಅವರ ಸಹಚರ ಅಮೀನ್ ಶೇಖ್ ಎಂಬುವವರನ್ನು ಬಂಧಿಸಿದ್ದಾರೆ. ಮತಾಂತರದಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಮೌಲಾನಾ ಅವರನ್ನು ವಿಶೇಷ ತಂಡಗಳು ಹುಡುಕುತ್ತಿವೆ. ಎಫ್‌ಐಆರ್ ಪ್ರಕಾರ, 2025ರ ಫೆಬ್ರವರಿ 8ರಂದು ಅಯಾಜ್ ಮದಾರೆ ಹೋಟೆಲ್‌ನಲ್ಲಿ ಐಎಎಫ್ ಅಧಿಕಾರಿಯ ಪತ್ನಿಗೆ ಪಾನೀಯವನ್ನು ಕುಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ವೃದ್ಧೆಗೂ ಇಲ್ಲ ಭದ್ರತೆ; ಕಣ್ಣು ಕಾಣದ 70 ವರ್ಷದ ದೆಹಲಿಯ ಮಹಿಳೆ ಮೇಲೆ ಹಲ್ಲೆ, ಲೈಂಗಿಕ ದೌರ್ಜನ್ಯಕ್ಕೆ ಯತ್ನ

ಆಕೆ ಪ್ರಜ್ಞಾಹೀನಳಾಗಿದ್ದಾಗ ಆಕ್ಷೇಪಾರ್ಹ ಫೋಟೋಗಳು ಮತ್ತು ವಿಡಿಯೋಗಳನ್ನು ತೆಗೆದುಕೊಂಡು, ಆಕೆಯ ಪತಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿ, ಸಾಮಾಜಿಕ ಮಾಧ್ಯಮದಲ್ಲಿ ಹರಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬೆದರಿಕೆಗಳ ಮೂಲಕ ಆತ ತನ್ನ ಮೇಲೆ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ, ಸುಮಾರು 4 ಲಕ್ಷ ರೂ.ಗಳನ್ನು ಸುಲಿಗೆ ಮಾಡಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ವೈರಲ್ ಆದ ವಿಡಿಯೋದಲ್ಲಿ ಸಂತ್ರಸ್ತೆ ಅಳುತ್ತಾ ಬೇಡಿಕೊಳ್ಳುತ್ತಿರುವುದು ಕಂಡುಬರುತ್ತದೆ. ನಂತರ ಆತ ತನ್ನನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಿಸಿ, ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆಕೆ ಆರೋಪಿಸಿದ್ದಾರೆ.

ಸಂತ್ರಸ್ತೆ ಪೊಲೀಸರಿಗೆ ನೀಡಿರುವ ಸಾಕ್ಷ್ಯಚಿತ್ರದಲ್ಲಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಅದರಲ್ಲಿ ಆರೋಪಿ ಅಯಾಜ್ ಮದಾರೆ ಯುವತಿಯ ಕೈಗಳನ್ನು ಬಲವಂತವಾಗಿ ಹಿಡಿದುಕೊಂಡು ಧಾರ್ಮಿಕ ಶ್ಲೋಕಗಳನ್ನು ಪಠಿಸುತ್ತಾ ಆಕೆಯ ಮುಖದ ಮೇಲೆ ನಿರಂತರವಾಗಿ ಊದುತ್ತಿರುವುದು ಕಂಡುಬಂದಿದೆ. ಈ ವೇಳೆ ಯುವತಿ “ನನ್ನನ್ನು ಬಿಟ್ಟುಬಿಡಿ” ಎಂದು ಚೀರಾಡುತ್ತಾ ಆತನ ಹಿಡಿತದಿಂದ ತಪ್ಪಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾಳೆ. ಈ ಕೃತ್ಯದ ನಂತರ ಆಕೆ ಮತಾಂತರಗೊಂಡಿದ್ದಾಳೆ ಎಂದು ಆರೋಪಿಗಳು ಘೋಷಿಸಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಮಾಜಿ ಸೈನಿಕನ ಮರ್ಡರ್ ಮಿಸ್ಟ್ರಿ: FSL​​ ವರದಿಯನ್ನೇ ತಿರುಚಿದ್ರು, ಸುಪನಾತಿ ಸುಮಾಳ ಅಸಲಿಯತ್ತು ಬಯಲು

ಆರೋಪಿ ಅಯಾಜ್ ಪ್ಲಾಟ್ ಖರೀದಿಸುವ ನೆಪದಲ್ಲಿ ಯುವತಿಯನ್ನು ವರ್ಧಾ ರಸ್ತೆಯಲ್ಲಿರುವ ಹೋಟೆಲ್‌ಗೆ ಕರೆಸಿದ್ದನು. ಅಲ್ಲಿ ಆಕೆಗೆ ನೀಡಿದ ಜ್ಯೂಸ್‌ನಲ್ಲಿ ಮಾದಕ ದ್ರವ್ಯ ಬೆರೆಸಿ, ಆಕೆ ಪ್ರಜ್ಞೆ ತಪ್ಪಿದಾಗ ಅತ್ಯಾಚಾರ ಎಸಗಿದ್ದನು. ಅಲ್ಲದೆ ಆ ಕೃತ್ಯದ ಅಶ್ಲೀಲ ವೀಡಿಯೊ ಮತ್ತು ಫೋಟೋಗಳನ್ನು ತೆಗೆದುಕೊಂಡಿದ್ದನು. ಆ ವೀಡಿಯೊಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪಿ, ಯುವತಿಯಿಂದ ಸುಮಾರು 3.09 ಲಕ್ಷ ರೂಪಾಯಿ ಹಣವನ್ನು ಸುಲಿಗೆ ಮಾಡಿದ್ದಲ್ಲದೆ ನಿರಂತರವಾಗಿ ಲೈಂಗಿಕ ಶೋಷಣೆ ನಡೆಸಿದ್ದನು.

ಕಳೆದ ಮೇ ತಿಂಗಳಲ್ಲಿ ಆರೋಪಿ ಅಯಾಜ್ ಆ ಸಂತ್ರಸ್ತೆಯನ್ನು ನಾಗ್ಪುರದ ಕಲ್ಮೇಶ್ವರ್ ಎಂಬ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದನು. ಅಲ್ಲಿ ಆಕೆಯನ್ನು ಅಮೀನ್ ಶೇಖ್ ಮತ್ತು ಮಧ್ಯಪ್ರದೇಶದ ಮೌಲಾನಾಗೆ ಪರಿಚಯಿಸಲಾಗಿತ್ತು. ಮೂವರೂ ಸೇರಿ ಯುವತಿಯ ಇಷ್ಟಕ್ಕೆ ವಿರುದ್ಧವಾಗಿ ಕೆಲವು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿ, ಆಕೆಯ ಮತಾಂತರ ಪ್ರಕ್ರಿಯೆ ಪೂರ್ಣಗೊಂಡಿದೆ ಮತ್ತು ಆಕೆಗೆ ಅಯಾಜ್ ಜೊತೆ ಮದುವೆಯಾಗಿದೆ ಎಂದು ಘೋಷಿಸಿದ್ದರು. ಅದರ ನಂತರವೂ ಆಕೆಯ ಮೇಲೆ ಮತ್ತೊಮ್ಮೆ ಅತ್ಯಾಚಾರಕ್ಕೆ ಯತ್ನಿಸಲಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸರು ಅತ್ಯಾಚಾರ, ಲೈಂಗಿಕ ಕಿರುಕುಳ, ಬ್ಲ್ಯಾಕ್‌ಮೇಲ್, ದರೋಡೆ, ಬಲವಂತದ ಮತಾಂತರ ತಡೆ ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಿದ್ದಾರೆ. ವಶಪಡಿಸಿಕೊಂಡ ಮೊಬೈಲ್ ಫೋನ್‌ಗಳು ಮತ್ತು ಎಲೆಕ್ಟ್ರಾನಿಕ್ ಸಾಧನಗಳನ್ನು ವಿಧಿವಿಜ್ಞಾನ ಪರೀಕ್ಷೆಗಳಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಯುತ್ತಿದ್ದು, ಎಲ್ಲಾ ಕೋನಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಯಾವ ಯಾವ ರೀತಿಯ ಕ್ಯಾನ್ಸರ್​ ಮಕ್ಕಳನ್ನ ಕಾಡುತ್ತೆ?
ಯಾವ ಯಾವ ರೀತಿಯ ಕ್ಯಾನ್ಸರ್​ ಮಕ್ಕಳನ್ನ ಕಾಡುತ್ತೆ?
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಒಬ್ಬೊಬ್ರಿಗೆ ಕೊಡ್ತೀನಿ ನೋಡಿ; ಸಮಂತಾ ಎಚ್ಚರಿಕೆ ನೀಡಿದ್ದು ಯಾರಿಗೆ?
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಎಸಿಎಫ್​​ ಮನೆಯಲ್ಲಿ ಖಜಾನೆ ಕಂಡು ಲೋಕಾಯಕ್ತ ಅಧಿಕಾರಿಗಳೇ ಶಾಕ್​​
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ
ಮೈಸೂರು ಪಬ್​​ ದುರಂತ ಕೇಸ್​​ಗೆ ಟ್ವಿಸ್ಟ್​​: ಕೇಳಿಬಂತು ಸ್ಫೋಟಕ ಆರೋಪ