AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಹ್ಮೋಸ್ ‘ಸರ್​ಫೇಸ್ ಟು ಸರ್​ಫೇಸ್’ ಕ್ಷಿಪಣಿ ಪ್ರಯೋಗ ಯಶಸ್ವಿ

ದೆಹಲಿ:ಕಾಶ್ಮೀರದ ಗಡಿಯಲ್ಲಿ ದಿನೇ ದಿನೆ ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದೆ. ಪಾಪಿ ಪಾಕಿಸ್ತಾನ ಕಾಲುಕೆರೆದು ಜಗಳ ಮಾಡೋದಕ್ಕೆ ಮುಂದಾಗ್ತಿದೆ. ಈ ಮಧ್ಯೆ ಭಾರತ ಸೇನಾ ಬಲ ಹೆಚ್ಚಿಕೊಳ್ಳುವುದರತ್ತ ಗಮನಹರಿಸುತ್ತಿದ್ದು, ನಿನ್ನೆ ಕೂಡ ಅಂತಹದ್ದೇ ಮಹತ್ವದ ಕಾರ್ಯದಲ್ಲಿ ಹೆಮ್ಮೆಯ ವಾಯುಪಡೆ ಯಶಸ್ವಿಯಾಗಿದೆ. ಈ ಯಶಸ್ಸು ಭೀಮಬಲ ತಂದಿದೆ. ಭಾರತ ಬಲಿಷ್ಠವಾಗುತ್ತಿದೆ. ತನ್ನ ವಿರುದ್ಧ ಯುದ್ಧಕ್ಕೆ ಕಾದು ನಿಂತಿರುವ ಪಾಪಿ ಪಾಕ್​ಗೆ ಬಿಸಿಮುಟ್ಟಿಸಲು ಸದಾ ಸನ್ನದ್ಧವಾಗಿರುವ ಭಾರತ, ಇದೀಗ ಮತ್ತೊಂದು ಯಶಸ್ಸನ್ನ ಮುಡಿಗೇರಿಸಿಕೊಂಡಿದೆ. ವಿಶ್ವದ ಕೆಲವೇ ಕೆಲವು ಬಲಿಷ್ಠ ರಾಷ್ಟ್ರಗಳ ಬಳಿ […]

ಬ್ರಹ್ಮೋಸ್ ‘ಸರ್​ಫೇಸ್ ಟು ಸರ್​ಫೇಸ್’ ಕ್ಷಿಪಣಿ ಪ್ರಯೋಗ ಯಶಸ್ವಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Oct 23, 2019 | 7:15 AM

Share

ದೆಹಲಿ:ಕಾಶ್ಮೀರದ ಗಡಿಯಲ್ಲಿ ದಿನೇ ದಿನೆ ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದೆ. ಪಾಪಿ ಪಾಕಿಸ್ತಾನ ಕಾಲುಕೆರೆದು ಜಗಳ ಮಾಡೋದಕ್ಕೆ ಮುಂದಾಗ್ತಿದೆ. ಈ ಮಧ್ಯೆ ಭಾರತ ಸೇನಾ ಬಲ ಹೆಚ್ಚಿಕೊಳ್ಳುವುದರತ್ತ ಗಮನಹರಿಸುತ್ತಿದ್ದು, ನಿನ್ನೆ ಕೂಡ ಅಂತಹದ್ದೇ ಮಹತ್ವದ ಕಾರ್ಯದಲ್ಲಿ ಹೆಮ್ಮೆಯ ವಾಯುಪಡೆ ಯಶಸ್ವಿಯಾಗಿದೆ. ಈ ಯಶಸ್ಸು ಭೀಮಬಲ ತಂದಿದೆ.

ಭಾರತ ಬಲಿಷ್ಠವಾಗುತ್ತಿದೆ. ತನ್ನ ವಿರುದ್ಧ ಯುದ್ಧಕ್ಕೆ ಕಾದು ನಿಂತಿರುವ ಪಾಪಿ ಪಾಕ್​ಗೆ ಬಿಸಿಮುಟ್ಟಿಸಲು ಸದಾ ಸನ್ನದ್ಧವಾಗಿರುವ ಭಾರತ, ಇದೀಗ ಮತ್ತೊಂದು ಯಶಸ್ಸನ್ನ ಮುಡಿಗೇರಿಸಿಕೊಂಡಿದೆ. ವಿಶ್ವದ ಕೆಲವೇ ಕೆಲವು ಬಲಿಷ್ಠ ರಾಷ್ಟ್ರಗಳ ಬಳಿ ಇರುವ ತಾಕತ್ತು ಭಾರತಕ್ಕೂ ಲಭಿಸಿದೆ. ಅಂದಹಾಗೆ ‘ಸರ್​ಫೇಸ್ ಟು ಸರ್​ಫೇಸ್’ ಮಿಸೈಲ್ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ.

300 ಕಿ.ಮೀ. ದೂರದಲ್ಲಿದ್ದರೂ ವೈರಿಪಡೆ ಉಡೀಸ್..! ನಿನ್ನೆ ಬ್ರಹ್ಮೋಸ್​ನ ಮತ್ತೊಂದು ಕ್ಷಿಪಣಿಯನ್ನ ಭಾರತ ಪ್ರಯೋಗ ನಡೆಸಿದೆ. ಪಾಕಿಸ್ತಾನದ ಜೊತೆಗೆ ಚೀನಾಗೂ ಟಾಂಗ್ ಕೊಡಲು ಅಂಡಮಾನ್ ದ್ವೀಪ ಸಮೂಹದಲ್ಲಿ ಈ ಪರೀಕ್ಷೆ ನಡೆದಿದೆ. ‘ಸರ್​ಫೇಸ್ ಟು ಸರ್​ಫೇಸ್’ ಸಾಮರ್ಥ್ಯದ ಹೊಸ ಬ್ರಹ್ಮೋಸ್ ಮಿಸೈಲ್ ವೈರಿ ಪಡೆಯ ಹುಟ್ಟಡಗಿಸಬಹುದು. ಇದರ ವ್ಯಾಪ್ತಿ ಕೂಡ ಗಮನ ಸೆಳೆಯುವಂತಹದ್ದು. ಸುಮಾರು 300 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅಡಗಿರುವ ವೈರಿಪಡೆಯ ಹೆಡೆಮುರಿ ಕಟ್ಟಿ, ಗೆಲುವಿನ ನಗೆಬೀರುವ ತಾಕತ್ತು ಹೊಸ ಕ್ಷಿಪಣಿಗಿದೆ.

ವೈರಿಗಳ ಮೇಲೆ ದಾಳಿ ನಡೆಸುವುದು ಸುಲಭ..! ಈ ಕ್ಷಿಪಣಿಯನ್ನ ಲಾಂಚ್ ಮಾಡೋದು ಕೂಡ ತುಂಬಾ ಸುಲಭವಾಗಿದೆ. ರಷ್ಯಾ ಸಹಭಾಗಿತ್ವದಲ್ಲಿ ಬ್ರಹ್ಮೋಸ್ ಕ್ಷಿಪಣಿಯನ್ನ ಭಾರತ ತಯಾರಿಸುತ್ತಿದೆ. ಸಬ್​ಮರೀನ್, ಹಡಗು, ಏರ್​ಕ್ರಾಫ್ಟ್​ಗಳು ಸೇರಿದಂತೆ ನೆಲದ ಮೇಲಿಂದ ಕೂಡ ಈ ಕ್ಷಿಪಣಿಯನ್ನ ಉಡಾಯಿಸೋದು ಸುಲಭ. ಆ ಮೂಲಕ ದೇಶದ ರಕ್ಷಣೆಗೆ ಈ ಕ್ಷಿಪಣಿಗಳು ಮಹತ್ವದ ಕೊಡುಗೆ ನೀಡುವಂತಿವೆ.

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು