AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ20 ಬ್ಯಾನರ್​ ಹಿಡಿದು 10 ಸಾವಿರ ಅಡಿ ಎತ್ತರದಿಂದ ಸ್ಕೈಡೈವಿಂಗ್ ಮಾಡಿದ ಐಎಎಫ್ ವಿಂಗ್ ಕಮಾಂಡರ್ ಗಜಾನಂದ್

ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಗೆ ಕ್ಷಣಗಣನೆ ಆರಂಭವಾಗಿದೆ, ಇನ್ನು ಒಂದೇ ಒಂದು ದಿನ ಬಾಕಿ ಉಳಿದಿದೆ. ವಿಶ್ವದ ನಾಯಕರನ್ನು ಬರಮಾಡಿಕೊಳ್ಳಲು ದೇಶ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ವಾಯುಪಡೆ ವಿಂಗ್ ಕಮಾಂಡರ್ ಗಜಾನಂದ 10 ಸಾವಿರ ಅಡಿ ಎತ್ತರದಿಂದ ಜಿ20 ಬ್ಯಾನರ್​ ಹಿಡಿದು ಸ್ಕೈಡೈವಿಂಗ್ ಮಾಡಿದ್ದಾರೆ.

ಜಿ20 ಬ್ಯಾನರ್​ ಹಿಡಿದು 10 ಸಾವಿರ ಅಡಿ ಎತ್ತರದಿಂದ ಸ್ಕೈಡೈವಿಂಗ್ ಮಾಡಿದ ಐಎಎಫ್ ವಿಂಗ್ ಕಮಾಂಡರ್ ಗಜಾನಂದ್
ಗಜಾನಂದ್
ನಯನಾ ರಾಜೀವ್
|

Updated on:Sep 08, 2023 | 1:43 PM

Share

ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಗೆ ಕ್ಷಣಗಣನೆ ಆರಂಭವಾಗಿದೆ, ಇನ್ನು ಒಂದೇ ಒಂದು ದಿನ ಬಾಕಿ ಉಳಿದಿದೆ. ವಿಶ್ವದ ನಾಯಕರನ್ನು ಬರಮಾಡಿಕೊಳ್ಳಲು ದೇಶ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ವಾಯುಪಡೆ ವಿಂಗ್ ಕಮಾಂಡರ್ ಗಜಾನಂದ 10 ಸಾವಿರ ಅಡಿ ಎತ್ತರದಿಂದ ಜಿ20 ಬ್ಯಾನರ್​ ಹಿಡಿದು ಸ್ಕೈಡೈವಿಂಗ್ ಮಾಡಿದ್ದಾರೆ.

ಸೌತ್ ವೆಸ್ಟರ್ನ್ ಏರ್ ಕಮಾಂಡ್ ಪ್ರಕಾರ, ವಿಂಗ್ ಕಮಾಂಡರ್ ಗಜಾನಂದ್ ಯಾದವ ಅವರು 10,000 ಅಡಿ ಎತ್ತರದಿಂದ ಜಿ20 ಧ್ವಜದೊಂದಿಗೆ ವಸುಧೈವ ಕುಟುಂಬಕಂ-ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ ಎಂಬ ಥೀಮ್‌ನೊಂದಿಗೆ 10,000 ಅಡಿ ಎತ್ತರದಿಂದ ಸ್ಕೈಡೈವಿಂಗ್ ಮಾಡಿದರು.

ವಿಂಗ್ ಕಮಾಂಡರ್ ಯಾದವ ಅವರು ಏರ್ ಫೋರ್ಸ್ ಸ್ಟೇಷನ್ ಮಾಧ್ ಐಲ್ಯಾಂಡ್‌ನಲ್ಲಿ ನೇಮಕಗೊಂಡಿದ್ದಾರೆ. ಸ್ಕೈಡೈವಿಂಗ್ ಮಾರ್ಚ್​ನಲ್ಲೇ ಮಾಡಿದ್ದು, ಇದೀಗ ಈ ವಿಡಿಯೋ ವೈರಲ್ ಆಗಿದೆ.

ಮತ್ತಷ್ಟು ಓದಿ: G 20 Summit; ಶೃಂಗಸಭೆಗೂ ಮುನ್ನ ಜಿ 20 ಅಧ್ಯಕ್ಷತೆಯಲ್ಲಿ ಭಾರತದ ಸಾಧನೆಗಳಿವು

ಸೆಪ್ಟೆಂಬರ್ 9 ಮತ್ತು 10 ರಂದು ನಡೆಯಲಿರುವ ಜಿ 20 ಶೃಂಗಸಭೆಯಲ್ಲಿ 40 ಕ್ಕೂ ಹೆಚ್ಚು ರಾಜ್ಯಗಳು ಮತ್ತು ಸರ್ಕಾರಗಳು ಮತ್ತು ಸಂಸ್ಥೆಗಳು ಪ್ರಗತಿ ಮೈದಾನದಲ್ಲಿರುವ ಭಾರತ್ ಮಂಟಪಂ ಕಾಂಪ್ಲೆಕ್ಸ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ನವದೆಹಲಿಗೆ ಬಂದಿಳಿಯಲಿದ್ದಾರೆ. ತಿಥಿಗಳ ಆಗಮನವು ಸೆಪ್ಟೆಂಬರ್ 7 ರ ಸಂಜೆಯಿಂದ ಪ್ರಾರಂಭವಾಗಿದ್ದು ಮತ್ತು ಸೆಪ್ಟೆಂಬರ್ 8 ರಂದು ಸಂಜೆ ಮುಕ್ತಾಯಗೊಳ್ಳಲಿದೆ. ಅಮೆರಿಕ ಅಧ್ಯಕ್ಷ ಜೋ ಬೈಡನ್ ಇಂದು ಸಂಜೆ 8 ಗಂಟೆಗೆ ದೆಹಲಿಗೆ ಬಂದಿಳಿಯಲಿದ್ದಾರೆ, ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್, ಜಪಾನ್ ಪ್ರಧಾನಿ ಫ್ಯೂಮಿಯೋ ಕಿಶಿಡಾ, ಜರ್ಮನ್ ಚಾನ್ಸಲರ್ ಓಲಾಫಾ, ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್ ಸೇರಿದಂತೆ ವಿಶ್ವದ ಹಲವು ಗಣ್ಯರು ಆಗಮಿಸಲಿದ್ದಾರೆ.

ಆಗಮಿಸಲಿರುವ ಅತಿಥಿಗಳು ಟರ್ಕಿ – ಆರ್ಸಿ ಎರ್ಡೋಗನ್ ಯುನೈಟೆಡ್ ಕಿಂಗ್‌ಡಮ್ – ರಿಷಿ ಸುನಕ್ ಯುನೈಟೆಡ್ ಸ್ಟೇಟ್ಸ್ – ಜೋ ಬೈಡನ್ ಯುರೋಪಿಯನ್ ಯೂನಿಯನ್-ಚಾರ್ಲ್ಸ್ ಮೈಕೆಲ್ ಅರ್ಜೆಂಟೀನಾ – ಆಲ್ಬರ್ಟೊ ಫೆರ್ನಾಂಡಿಸ್ ಆಸ್ಟ್ರೇಲಿಯಾ – ಆಂಥೋನಿ ಅಲ್ಬನೀಸ್ ಬ್ರೆಜಿಲ್ – ಲೂಯಿಜ್ ಇನಾಸಿಯೊ ಕೆನಡಾ – ಜಸ್ಟಿನ್ ಟ್ರುಡೊ ಚೀನಾ–ಲಿ ಚಿಯಾಂಗ್ ಫ್ರಾನ್ಸ್ – ಎಮ್ಯಾನುಯೆಲ್ ಮ್ಯಾಕ್ರನ್ ಜರ್ಮನಿ–ಓಲಾಫ್ ಸ್ಕೋಲ್ಜ್ ಭಾರತ – ನರೇಂದ್ರ ಮೋದಿ ಇಂಡೋನೇಷ್ಯಾ – ಜೋಕೊ ವಿಡೋಡೋ ಇಟಲಿ –ಜಾರ್ಜಿಯಾ ಮೆಲೋನಿ ಜಪಾನ್ — ಫ್ಯೂಮಿಯೋ ಕಿಶಿಡಾ ಮೆಕ್ಸಿಕೋ — ಆಂಡ್ರೆಸ್ ಮ್ಯಾನುಯೆಲ್ ದಕ್ಷಿಣ ಕೊರಿಯಾ – ಯೂನ್ ಸುಕ್ ಯೆಯೋಲ್ ರಷ್ಯಾ – ಸೆರ್ಗೆ ಲಾವ್ರೊವ್ ಸೌದಿ ಅರೇಬಿಯಾ – ಮುಹಮ್ಮದ್ ಬಿನ್ ಸಲ್ಮಾನ್ ದಕ್ಷಿಣ ಆಫ್ರಿಕಾ – ಸಿರಿಲ್ ರಾಮಫೋಸಾ

ಯುಪಿಐ ವಹಿವಾಟುಗಳನ್ನು ಮಾಡಲು ಬಯಸುವ ವಿದೇಶಿ ಪ್ರತಿನಿಧಿಗಳಿಗೆ ಅವರ ಯುಪಿಐ ವ್ಯಾಲೆಟ್‍ಗಳಲ್ಲಿ 500-1,000 ರೂ. ನೀಡಲಾಗುತ್ತದೆ, ಹಾಗೆಯೇ ಸ್ಥಳೀಯ ಮಾರುಕಟ್ಟೆಯಲ್ಲಿ ಇದರ ಬಳಕೆ ಮಾಡಬಹುದಾಗಿದೆ ಎಂದು ಹೇಳಲಾಗಿದೆ, ಇದಕ್ಕಾಗಿ ಸರ್ಕಾರ ಸುಮಾರು 10 ಲಕ್ಷ ರೂ.ಗಳನ್ನು ಮೀಸಲಿಟ್ಟಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:37 am, Fri, 8 September 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?