AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ20 ಬ್ಯಾನರ್​ ಹಿಡಿದು 10 ಸಾವಿರ ಅಡಿ ಎತ್ತರದಿಂದ ಸ್ಕೈಡೈವಿಂಗ್ ಮಾಡಿದ ಐಎಎಫ್ ವಿಂಗ್ ಕಮಾಂಡರ್ ಗಜಾನಂದ್

ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಗೆ ಕ್ಷಣಗಣನೆ ಆರಂಭವಾಗಿದೆ, ಇನ್ನು ಒಂದೇ ಒಂದು ದಿನ ಬಾಕಿ ಉಳಿದಿದೆ. ವಿಶ್ವದ ನಾಯಕರನ್ನು ಬರಮಾಡಿಕೊಳ್ಳಲು ದೇಶ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ವಾಯುಪಡೆ ವಿಂಗ್ ಕಮಾಂಡರ್ ಗಜಾನಂದ 10 ಸಾವಿರ ಅಡಿ ಎತ್ತರದಿಂದ ಜಿ20 ಬ್ಯಾನರ್​ ಹಿಡಿದು ಸ್ಕೈಡೈವಿಂಗ್ ಮಾಡಿದ್ದಾರೆ.

ಜಿ20 ಬ್ಯಾನರ್​ ಹಿಡಿದು 10 ಸಾವಿರ ಅಡಿ ಎತ್ತರದಿಂದ ಸ್ಕೈಡೈವಿಂಗ್ ಮಾಡಿದ ಐಎಎಫ್ ವಿಂಗ್ ಕಮಾಂಡರ್ ಗಜಾನಂದ್
ಗಜಾನಂದ್
ನಯನಾ ರಾಜೀವ್
|

Updated on:Sep 08, 2023 | 1:43 PM

Share

ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಗೆ ಕ್ಷಣಗಣನೆ ಆರಂಭವಾಗಿದೆ, ಇನ್ನು ಒಂದೇ ಒಂದು ದಿನ ಬಾಕಿ ಉಳಿದಿದೆ. ವಿಶ್ವದ ನಾಯಕರನ್ನು ಬರಮಾಡಿಕೊಳ್ಳಲು ದೇಶ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ವಾಯುಪಡೆ ವಿಂಗ್ ಕಮಾಂಡರ್ ಗಜಾನಂದ 10 ಸಾವಿರ ಅಡಿ ಎತ್ತರದಿಂದ ಜಿ20 ಬ್ಯಾನರ್​ ಹಿಡಿದು ಸ್ಕೈಡೈವಿಂಗ್ ಮಾಡಿದ್ದಾರೆ.

ಸೌತ್ ವೆಸ್ಟರ್ನ್ ಏರ್ ಕಮಾಂಡ್ ಪ್ರಕಾರ, ವಿಂಗ್ ಕಮಾಂಡರ್ ಗಜಾನಂದ್ ಯಾದವ ಅವರು 10,000 ಅಡಿ ಎತ್ತರದಿಂದ ಜಿ20 ಧ್ವಜದೊಂದಿಗೆ ವಸುಧೈವ ಕುಟುಂಬಕಂ-ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ ಎಂಬ ಥೀಮ್‌ನೊಂದಿಗೆ 10,000 ಅಡಿ ಎತ್ತರದಿಂದ ಸ್ಕೈಡೈವಿಂಗ್ ಮಾಡಿದರು.

ವಿಂಗ್ ಕಮಾಂಡರ್ ಯಾದವ ಅವರು ಏರ್ ಫೋರ್ಸ್ ಸ್ಟೇಷನ್ ಮಾಧ್ ಐಲ್ಯಾಂಡ್‌ನಲ್ಲಿ ನೇಮಕಗೊಂಡಿದ್ದಾರೆ. ಸ್ಕೈಡೈವಿಂಗ್ ಮಾರ್ಚ್​ನಲ್ಲೇ ಮಾಡಿದ್ದು, ಇದೀಗ ಈ ವಿಡಿಯೋ ವೈರಲ್ ಆಗಿದೆ.

ಮತ್ತಷ್ಟು ಓದಿ: G 20 Summit; ಶೃಂಗಸಭೆಗೂ ಮುನ್ನ ಜಿ 20 ಅಧ್ಯಕ್ಷತೆಯಲ್ಲಿ ಭಾರತದ ಸಾಧನೆಗಳಿವು

ಸೆಪ್ಟೆಂಬರ್ 9 ಮತ್ತು 10 ರಂದು ನಡೆಯಲಿರುವ ಜಿ 20 ಶೃಂಗಸಭೆಯಲ್ಲಿ 40 ಕ್ಕೂ ಹೆಚ್ಚು ರಾಜ್ಯಗಳು ಮತ್ತು ಸರ್ಕಾರಗಳು ಮತ್ತು ಸಂಸ್ಥೆಗಳು ಪ್ರಗತಿ ಮೈದಾನದಲ್ಲಿರುವ ಭಾರತ್ ಮಂಟಪಂ ಕಾಂಪ್ಲೆಕ್ಸ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ನವದೆಹಲಿಗೆ ಬಂದಿಳಿಯಲಿದ್ದಾರೆ. ತಿಥಿಗಳ ಆಗಮನವು ಸೆಪ್ಟೆಂಬರ್ 7 ರ ಸಂಜೆಯಿಂದ ಪ್ರಾರಂಭವಾಗಿದ್ದು ಮತ್ತು ಸೆಪ್ಟೆಂಬರ್ 8 ರಂದು ಸಂಜೆ ಮುಕ್ತಾಯಗೊಳ್ಳಲಿದೆ. ಅಮೆರಿಕ ಅಧ್ಯಕ್ಷ ಜೋ ಬೈಡನ್ ಇಂದು ಸಂಜೆ 8 ಗಂಟೆಗೆ ದೆಹಲಿಗೆ ಬಂದಿಳಿಯಲಿದ್ದಾರೆ, ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್, ಜಪಾನ್ ಪ್ರಧಾನಿ ಫ್ಯೂಮಿಯೋ ಕಿಶಿಡಾ, ಜರ್ಮನ್ ಚಾನ್ಸಲರ್ ಓಲಾಫಾ, ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್ ಸೇರಿದಂತೆ ವಿಶ್ವದ ಹಲವು ಗಣ್ಯರು ಆಗಮಿಸಲಿದ್ದಾರೆ.

ಆಗಮಿಸಲಿರುವ ಅತಿಥಿಗಳು ಟರ್ಕಿ – ಆರ್ಸಿ ಎರ್ಡೋಗನ್ ಯುನೈಟೆಡ್ ಕಿಂಗ್‌ಡಮ್ – ರಿಷಿ ಸುನಕ್ ಯುನೈಟೆಡ್ ಸ್ಟೇಟ್ಸ್ – ಜೋ ಬೈಡನ್ ಯುರೋಪಿಯನ್ ಯೂನಿಯನ್-ಚಾರ್ಲ್ಸ್ ಮೈಕೆಲ್ ಅರ್ಜೆಂಟೀನಾ – ಆಲ್ಬರ್ಟೊ ಫೆರ್ನಾಂಡಿಸ್ ಆಸ್ಟ್ರೇಲಿಯಾ – ಆಂಥೋನಿ ಅಲ್ಬನೀಸ್ ಬ್ರೆಜಿಲ್ – ಲೂಯಿಜ್ ಇನಾಸಿಯೊ ಕೆನಡಾ – ಜಸ್ಟಿನ್ ಟ್ರುಡೊ ಚೀನಾ–ಲಿ ಚಿಯಾಂಗ್ ಫ್ರಾನ್ಸ್ – ಎಮ್ಯಾನುಯೆಲ್ ಮ್ಯಾಕ್ರನ್ ಜರ್ಮನಿ–ಓಲಾಫ್ ಸ್ಕೋಲ್ಜ್ ಭಾರತ – ನರೇಂದ್ರ ಮೋದಿ ಇಂಡೋನೇಷ್ಯಾ – ಜೋಕೊ ವಿಡೋಡೋ ಇಟಲಿ –ಜಾರ್ಜಿಯಾ ಮೆಲೋನಿ ಜಪಾನ್ — ಫ್ಯೂಮಿಯೋ ಕಿಶಿಡಾ ಮೆಕ್ಸಿಕೋ — ಆಂಡ್ರೆಸ್ ಮ್ಯಾನುಯೆಲ್ ದಕ್ಷಿಣ ಕೊರಿಯಾ – ಯೂನ್ ಸುಕ್ ಯೆಯೋಲ್ ರಷ್ಯಾ – ಸೆರ್ಗೆ ಲಾವ್ರೊವ್ ಸೌದಿ ಅರೇಬಿಯಾ – ಮುಹಮ್ಮದ್ ಬಿನ್ ಸಲ್ಮಾನ್ ದಕ್ಷಿಣ ಆಫ್ರಿಕಾ – ಸಿರಿಲ್ ರಾಮಫೋಸಾ

ಯುಪಿಐ ವಹಿವಾಟುಗಳನ್ನು ಮಾಡಲು ಬಯಸುವ ವಿದೇಶಿ ಪ್ರತಿನಿಧಿಗಳಿಗೆ ಅವರ ಯುಪಿಐ ವ್ಯಾಲೆಟ್‍ಗಳಲ್ಲಿ 500-1,000 ರೂ. ನೀಡಲಾಗುತ್ತದೆ, ಹಾಗೆಯೇ ಸ್ಥಳೀಯ ಮಾರುಕಟ್ಟೆಯಲ್ಲಿ ಇದರ ಬಳಕೆ ಮಾಡಬಹುದಾಗಿದೆ ಎಂದು ಹೇಳಲಾಗಿದೆ, ಇದಕ್ಕಾಗಿ ಸರ್ಕಾರ ಸುಮಾರು 10 ಲಕ್ಷ ರೂ.ಗಳನ್ನು ಮೀಸಲಿಟ್ಟಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:37 am, Fri, 8 September 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್