AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IAS ಅಧಿಕಾರಿ ಮೇಲೆ ಪತಿಯ ದರ್ಪ: ಬಾಗಿಲು ಮುರಿದವ.. ಕೊನೆಗೆ ಜೈಲುಪಾಲಾದ

ಲಕ್ನೋ: ಪತ್ನಿಯ ಮೇಲೆ ಹಲ್ಲೆ ಹಾಗೂ ಮಾವನ ಮನೆಗೆ ಬಲವಂತವಾಗಿ ನುಗ್ಗಲು ಯತ್ನಿಸಿರುವ ಆರೋಪದಡಿ ಹರಿಯಾಣ ರಾಜ್ಯದ ಗುರುಗ್ರಾಮ್​ನಲ್ಲಿ ಪ್ರಾದೇಶಿಕ ಕಾರ್ಮಿಕ ಇಲಾಖೆಯ ಅಧಿಕಾರಿಯಾಗಿರುವ ರಾಜೀವ್ ನಯನ್​ನನ್ನು ಪೊಲೀಸರು ಬಂಧಿಸಿದ್ದಾರೆ. 2013 ರ ಬ್ಯಾಚ್​ನ IAS ಅಧಿಕಾರಿ ಶೈಲಜಾ ಶರ್ಮಾ ಮೇಲೆ ಪತಿ ರಾಜೀವ್ ನಯನ್ ಹಲ್ಲೆ ಮಾಡಿರುವ ಆರೋಪ ಮತ್ತು ಶನಿವಾರ ತಡರಾತ್ರಿ ಉತ್ತರ ಪ್ರದೇಶದ ಮುಜಫರ್​ನಗರದಲ್ಲಿರುವ ತಮ್ಮ ಮಾವನ ಮನೆಗೆ ಬಲವಂತವಾಗಿ ಪ್ರವೇಶಿಸಿರುವ ಆರೋಪದ ಮೇಲೆ ಅರೆಸ್ಟ್​ ಆಗಿದ್ದಾರೆ. ಶೈಲಜಾ ಶರ್ಮಾ ಸದ್ಯ ಉತ್ತರ […]

IAS ಅಧಿಕಾರಿ ಮೇಲೆ ಪತಿಯ ದರ್ಪ: ಬಾಗಿಲು ಮುರಿದವ.. ಕೊನೆಗೆ ಜೈಲುಪಾಲಾದ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
| Edited By: |

Updated on: Aug 04, 2020 | 4:05 PM

Share

ಲಕ್ನೋ: ಪತ್ನಿಯ ಮೇಲೆ ಹಲ್ಲೆ ಹಾಗೂ ಮಾವನ ಮನೆಗೆ ಬಲವಂತವಾಗಿ ನುಗ್ಗಲು ಯತ್ನಿಸಿರುವ ಆರೋಪದಡಿ ಹರಿಯಾಣ ರಾಜ್ಯದ ಗುರುಗ್ರಾಮ್​ನಲ್ಲಿ ಪ್ರಾದೇಶಿಕ ಕಾರ್ಮಿಕ ಇಲಾಖೆಯ ಅಧಿಕಾರಿಯಾಗಿರುವ ರಾಜೀವ್ ನಯನ್​ನನ್ನು ಪೊಲೀಸರು ಬಂಧಿಸಿದ್ದಾರೆ.

2013 ರ ಬ್ಯಾಚ್​ನ IAS ಅಧಿಕಾರಿ ಶೈಲಜಾ ಶರ್ಮಾ ಮೇಲೆ ಪತಿ ರಾಜೀವ್ ನಯನ್ ಹಲ್ಲೆ ಮಾಡಿರುವ ಆರೋಪ ಮತ್ತು ಶನಿವಾರ ತಡರಾತ್ರಿ ಉತ್ತರ ಪ್ರದೇಶದ ಮುಜಫರ್​ನಗರದಲ್ಲಿರುವ ತಮ್ಮ ಮಾವನ ಮನೆಗೆ ಬಲವಂತವಾಗಿ ಪ್ರವೇಶಿಸಿರುವ ಆರೋಪದ ಮೇಲೆ ಅರೆಸ್ಟ್​ ಆಗಿದ್ದಾರೆ. ಶೈಲಜಾ ಶರ್ಮಾ ಸದ್ಯ ಉತ್ತರ ಪ್ರದೇಶದಲ್ಲಿ ಜಂಟಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಶರ್ಮಾ ತನ್ನ ನಾಲ್ಕು ವರ್ಷದ ಮಗಳೊಂದಿಗೆ ಕಳೆದ ಶುಕ್ರವಾರ ತನ್ನ ತವರು ಮನೆಗೆ ಬಂದಿದ್ದರು. ಆಕೆ ನೀಡಿರುವ ದೂರಿನ ಪ್ರಕಾರ, ಪತಿ ರಾಜೀವ್ ನಯನ್ ತನ್ನ ಮಾವನ ಮನೆಗೆ ಬಂದು ಬಾಗಿಲು ತೆರೆಯುವ ಮುನ್ನವೇ ಅದನ್ನ ಮುರಿದು ಹಲ್ಲೆಗೆ ಯತ್ನಿಸಿದ್ದಾರೆ. ಪತ್ನಿಯನ್ನು ರಕ್ಷಿಸಲು ಬಂದ ಆಕೆಯ ಕುಟುಂಬ ಸದಸ್ಯರ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಎಫ್ಐಆರ್​ನಲ್ಲಿ ಉಲ್ಲೇಖಿಸಲಾಗಿದೆ.

ಶರ್ಮಾ ನೀಡಿರುವ ದೂರಿನ್ವಯ ಪೊಲೀಸರು ನಯನ್ ವಿರುದ್ಧ ದೂರು ದಾಖಲಿಸಿಕೊಂಡಿದ್ದರು. ನಯನ್​ರನ್ನ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಇದೀಗ ಜೈಲಿಗೆ ಕಳುಹಿಸಲಾಗಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್