AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆಲಿವರಿಯಾದ 14 ದಿನಗಳಲ್ಲೇ ಡ್ಯೂಟಿಗೆ ಹಾಜರ್​: ಕೂಸೊಂದಿಗೆ ಕಚೇರಿಗೆ ಬಂದ IAS ಅಧಿಕಾರಿ!

ಲಕ್ನೋ: ಕಚೇರಿ ಹಾಗೂ ಕೆಲಸದ ಸ್ಥಳಗಳಲ್ಲಿ ಸಮಾನತೆ ಕಲ್ಪಿಸುವ ನಿಟ್ಟಿನಲ್ಲಿ ಮಹಿಳೆಯರಿಗೆ ನೀಡಲಾದ ಮೊದಲನೇ ಸೌಲಭ್ಯವೆಂದರೆ ಅದು ಹೆರಿಗೆ ರಜೆ. ಅಂತೆಯೇ, ಹೆರಿಗೆ ಹಾಗೂ ನವಜಾತ ಶಿಶುವಿನ ಲಾಲನೆಪಾಲನೆಗಾಗಿ ಮಹಿಳೆಯರಿಗೆ 6 ತಿಂಗಳ ಹೆರಿಗೆ ರಜೆಯನ್ನು ನೀಡಲಾಗುತ್ತದೆ. ಅದರೆ, ಇಲ್ಲೊಬ್ಬರು IAS ಅಧಿಕಾರಿ ತಮಗೆ ನೀಡಲಾಗಿದ್ದ ಹೆರಿಗೆ ರಜೆಯ ಪ್ರಯೋಜನ ಪಡೆಯದೆ ಮಗುವಿಗೆ ಜನ್ಮ ನೀಡಿದ ಕೇವಲ 14 ದಿನಗಳ ಬಳಿಕ ಕರ್ತವ್ಯಕ್ಕೆ ಹಾಜರಾಗಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಹೌದು, ಉತ್ತರ ಪ್ರದೇಶದ ಘಾಜಿಯಾಬಾದ್​ನಲ್ಲಿ ಸದ್ಯ ಕೊವಿಡ್​ […]

ಡೆಲಿವರಿಯಾದ 14 ದಿನಗಳಲ್ಲೇ ಡ್ಯೂಟಿಗೆ ಹಾಜರ್​: ಕೂಸೊಂದಿಗೆ ಕಚೇರಿಗೆ ಬಂದ IAS ಅಧಿಕಾರಿ!
KUSHAL V
|

Updated on:Oct 13, 2020 | 6:48 PM

Share

ಲಕ್ನೋ: ಕಚೇರಿ ಹಾಗೂ ಕೆಲಸದ ಸ್ಥಳಗಳಲ್ಲಿ ಸಮಾನತೆ ಕಲ್ಪಿಸುವ ನಿಟ್ಟಿನಲ್ಲಿ ಮಹಿಳೆಯರಿಗೆ ನೀಡಲಾದ ಮೊದಲನೇ ಸೌಲಭ್ಯವೆಂದರೆ ಅದು ಹೆರಿಗೆ ರಜೆ. ಅಂತೆಯೇ, ಹೆರಿಗೆ ಹಾಗೂ ನವಜಾತ ಶಿಶುವಿನ ಲಾಲನೆಪಾಲನೆಗಾಗಿ ಮಹಿಳೆಯರಿಗೆ 6 ತಿಂಗಳ ಹೆರಿಗೆ ರಜೆಯನ್ನು ನೀಡಲಾಗುತ್ತದೆ. ಅದರೆ, ಇಲ್ಲೊಬ್ಬರು IAS ಅಧಿಕಾರಿ ತಮಗೆ ನೀಡಲಾಗಿದ್ದ ಹೆರಿಗೆ ರಜೆಯ ಪ್ರಯೋಜನ ಪಡೆಯದೆ ಮಗುವಿಗೆ ಜನ್ಮ ನೀಡಿದ ಕೇವಲ 14 ದಿನಗಳ ಬಳಿಕ ಕರ್ತವ್ಯಕ್ಕೆ ಹಾಜರಾಗಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಹೌದು, ಉತ್ತರ ಪ್ರದೇಶದ ಘಾಜಿಯಾಬಾದ್​ನಲ್ಲಿ ಸದ್ಯ ಕೊವಿಡ್​ ನೋಡಲ್​ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ IAS ಅಧಿಕಾರಿ ಸೌಮ್ಯಾ ಪಾಂಡೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಕೇವಲ 14 ದಿನಗಳಲ್ಲಿ ಕೆಲಸಕ್ಕೆ ಹಾಜರಾಗಿದ್ದಾರೆ. ಇದಲ್ಲದೆ, ತಮ್ಮ ನವಜಾತ ಶಿಶುವನ್ನು ತಮ್ಮೊಟ್ಟಿಗೆ ಕಚೇರಿಗೂ ಕರೆತಂದಿದ್ಧಾರೆ.

ಈ ಕುರಿತು ಮಾತನಾಡಿದ ಸೌಮ್ಯಾ ಪಾಂಡೆ ನಾನೊಬ್ಬ IAS ಅಧಿಕಾರಿ. ಹಾಗಾಗಿ, ನನ್ನ ಕರ್ತವ್ಯಕ್ಕೆ ಮೊದಲ ಆದ್ಯತೆ ನೀಡಬೇಕು. ಪ್ರತಿ ತಾಯಿಗೂ ತನ್ನ ಮಗುವಿನ ಲಾಲನೆಪಾಲನೆ ಮಾಡಲು ಆ ದೇವರು ಶಕ್ತಿ ನೀಡಿರುತ್ತಾನೆ. ಗ್ರಾಮೀಣ ಭಾರತದಲ್ಲಂತೂ ಮಹಿಳೆಯರು ಗರ್ಭವತಿ ಆಗಿರುವಾಗಲೂ ಮನೆಗೆಲಸವನ್ನು ಮಾಡಿಕೊಂಡು ತದನಂತರ ಹೆರಿಗೆ ಬಳಿಕವೂ ಹಸುಗೂಸು ಮತ್ತು ಕುಟುಂಬವನ್ನು ಸಂಬಾಳಿಸಿಕೊಂಡು ಹೋಗುತ್ತಾರೆ. ಹಾಗೆಯೇ, ನನಗೂ ನನ್ನ ಕರ್ತವ್ಯ ನಿರ್ವಹಿಸಲು ಆ ದೇವರು ಶಕ್ತಿ ಕೊಟ್ಟಿದ್ದಾನೆ ಎಂದು ಹೇಳಿದ್ದಾರೆ.

ಜೊತೆಗೆ, ನನ್ನ ಬೆನ್ನಿಗೆ ನಿಂತ ಜಿಲ್ಲಾಡಳಿತಕ್ಕೆ ಹಾಗೂ ನನ್ನ ಸಿಬ್ಬಂದಿಗೆ ನಾನು ಕೃತಜ್ಞಳಾಗಿರುವೆ ಎಂದು ಹೇಳಿದ್ದಾರೆ. ಸೌಮ್ಯಾ ತಮ್ಮ ಆಪರೇಷನ್​ ಸಂದರ್ಭದಲ್ಲಿ 22 ದಿನಗಳ ಕಾಲ ಹಾಗೂ ಹೆರಿಗೆ ಬಳಿಕ ಎರಡು ವಾರಗಳ ರಜೆ ಪಡೆದಿದ್ದರು.

Published On - 6:37 pm, Tue, 13 October 20

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ