AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆಲಿವರಿಯಾದ 14 ದಿನಗಳಲ್ಲೇ ಡ್ಯೂಟಿಗೆ ಹಾಜರ್​: ಕೂಸೊಂದಿಗೆ ಕಚೇರಿಗೆ ಬಂದ IAS ಅಧಿಕಾರಿ!

ಲಕ್ನೋ: ಕಚೇರಿ ಹಾಗೂ ಕೆಲಸದ ಸ್ಥಳಗಳಲ್ಲಿ ಸಮಾನತೆ ಕಲ್ಪಿಸುವ ನಿಟ್ಟಿನಲ್ಲಿ ಮಹಿಳೆಯರಿಗೆ ನೀಡಲಾದ ಮೊದಲನೇ ಸೌಲಭ್ಯವೆಂದರೆ ಅದು ಹೆರಿಗೆ ರಜೆ. ಅಂತೆಯೇ, ಹೆರಿಗೆ ಹಾಗೂ ನವಜಾತ ಶಿಶುವಿನ ಲಾಲನೆಪಾಲನೆಗಾಗಿ ಮಹಿಳೆಯರಿಗೆ 6 ತಿಂಗಳ ಹೆರಿಗೆ ರಜೆಯನ್ನು ನೀಡಲಾಗುತ್ತದೆ. ಅದರೆ, ಇಲ್ಲೊಬ್ಬರು IAS ಅಧಿಕಾರಿ ತಮಗೆ ನೀಡಲಾಗಿದ್ದ ಹೆರಿಗೆ ರಜೆಯ ಪ್ರಯೋಜನ ಪಡೆಯದೆ ಮಗುವಿಗೆ ಜನ್ಮ ನೀಡಿದ ಕೇವಲ 14 ದಿನಗಳ ಬಳಿಕ ಕರ್ತವ್ಯಕ್ಕೆ ಹಾಜರಾಗಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಹೌದು, ಉತ್ತರ ಪ್ರದೇಶದ ಘಾಜಿಯಾಬಾದ್​ನಲ್ಲಿ ಸದ್ಯ ಕೊವಿಡ್​ […]

ಡೆಲಿವರಿಯಾದ 14 ದಿನಗಳಲ್ಲೇ ಡ್ಯೂಟಿಗೆ ಹಾಜರ್​: ಕೂಸೊಂದಿಗೆ ಕಚೇರಿಗೆ ಬಂದ IAS ಅಧಿಕಾರಿ!
KUSHAL V
|

Updated on:Oct 13, 2020 | 6:48 PM

Share

ಲಕ್ನೋ: ಕಚೇರಿ ಹಾಗೂ ಕೆಲಸದ ಸ್ಥಳಗಳಲ್ಲಿ ಸಮಾನತೆ ಕಲ್ಪಿಸುವ ನಿಟ್ಟಿನಲ್ಲಿ ಮಹಿಳೆಯರಿಗೆ ನೀಡಲಾದ ಮೊದಲನೇ ಸೌಲಭ್ಯವೆಂದರೆ ಅದು ಹೆರಿಗೆ ರಜೆ. ಅಂತೆಯೇ, ಹೆರಿಗೆ ಹಾಗೂ ನವಜಾತ ಶಿಶುವಿನ ಲಾಲನೆಪಾಲನೆಗಾಗಿ ಮಹಿಳೆಯರಿಗೆ 6 ತಿಂಗಳ ಹೆರಿಗೆ ರಜೆಯನ್ನು ನೀಡಲಾಗುತ್ತದೆ. ಅದರೆ, ಇಲ್ಲೊಬ್ಬರು IAS ಅಧಿಕಾರಿ ತಮಗೆ ನೀಡಲಾಗಿದ್ದ ಹೆರಿಗೆ ರಜೆಯ ಪ್ರಯೋಜನ ಪಡೆಯದೆ ಮಗುವಿಗೆ ಜನ್ಮ ನೀಡಿದ ಕೇವಲ 14 ದಿನಗಳ ಬಳಿಕ ಕರ್ತವ್ಯಕ್ಕೆ ಹಾಜರಾಗಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಹೌದು, ಉತ್ತರ ಪ್ರದೇಶದ ಘಾಜಿಯಾಬಾದ್​ನಲ್ಲಿ ಸದ್ಯ ಕೊವಿಡ್​ ನೋಡಲ್​ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ IAS ಅಧಿಕಾರಿ ಸೌಮ್ಯಾ ಪಾಂಡೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಕೇವಲ 14 ದಿನಗಳಲ್ಲಿ ಕೆಲಸಕ್ಕೆ ಹಾಜರಾಗಿದ್ದಾರೆ. ಇದಲ್ಲದೆ, ತಮ್ಮ ನವಜಾತ ಶಿಶುವನ್ನು ತಮ್ಮೊಟ್ಟಿಗೆ ಕಚೇರಿಗೂ ಕರೆತಂದಿದ್ಧಾರೆ.

ಈ ಕುರಿತು ಮಾತನಾಡಿದ ಸೌಮ್ಯಾ ಪಾಂಡೆ ನಾನೊಬ್ಬ IAS ಅಧಿಕಾರಿ. ಹಾಗಾಗಿ, ನನ್ನ ಕರ್ತವ್ಯಕ್ಕೆ ಮೊದಲ ಆದ್ಯತೆ ನೀಡಬೇಕು. ಪ್ರತಿ ತಾಯಿಗೂ ತನ್ನ ಮಗುವಿನ ಲಾಲನೆಪಾಲನೆ ಮಾಡಲು ಆ ದೇವರು ಶಕ್ತಿ ನೀಡಿರುತ್ತಾನೆ. ಗ್ರಾಮೀಣ ಭಾರತದಲ್ಲಂತೂ ಮಹಿಳೆಯರು ಗರ್ಭವತಿ ಆಗಿರುವಾಗಲೂ ಮನೆಗೆಲಸವನ್ನು ಮಾಡಿಕೊಂಡು ತದನಂತರ ಹೆರಿಗೆ ಬಳಿಕವೂ ಹಸುಗೂಸು ಮತ್ತು ಕುಟುಂಬವನ್ನು ಸಂಬಾಳಿಸಿಕೊಂಡು ಹೋಗುತ್ತಾರೆ. ಹಾಗೆಯೇ, ನನಗೂ ನನ್ನ ಕರ್ತವ್ಯ ನಿರ್ವಹಿಸಲು ಆ ದೇವರು ಶಕ್ತಿ ಕೊಟ್ಟಿದ್ದಾನೆ ಎಂದು ಹೇಳಿದ್ದಾರೆ.

ಜೊತೆಗೆ, ನನ್ನ ಬೆನ್ನಿಗೆ ನಿಂತ ಜಿಲ್ಲಾಡಳಿತಕ್ಕೆ ಹಾಗೂ ನನ್ನ ಸಿಬ್ಬಂದಿಗೆ ನಾನು ಕೃತಜ್ಞಳಾಗಿರುವೆ ಎಂದು ಹೇಳಿದ್ದಾರೆ. ಸೌಮ್ಯಾ ತಮ್ಮ ಆಪರೇಷನ್​ ಸಂದರ್ಭದಲ್ಲಿ 22 ದಿನಗಳ ಕಾಲ ಹಾಗೂ ಹೆರಿಗೆ ಬಳಿಕ ಎರಡು ವಾರಗಳ ರಜೆ ಪಡೆದಿದ್ದರು.

Published On - 6:37 pm, Tue, 13 October 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್