AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆಲಿವರಿಯಾದ 14 ದಿನಗಳಲ್ಲೇ ಡ್ಯೂಟಿಗೆ ಹಾಜರ್​: ಕೂಸೊಂದಿಗೆ ಕಚೇರಿಗೆ ಬಂದ IAS ಅಧಿಕಾರಿ!

ಲಕ್ನೋ: ಕಚೇರಿ ಹಾಗೂ ಕೆಲಸದ ಸ್ಥಳಗಳಲ್ಲಿ ಸಮಾನತೆ ಕಲ್ಪಿಸುವ ನಿಟ್ಟಿನಲ್ಲಿ ಮಹಿಳೆಯರಿಗೆ ನೀಡಲಾದ ಮೊದಲನೇ ಸೌಲಭ್ಯವೆಂದರೆ ಅದು ಹೆರಿಗೆ ರಜೆ. ಅಂತೆಯೇ, ಹೆರಿಗೆ ಹಾಗೂ ನವಜಾತ ಶಿಶುವಿನ ಲಾಲನೆಪಾಲನೆಗಾಗಿ ಮಹಿಳೆಯರಿಗೆ 6 ತಿಂಗಳ ಹೆರಿಗೆ ರಜೆಯನ್ನು ನೀಡಲಾಗುತ್ತದೆ. ಅದರೆ, ಇಲ್ಲೊಬ್ಬರು IAS ಅಧಿಕಾರಿ ತಮಗೆ ನೀಡಲಾಗಿದ್ದ ಹೆರಿಗೆ ರಜೆಯ ಪ್ರಯೋಜನ ಪಡೆಯದೆ ಮಗುವಿಗೆ ಜನ್ಮ ನೀಡಿದ ಕೇವಲ 14 ದಿನಗಳ ಬಳಿಕ ಕರ್ತವ್ಯಕ್ಕೆ ಹಾಜರಾಗಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಹೌದು, ಉತ್ತರ ಪ್ರದೇಶದ ಘಾಜಿಯಾಬಾದ್​ನಲ್ಲಿ ಸದ್ಯ ಕೊವಿಡ್​ […]

ಡೆಲಿವರಿಯಾದ 14 ದಿನಗಳಲ್ಲೇ ಡ್ಯೂಟಿಗೆ ಹಾಜರ್​: ಕೂಸೊಂದಿಗೆ ಕಚೇರಿಗೆ ಬಂದ IAS ಅಧಿಕಾರಿ!
KUSHAL V
|

Updated on:Oct 13, 2020 | 6:48 PM

Share

ಲಕ್ನೋ: ಕಚೇರಿ ಹಾಗೂ ಕೆಲಸದ ಸ್ಥಳಗಳಲ್ಲಿ ಸಮಾನತೆ ಕಲ್ಪಿಸುವ ನಿಟ್ಟಿನಲ್ಲಿ ಮಹಿಳೆಯರಿಗೆ ನೀಡಲಾದ ಮೊದಲನೇ ಸೌಲಭ್ಯವೆಂದರೆ ಅದು ಹೆರಿಗೆ ರಜೆ. ಅಂತೆಯೇ, ಹೆರಿಗೆ ಹಾಗೂ ನವಜಾತ ಶಿಶುವಿನ ಲಾಲನೆಪಾಲನೆಗಾಗಿ ಮಹಿಳೆಯರಿಗೆ 6 ತಿಂಗಳ ಹೆರಿಗೆ ರಜೆಯನ್ನು ನೀಡಲಾಗುತ್ತದೆ. ಅದರೆ, ಇಲ್ಲೊಬ್ಬರು IAS ಅಧಿಕಾರಿ ತಮಗೆ ನೀಡಲಾಗಿದ್ದ ಹೆರಿಗೆ ರಜೆಯ ಪ್ರಯೋಜನ ಪಡೆಯದೆ ಮಗುವಿಗೆ ಜನ್ಮ ನೀಡಿದ ಕೇವಲ 14 ದಿನಗಳ ಬಳಿಕ ಕರ್ತವ್ಯಕ್ಕೆ ಹಾಜರಾಗಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಹೌದು, ಉತ್ತರ ಪ್ರದೇಶದ ಘಾಜಿಯಾಬಾದ್​ನಲ್ಲಿ ಸದ್ಯ ಕೊವಿಡ್​ ನೋಡಲ್​ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ IAS ಅಧಿಕಾರಿ ಸೌಮ್ಯಾ ಪಾಂಡೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಕೇವಲ 14 ದಿನಗಳಲ್ಲಿ ಕೆಲಸಕ್ಕೆ ಹಾಜರಾಗಿದ್ದಾರೆ. ಇದಲ್ಲದೆ, ತಮ್ಮ ನವಜಾತ ಶಿಶುವನ್ನು ತಮ್ಮೊಟ್ಟಿಗೆ ಕಚೇರಿಗೂ ಕರೆತಂದಿದ್ಧಾರೆ.

ಈ ಕುರಿತು ಮಾತನಾಡಿದ ಸೌಮ್ಯಾ ಪಾಂಡೆ ನಾನೊಬ್ಬ IAS ಅಧಿಕಾರಿ. ಹಾಗಾಗಿ, ನನ್ನ ಕರ್ತವ್ಯಕ್ಕೆ ಮೊದಲ ಆದ್ಯತೆ ನೀಡಬೇಕು. ಪ್ರತಿ ತಾಯಿಗೂ ತನ್ನ ಮಗುವಿನ ಲಾಲನೆಪಾಲನೆ ಮಾಡಲು ಆ ದೇವರು ಶಕ್ತಿ ನೀಡಿರುತ್ತಾನೆ. ಗ್ರಾಮೀಣ ಭಾರತದಲ್ಲಂತೂ ಮಹಿಳೆಯರು ಗರ್ಭವತಿ ಆಗಿರುವಾಗಲೂ ಮನೆಗೆಲಸವನ್ನು ಮಾಡಿಕೊಂಡು ತದನಂತರ ಹೆರಿಗೆ ಬಳಿಕವೂ ಹಸುಗೂಸು ಮತ್ತು ಕುಟುಂಬವನ್ನು ಸಂಬಾಳಿಸಿಕೊಂಡು ಹೋಗುತ್ತಾರೆ. ಹಾಗೆಯೇ, ನನಗೂ ನನ್ನ ಕರ್ತವ್ಯ ನಿರ್ವಹಿಸಲು ಆ ದೇವರು ಶಕ್ತಿ ಕೊಟ್ಟಿದ್ದಾನೆ ಎಂದು ಹೇಳಿದ್ದಾರೆ.

ಜೊತೆಗೆ, ನನ್ನ ಬೆನ್ನಿಗೆ ನಿಂತ ಜಿಲ್ಲಾಡಳಿತಕ್ಕೆ ಹಾಗೂ ನನ್ನ ಸಿಬ್ಬಂದಿಗೆ ನಾನು ಕೃತಜ್ಞಳಾಗಿರುವೆ ಎಂದು ಹೇಳಿದ್ದಾರೆ. ಸೌಮ್ಯಾ ತಮ್ಮ ಆಪರೇಷನ್​ ಸಂದರ್ಭದಲ್ಲಿ 22 ದಿನಗಳ ಕಾಲ ಹಾಗೂ ಹೆರಿಗೆ ಬಳಿಕ ಎರಡು ವಾರಗಳ ರಜೆ ಪಡೆದಿದ್ದರು.

Published On - 6:37 pm, Tue, 13 October 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ