AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾಂಗ್​ಸ್ಟರ್​ ಜತೆ ಓಡಿ ಹೋಗಿದ್ದ ಐಎಎಸ್​ ಅಧಿಕಾರಿ ಪತ್ನಿ ಮನೆಗೆ ವಾಪಸ್​ ಆಗಿ ಆತ್ಮಹತ್ಯೆಗೆ ಶರಣು

9 ತಿಂಗಳ ಹಿಂದೆ ಗ್ಯಾಂಗ್​ಸ್ಟರ್​ ಜತೆಗೆ ಓಡಿಹೋಗಿದ್ದ ಐಎಎಸ್​ ಅಧಿಕಾರಿ ಪತ್ನಿ ಇದೀಗ ಮನೆಗೆ ಬಂದು ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಆಕೆ ಬಾಲಕನೊಬ್ಬನ ಅಪಹರಣ ಪ್ರಕರಣದಲ್ಲಿ ಭಾಗಿಯಾಗಿದ್ದಾಳೆ ಎನ್ನಲಾಗಿದೆ.

ಗ್ಯಾಂಗ್​ಸ್ಟರ್​ ಜತೆ ಓಡಿ ಹೋಗಿದ್ದ ಐಎಎಸ್​ ಅಧಿಕಾರಿ ಪತ್ನಿ ಮನೆಗೆ ವಾಪಸ್​ ಆಗಿ ಆತ್ಮಹತ್ಯೆಗೆ ಶರಣು
ಸಾವು-ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on: Jul 23, 2024 | 10:32 AM

Share

ಗ್ಯಾಂಗ್​ಸ್ಟರ್​ನನ್ನು ಪ್ರೀತಿಸಿ ಓಡಿ ಹೋಗಿದ್ದ ಐಎಎಸ್​ ಅಧಿಕಾರಿ ಪತ್ನಿ ಮನೆಗೆ ವಾಪಸಾದ ಬಳಿಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಗ್ಯಾಂಗ್​ಸ್ಟರ್​ ಜತೆ ಓಡಿ ಹೋಗಿದ್ದ ಸೂರ್ಯ ಜೈ ಮಹಿಳೆ 9 ತಿಂಗಳ ಬಳಿಕ ಹಿಂದಿರುಗಿದ್ದಳು, ಆತ್ಮಹತ್ಯೆಗೆ ಯತ್ನಿಸಿದ್ದಳು, ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಪತಿ ರಂಜಿತ್ ಕುಮಾರ್ ತನ್ನ ಮನೆಯ ಸಿಬ್ಬಂದಿಗೆ ತನ್ನ ಹೆಂಡತಿಯನ್ನು ಮನೆಗೆ ಪ್ರವೇಶಿಸಲು ಬಿಡಬೇಡಿ ಎಂದು ಹೇಳಿದ್ದರು. ಪೊಲೀಸರ ಪ್ರಕಾರ, ಮಹಿಳೆ ಮಕ್ಕಳ ಅಪಹರಣ ಪ್ರಕರಣದಲ್ಲಿ ಭಾಗಿಯಾಗಿದ್ದಾಳೆ.

ಕಳೆದ ವರ್ಷದಿಂದ ದಂಪತಿ ಪ್ರತ್ಯೇಕವಾಗಿ ವಾಸಿಸುತ್ತಿದ್ದು, ವಿಚ್ಛೇದನ ಪ್ರಕ್ರಿಯೆ ನಡೆಯುತ್ತಿದೆ ಎಂದು ರಂಜಿತ್ ಕುಮಾರ್ ಪರ ವಕೀಲ ಹಿತೇಶ್ ಗುಪ್ತಾ ಹೇಳಿದ್ದಾರೆ. ಅದೇ ಸಮಯದಲ್ಲಿ, ವಿಚ್ಛೇದನ ಅರ್ಜಿಯನ್ನು ಅಂತಿಮಗೊಳಿಸಲು ರಂಜಿತ್ ಕುಮಾರ್ ಶನಿವಾರ ಹೊರಗೆ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮನೆಯೊಳಗೆ ಹೋಗಲು ಬಿಡದಿದ್ದಕ್ಕೆ ಮನನೊಂದ ಪತ್ನಿ ವಿಷ ಸೇವಿಸಿ ಆಂಬ್ಯುಲೆನ್ಸ್ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದ್ದಾರೆ.

ಮತ್ತಷ್ಟು ಓದಿ: ಬಸ್​ಗೆ ಕಾಯ್ತಿದ್ದ ವಿದ್ಯಾರ್ಥಿನಿ ಅಪಹರಣ: ನಾಲ್ವರು ಯುವಕರಿಂದ ಕಿಡ್ನ್ಯಾಪ್‌ ಆರೋಪ

ಮಧುರೈನಲ್ಲಿ 14 ವರ್ಷದ ಮಗುವಿನ ಅಪಹರಣ ಪ್ರಕರಣದಲ್ಲಿ ತಮಿಳುನಾಡು ಪೊಲೀಸರಿಂದ ಬಂಧನವನ್ನು ತಪ್ಪಿಸಲು ಸೂರ್ಯ ತನ್ನ ಗಂಡನ ಮನೆಗೆ ಮರಳಿರಬಹುದು ಎಂದು ಮೂಲಗಳು ಹೇಳುತ್ತಿವೆ.

ತಮಿಳಿನಲ್ಲಿ ಬರೆದಿರುವ ಆತ್ಮಹತ್ಯಾ ಪತ್ರವೂ ಪೊಲೀಸರಿಗೆ ಸಿಕ್ಕಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಮಾಹಿತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ.

ಆಕೆ ಜುಲೈ 11 ರಂದು ಮಗುವೊಂದನ್ನು ಅಪಹರಿಸಿ 2 ಕೋಟಿ ರೂ. ಬೇಡಿಕೆ ಇಟ್ಟಿದ್ದಳು, ಆದರೆ ಮಧುರೈ ಪೊಲೀಸರು ಬಾಲಕನನ್ನು ಕಾಪಾಡುವಲ್ಲಿ ಯಶಸ್ವಿಯಾಗಿದ್ದರು. ಇದಾದ ನಂತರ ಪೊಲೀಸರು ಸೂರ್ಯ ಸೇರಿದಂತೆ ಭಾಗಿಯಾದವರಿಗಾಗಿ ಹುಡುಕಾಟ ಆರಂಭಿಸಿದ್ದರು. ಇದೇ ವೇಳೆ ಮಹಿಳೆಯ ಪತಿ ಶವ ಸ್ವೀಕರಿಸಲು ನಿರಾಕರಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ