AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಪರೀಕ್ಷೆಯನ್ನು ಮನೆಯಲ್ಲಿ ನಾವೇ ಮಾಡಿಕೊಳ್ಳಬಹುದು; ಐಸಿಎಂಆರ್​ನಿಂದ ಬಿಡುಗಡೆಯಾಯ್ತು ಹೊಸ ಕಿಟ್

ಸ್ವತಃ ನಮಗೆ ನಾವೇ ಕೊವಿಡ್-19 ಪರೀಕ್ಷೆ ಮಾಡಿಕೊಳ್ಳಬಹುದಾದ ಕೊವಿಸೆಲ್ಫ್ ಎಂಬ ಕಿಟ್ ಒಂದನ್ನು ಐಸಿಎಂಆರ್ ಅನುಮೋದಿಸಿದೆ. ಈ ವಿಧಾನದ ಪರೀಕ್ಷೆಗೆ ಕೇವಲ ಮೂಗಿನ ದ್ರವ ಮಾತ್ರ ಅಗತ್ಯವಾಗಿದೆ.

ಕೊವಿಡ್ ಪರೀಕ್ಷೆಯನ್ನು ಮನೆಯಲ್ಲಿ ನಾವೇ ಮಾಡಿಕೊಳ್ಳಬಹುದು; ಐಸಿಎಂಆರ್​ನಿಂದ ಬಿಡುಗಡೆಯಾಯ್ತು ಹೊಸ ಕಿಟ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 21, 2021 | 10:09 AM

Share

ದೆಹಲಿ: ಕೊವಿಡ್-19 ಪರೀಕ್ಷೆಯನ್ನು ನಮಗೆ ನಾವೇ ಮಾಡಿಕೊಳ್ಳಬಹುದು. ಯಾವುದೇ ವೈದ್ಯಕೀಯ ಸಿಬ್ಬಂದಿಯ ಇರುವಿಕೆಯ ಹೊರತಾಗಿ, ಕೊರೊನಾ ಪರೀಕ್ಷೆಯನ್ನು ನಾವೇ ಮಾಡಿಕೊಳ್ಳಬಹುದು. ಈ ನೂತನ ವ್ಯವಸ್ಥೆಗೆ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ಇಂದು (ಮೇ 19) ಸೂಚನೆ ನೀಡಿದೆ. ನಮಗೆ ನಾವೇ ಕೊರೊನಾ ಪರೀಕ್ಷೆ ನಡೆಸುವುದು ಹೇಗೆ ಎಂಬ ಬಗ್ಗೆ ಸೂಚನೆ ನೀಡಿದ ಐಸಿಎಂಆರ್ ಕೊವಿಸೆಲ್ಫ್ ಎಂಬ ಕಿಟ್​ನ ಬಗ್ಗೆ ವಿವರಣೆ ನೀಡಿದೆ.

ಸ್ವತಃ ನಮಗೆ ನಾವೇ ಕೊವಿಡ್-19 ಪರೀಕ್ಷೆ ಮಾಡಿಕೊಳ್ಳಬಹುದಾದ ಕೊವಿಸೆಲ್ಫ್ ಎಂಬ ಕಿಟ್ ಒಂದನ್ನು ಐಸಿಎಂಆರ್ ಅನುಮೋದಿಸಿದೆ. ಈ ವಿಧಾನದ ಪರೀಕ್ಷೆಗೆ ಕೇವಲ ಮೂಗಿನ ದ್ರವ ಮಾತ್ರ ಅಗತ್ಯವಾಗಿದೆ. ಈ ವಿಧಾನದ ಮೂಲಕ ರ್ಯಾಪಿಡ್ ಆಂಟಿಜೆನ್ ಪರೀಕ್ಷೆ ಮಾಡಿಕೊಳ್ಳಬಹುದಾಗಿದೆ.

ಕೊವಿಸೆಲ್ಫ್ ವಿಧಾನದ ಮೂಲಕ 18 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟವರು ತಮಗೆ ತಾವೇ ಪರೀಕ್ಷೆ ಮಾಡಿಕೊಳ್ಳಬಹುದಾಗಿದೆ. 2 ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಹಿರಿಯರ ಸಹಾಯದಿಂದ ಈ ಪರೀಕ್ಷೆಯನ್ನು ಮನೆಯಲ್ಲೇ ಮಾಡಿಕೊಳ್ಳಬಹುದಾಗಿದೆ.

ಈ ಕಿಟ್ ಲಭ್ಯವಿದೆ ಎಂದು ಎಲ್ಲರೂ ಬೇಕಾಬಿಟ್ಟಿ ಈ ವಿಧಾನ ಬಳಸುವಂತಿಲ್ಲ. ಬದಲಾಗಿ, ಯಾರಲ್ಲಿ ಕೊರೊನಾ ಲಕ್ಷಣ ಇದೆ ಮತ್ತು ಯಾರು ಕೊರೊನಾ ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿದ್ದಾರೆಯೋ ಅಂಥವರು ಈ ವಿಧಾನದ ಮೂಲಕ ಕೊರೊನಾ ಪರೀಕ್ಷೆ ಮಾಡಿಕೊಳ್ಳಬಹುದಾಗಿದೆ.

ಕೊವಿಸೆಲ್ಫ್ ಕಿಟ್​ನ್ನು ಬಳಸುವುದು ಹೇಗೆ? ಕೊವಿಸೆಲ್ಫ್ ಕಿಟ್​ನೊಂದಿಗೆ ಅದರ ಮೂಲಕ ಕೊರೊನಾ ಪರೀಕ್ಷೆ ನಡೆಸುವ ವಿಧಾನದ ವಿವರಣೆ ಇರುವ ಮ್ಯಾನುವಲ್ ಕೂಡ ಲಭ್ಯವಿರಲಿದೆ. ಹೆಚ್ಚುವರಿಯಾಗಿ ಐಸಿಎಮ್​ಆರ್, ಪರೀಕ್ಷೆ ನಡೆಸಬೇಕಾದ ವಿಧಾನದ ಹಂತವನ್ನು ವಿಡಿಯೋ ಮೂಲಕವೂ ವಿವರಿಸಿದೆ.

ಈ ಕಿಟ್​ನಲ್ಲಿ ಮೂಗಿನ ದ್ರವ ಸಂಗ್ರಹಿಸುವ ಉಪಕರಣ, ಎಕ್ಸ್​ಟ್ರಾಕ್ಷನ್ ಟ್ಯೂಬ್ ಮತ್ತು ಒಂದು ಟೆಸ್ಟ್ ಕಾರ್ಡ್ ಹೊಂದಿರುವ ಪೌಚ್ ಇರಲಿದೆ.

ಕೊವಿಸೆಲ್ಫ್ ಮೂಲಕ ಪರೀಕ್ಷೆ ನಡೆಸಲು, ಬಳಕೆದಾರರು ಮೈಲ್ಯಾಬ್ (mylab) ಅಪ್ಲಿಕೇಷನ್​ನ್ನು ತಮ್ಮ ಮೊಬೈಲ್​ನಲ್ಲಿ ಹೊಂದಿರಬೇಕಿದೆ. ಮೂಗಿನ ದ್ರವ ಪಡೆದು ಟ್ಯೂಬ್​ಗೆ ಅದನ್ನು ಹಾಕಬೇಕು. ಟ್ಯೂಬ್​ನಲ್ಲಿ ಮೂಗಿನ ದ್ರವ ಇಳಿದುಕೊಳ್ಳುವಂತೆ ನೋಡಿಕೊಳ್ಳಬೇಕು.

ಇದನ್ನೂ ಓದಿ: ಕೊವಿಶೀಲ್ಡ್ ಲಸಿಕೆ ಪಡೆದ ಬಳಿಕ ಈ ಸಮಸ್ಯೆಗಳು ಕಂಡುಬಂದರೆ ಎಚ್ಚರವಹಿಸಿ; ಕೇಂದ್ರ ಆರೋಗ್ಯ ಇಲಾಖೆ ಸೂಚನೆ

Covid Vaccine Guidelines ಕೊವಿಡ್​ನಿಂದ ಚೇತರಿಸಿಕೊಂಡವರು ಮೂರು ತಿಂಗಳ ನಂತರ ಲಸಿಕೆ ತೆಗೆದುಕೊಂಡರೆ ಸಾಕು: ಕೇಂದ್ರ

Published On - 11:27 pm, Wed, 19 May 21

Follow Us
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!