AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಚಿಕಿತ್ಸಾ ಗೈಡ್‌ಲೈನ್ಸ್‌ನಿಂದ ಪ್ಲಾಸ್ಮಾ ಥೆರಪಿ ಹೊರಕ್ಕೆ: ಐಸಿಎಂಆರ್‌ ಆದೇಶ

ಕೊರೊನಾ ಚಿಕಿತ್ಸೆಯಲ್ಲಿ ಪ್ಲಾಸ್ಮಾ ಥೆರಪಿ ವಿಧಾನವನ್ನ ಕೈಬಿಟ್ಟು ಐಸಿಎಂಆರ್‌ ಆದೇಶ ಹೊರಡಿಸಿದೆ. ಅದರಂತೆ ಕೊವಿಡ್-19 ಚಿಕಿತ್ಸಾ ಗೈಡ್​ಲೈನ್ಸ್​ನಿಂದ ಪ್ಲಾಸ್ಮಾ ಥೆರಪಿ ತೆಗಯಲಾಗಿದೆ.

ಕೊವಿಡ್ ಚಿಕಿತ್ಸಾ ಗೈಡ್‌ಲೈನ್ಸ್‌ನಿಂದ ಪ್ಲಾಸ್ಮಾ ಥೆರಪಿ ಹೊರಕ್ಕೆ: ಐಸಿಎಂಆರ್‌ ಆದೇಶ
ಪ್ಲಾಸ್ಮಾ ಚಿಕಿತ್ಸೆ
TV9 Web
| Edited By: |

Updated on:Aug 21, 2021 | 10:13 AM

Share

ದೆಹಲಿ: ಕೊರೊನಾ ಚಿಕಿತ್ಸೆಯಲ್ಲಿ ಪ್ಲಾಸ್ಮಾ ಥೆರಪಿ ವಿಧಾನವನ್ನ ಕೈಬಿಟ್ಟು ಐಸಿಎಂಆರ್‌ ಆದೇಶ ಹೊರಡಿಸಿದೆ. ಅದರಂತೆ ಕೊವಿಡ್-19 ಚಿಕಿತ್ಸಾ ಗೈಡ್​ಲೈನ್ಸ್​ನಿಂದ ಪ್ಲಾಸ್ಮಾ ಥೆರಪಿ ತೆಗಯಲಾಗಿದೆ. ನಮ್ಮ ದೇಶದಲ್ಲಿ ಕೊರೊನಾ ರೋಗಿಗಳ ಚಿಕಿತ್ಸೆಗೆ ಬಳಸುತ್ತಿರುವ ಪ್ಲಾಸ್ಮಾ ಥೆರಪಿಯಿಂದ ಅವರ ಜೀವ ಉಳಿಸಲು ಸಾಧ್ಯವೇ ಇಲ್ಲ. ಹೀಗಾಗಿ, ಸದ್ಯದಲ್ಲೇ ನಮ್ಮ ದೇಶದಲ್ಲಿ ಕೊರೊನಾ ರೋಗಿಗಳ ಚಿಕಿತ್ಸಾ ಮಾರ್ಗಸೂಚಿಯಲ್ಲಿ ಬದಲಾವಣೆ ಆಗಲಿದೆ. ಪ್ಲಾಸ್ಮಾ ಥೆರಪಿಯನ್ನು ನಿಲ್ಲಿಸಲು ಸೂಚಿಸಿ ಹೊಸ ಮಾರ್ಗಸೂಚಿಯನ್ನು ಐಸಿಎಂಆರ್ ಹೊರಡಿಸಲಿದೆ ಎಂದು ಹೇಳಲಾಗಿತ್ತು.

ಭಾರತದಲ್ಲಿ ಕೊರೊನಾ ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆಗೆಳಲ್ಲಿ ಪ್ಲಾಸ್ಮಾ ಥೆರಪಿ ಸಹ ಒಂದಾಗಿತ್ತು. ಪ್ಲಾಸ್ಮಾ ಥೆರಪಿಯಿಂದ ಗಂಭೀರ ಸ್ಥಿತಿಯಲ್ಲಿರುವ ಕೊರೊನಾ ರೋಗಿಗಳ ಪ್ರಾಣ ಉಳಿಸಬಹುದೆಂದು ವೈದ್ಯರು ಈ ಚಿಕಿತ್ಸೆಯನ್ನು ನೀಡುತ್ತಿದ್ದರು. ಕೇಂದ್ರ ಸರ್ಕಾರ ಕೂಡ ಪ್ಲಾಸ್ಮಾ ಥೆರಪಿಯನ್ನು ಕೊರೊನಾ ರೋಗಿಗಳ ವೈದ್ಯಕೀಯ ಚಿಕಿತ್ಸೆಯ ಮಾರ್ಗಸೂಚಿಯಲ್ಲಿ ಸೇರಿಸಿತ್ತು.

ಗಂಭೀರ ಸ್ಥಿತಿಯಲ್ಲಿರುವ ರೋಗಿಗಳಿಗೆ ಕೊರೊನಾದಿಂದ ಗುಣಮುಖರಾದ ವ್ಯಕ್ತಿಗಳ ರಕ್ತದ ಪ್ಲಾಸ್ಮಾವನ್ನು ಸಂಗ್ರಹಿಸಿ ಪ್ಲಾಸ್ಮಾ ಥೆರಪಿ ನೀಡಲು ಸರ್ಕಾರ ಒಪ್ಪಿಗೆ ನೀಡಿತ್ತು. ಕಳೆದೊಂದು ವರ್ಷದಿಂದ ನಮ್ಮ ದೇಶ ಹಾಗೂ ವಿದೇಶಗಳಲ್ಲೂ ಕೂಡ ಕೊರೊನಾ ರೋಗಿಗಳಿಗೆ ಪ್ಲಾಸ್ಮಾ ಥೆರಪಿ ನೀಡಲಾಗುತ್ತಿತ್ತು. ಚೀನಾ, ಇಂಗ್ಲೆಂಡ್, ಆಮೆರಿಕಾ ಸೇರಿದಂತೆ ಬಹುತೇಕ ದೇಶಗಳಲ್ಲಿ ಕೊರೊನಾ ರೋಗಿಗಳ ಜೀವ ಉಳಿಸಲು ಅಂತಿಮ ಅಸ್ತ್ರವಾಗಿ ವೈದ್ಯರು ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡುತ್ತಿದ್ದರು. ನಮ್ಮ ದೇಶದಲ್ಲೂ ಕೊರೊನಾದಿಂದ ಗುಣಮುಖರಾದವರು ಬೇರೆಯವರ ಜೀವ ಉಳಿಸಲು ಪ್ಲಾಸ್ಮಾ ಥೆರಪಿಗಾಗಿ ಪ್ಲಾಸ್ಮಾ ದಾನ ಮಾಡುವುದನ್ನು ಪೋತ್ಸಾಹಿಸಲಾಗುತ್ತಿತ್ತು. ದೆಹಲಿ ಸರ್ಕಾರ ಪ್ಲಾಸ್ಮಾ ದಾನ ಮಾಡಿದವರಿಗೆ ಮೆಚ್ಚುಗೆಯ ಸರ್ಟಿಫಿಕೇಟ್ ನೀಡಿ ಪೋತ್ಸಾಹಿಸುತ್ತಿತ್ತು. ಆದರೆ ಈಗ, ಐಸಿಎಂಆರ್‌ ಆದೇಶದಂತೆ ಕೊವಿಡ್ ಚಿಕಿತ್ಸಾ ಗೈಡ್‌ಲೈನ್ಸ್‌ನಿಂದ ಪ್ಲಾಸ್ಮಾ ಥೆರಪಿಯನ್ನು ತೆಗೆಯಲಾಗಿದೆ.

ಇದನ್ನೂ ಓದಿ: ಐಸಿಎಮ್ಆರ್ ತಜ್ಞರ ಪ್ರಕಾರ ಪ್ಲಾಸ್ಮಾ ಚಿಕಿತ್ಸೆಯಿಂದ ಕೊವಿಡ್-19 ರೋಗಿಗೆ ಯಾವುದೇ ಉಪಯೋಗವಿಲ್ಲ!

ಕೊರೊನಾ ತಡೆಗೆ ಜಾಗತಿಕ ಆವಿಷ್ಕಾರ ಮೈತ್ರಿಕೂಟದ 11ಕ್ಕೂ ಹೆಚ್ಚು ದೇಶಗಳ ರಾಜತಾಂತ್ರಿಕರ ಜತೆ ಡಿಸಿಎಂ ಮಾತುಕತೆ

Published On - 10:57 pm, Mon, 17 May 21

S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?