AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಚಿಕಿತ್ಸಾ ಗೈಡ್‌ಲೈನ್ಸ್‌ನಿಂದ ಪ್ಲಾಸ್ಮಾ ಥೆರಪಿ ಹೊರಕ್ಕೆ: ಐಸಿಎಂಆರ್‌ ಆದೇಶ

ಕೊರೊನಾ ಚಿಕಿತ್ಸೆಯಲ್ಲಿ ಪ್ಲಾಸ್ಮಾ ಥೆರಪಿ ವಿಧಾನವನ್ನ ಕೈಬಿಟ್ಟು ಐಸಿಎಂಆರ್‌ ಆದೇಶ ಹೊರಡಿಸಿದೆ. ಅದರಂತೆ ಕೊವಿಡ್-19 ಚಿಕಿತ್ಸಾ ಗೈಡ್​ಲೈನ್ಸ್​ನಿಂದ ಪ್ಲಾಸ್ಮಾ ಥೆರಪಿ ತೆಗಯಲಾಗಿದೆ.

ಕೊವಿಡ್ ಚಿಕಿತ್ಸಾ ಗೈಡ್‌ಲೈನ್ಸ್‌ನಿಂದ ಪ್ಲಾಸ್ಮಾ ಥೆರಪಿ ಹೊರಕ್ಕೆ: ಐಸಿಎಂಆರ್‌ ಆದೇಶ
ಪ್ಲಾಸ್ಮಾ ಚಿಕಿತ್ಸೆ
TV9 Web
| Edited By: |

Updated on:Aug 21, 2021 | 10:13 AM

Share

ದೆಹಲಿ: ಕೊರೊನಾ ಚಿಕಿತ್ಸೆಯಲ್ಲಿ ಪ್ಲಾಸ್ಮಾ ಥೆರಪಿ ವಿಧಾನವನ್ನ ಕೈಬಿಟ್ಟು ಐಸಿಎಂಆರ್‌ ಆದೇಶ ಹೊರಡಿಸಿದೆ. ಅದರಂತೆ ಕೊವಿಡ್-19 ಚಿಕಿತ್ಸಾ ಗೈಡ್​ಲೈನ್ಸ್​ನಿಂದ ಪ್ಲಾಸ್ಮಾ ಥೆರಪಿ ತೆಗಯಲಾಗಿದೆ. ನಮ್ಮ ದೇಶದಲ್ಲಿ ಕೊರೊನಾ ರೋಗಿಗಳ ಚಿಕಿತ್ಸೆಗೆ ಬಳಸುತ್ತಿರುವ ಪ್ಲಾಸ್ಮಾ ಥೆರಪಿಯಿಂದ ಅವರ ಜೀವ ಉಳಿಸಲು ಸಾಧ್ಯವೇ ಇಲ್ಲ. ಹೀಗಾಗಿ, ಸದ್ಯದಲ್ಲೇ ನಮ್ಮ ದೇಶದಲ್ಲಿ ಕೊರೊನಾ ರೋಗಿಗಳ ಚಿಕಿತ್ಸಾ ಮಾರ್ಗಸೂಚಿಯಲ್ಲಿ ಬದಲಾವಣೆ ಆಗಲಿದೆ. ಪ್ಲಾಸ್ಮಾ ಥೆರಪಿಯನ್ನು ನಿಲ್ಲಿಸಲು ಸೂಚಿಸಿ ಹೊಸ ಮಾರ್ಗಸೂಚಿಯನ್ನು ಐಸಿಎಂಆರ್ ಹೊರಡಿಸಲಿದೆ ಎಂದು ಹೇಳಲಾಗಿತ್ತು.

ಭಾರತದಲ್ಲಿ ಕೊರೊನಾ ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆಗೆಳಲ್ಲಿ ಪ್ಲಾಸ್ಮಾ ಥೆರಪಿ ಸಹ ಒಂದಾಗಿತ್ತು. ಪ್ಲಾಸ್ಮಾ ಥೆರಪಿಯಿಂದ ಗಂಭೀರ ಸ್ಥಿತಿಯಲ್ಲಿರುವ ಕೊರೊನಾ ರೋಗಿಗಳ ಪ್ರಾಣ ಉಳಿಸಬಹುದೆಂದು ವೈದ್ಯರು ಈ ಚಿಕಿತ್ಸೆಯನ್ನು ನೀಡುತ್ತಿದ್ದರು. ಕೇಂದ್ರ ಸರ್ಕಾರ ಕೂಡ ಪ್ಲಾಸ್ಮಾ ಥೆರಪಿಯನ್ನು ಕೊರೊನಾ ರೋಗಿಗಳ ವೈದ್ಯಕೀಯ ಚಿಕಿತ್ಸೆಯ ಮಾರ್ಗಸೂಚಿಯಲ್ಲಿ ಸೇರಿಸಿತ್ತು.

ಗಂಭೀರ ಸ್ಥಿತಿಯಲ್ಲಿರುವ ರೋಗಿಗಳಿಗೆ ಕೊರೊನಾದಿಂದ ಗುಣಮುಖರಾದ ವ್ಯಕ್ತಿಗಳ ರಕ್ತದ ಪ್ಲಾಸ್ಮಾವನ್ನು ಸಂಗ್ರಹಿಸಿ ಪ್ಲಾಸ್ಮಾ ಥೆರಪಿ ನೀಡಲು ಸರ್ಕಾರ ಒಪ್ಪಿಗೆ ನೀಡಿತ್ತು. ಕಳೆದೊಂದು ವರ್ಷದಿಂದ ನಮ್ಮ ದೇಶ ಹಾಗೂ ವಿದೇಶಗಳಲ್ಲೂ ಕೂಡ ಕೊರೊನಾ ರೋಗಿಗಳಿಗೆ ಪ್ಲಾಸ್ಮಾ ಥೆರಪಿ ನೀಡಲಾಗುತ್ತಿತ್ತು. ಚೀನಾ, ಇಂಗ್ಲೆಂಡ್, ಆಮೆರಿಕಾ ಸೇರಿದಂತೆ ಬಹುತೇಕ ದೇಶಗಳಲ್ಲಿ ಕೊರೊನಾ ರೋಗಿಗಳ ಜೀವ ಉಳಿಸಲು ಅಂತಿಮ ಅಸ್ತ್ರವಾಗಿ ವೈದ್ಯರು ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡುತ್ತಿದ್ದರು. ನಮ್ಮ ದೇಶದಲ್ಲೂ ಕೊರೊನಾದಿಂದ ಗುಣಮುಖರಾದವರು ಬೇರೆಯವರ ಜೀವ ಉಳಿಸಲು ಪ್ಲಾಸ್ಮಾ ಥೆರಪಿಗಾಗಿ ಪ್ಲಾಸ್ಮಾ ದಾನ ಮಾಡುವುದನ್ನು ಪೋತ್ಸಾಹಿಸಲಾಗುತ್ತಿತ್ತು. ದೆಹಲಿ ಸರ್ಕಾರ ಪ್ಲಾಸ್ಮಾ ದಾನ ಮಾಡಿದವರಿಗೆ ಮೆಚ್ಚುಗೆಯ ಸರ್ಟಿಫಿಕೇಟ್ ನೀಡಿ ಪೋತ್ಸಾಹಿಸುತ್ತಿತ್ತು. ಆದರೆ ಈಗ, ಐಸಿಎಂಆರ್‌ ಆದೇಶದಂತೆ ಕೊವಿಡ್ ಚಿಕಿತ್ಸಾ ಗೈಡ್‌ಲೈನ್ಸ್‌ನಿಂದ ಪ್ಲಾಸ್ಮಾ ಥೆರಪಿಯನ್ನು ತೆಗೆಯಲಾಗಿದೆ.

ಇದನ್ನೂ ಓದಿ: ಐಸಿಎಮ್ಆರ್ ತಜ್ಞರ ಪ್ರಕಾರ ಪ್ಲಾಸ್ಮಾ ಚಿಕಿತ್ಸೆಯಿಂದ ಕೊವಿಡ್-19 ರೋಗಿಗೆ ಯಾವುದೇ ಉಪಯೋಗವಿಲ್ಲ!

ಕೊರೊನಾ ತಡೆಗೆ ಜಾಗತಿಕ ಆವಿಷ್ಕಾರ ಮೈತ್ರಿಕೂಟದ 11ಕ್ಕೂ ಹೆಚ್ಚು ದೇಶಗಳ ರಾಜತಾಂತ್ರಿಕರ ಜತೆ ಡಿಸಿಎಂ ಮಾತುಕತೆ

Published On - 10:57 pm, Mon, 17 May 21

ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ