AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಚಿಕಿತ್ಸಾ ಗೈಡ್‌ಲೈನ್ಸ್‌ನಿಂದ ಪ್ಲಾಸ್ಮಾ ಥೆರಪಿ ಹೊರಕ್ಕೆ: ಐಸಿಎಂಆರ್‌ ಆದೇಶ

ಕೊರೊನಾ ಚಿಕಿತ್ಸೆಯಲ್ಲಿ ಪ್ಲಾಸ್ಮಾ ಥೆರಪಿ ವಿಧಾನವನ್ನ ಕೈಬಿಟ್ಟು ಐಸಿಎಂಆರ್‌ ಆದೇಶ ಹೊರಡಿಸಿದೆ. ಅದರಂತೆ ಕೊವಿಡ್-19 ಚಿಕಿತ್ಸಾ ಗೈಡ್​ಲೈನ್ಸ್​ನಿಂದ ಪ್ಲಾಸ್ಮಾ ಥೆರಪಿ ತೆಗಯಲಾಗಿದೆ.

ಕೊವಿಡ್ ಚಿಕಿತ್ಸಾ ಗೈಡ್‌ಲೈನ್ಸ್‌ನಿಂದ ಪ್ಲಾಸ್ಮಾ ಥೆರಪಿ ಹೊರಕ್ಕೆ: ಐಸಿಎಂಆರ್‌ ಆದೇಶ
ಪ್ಲಾಸ್ಮಾ ಚಿಕಿತ್ಸೆ
TV9 Web
| Updated By: ganapathi bhat|

Updated on:Aug 21, 2021 | 10:13 AM

Share

ದೆಹಲಿ: ಕೊರೊನಾ ಚಿಕಿತ್ಸೆಯಲ್ಲಿ ಪ್ಲಾಸ್ಮಾ ಥೆರಪಿ ವಿಧಾನವನ್ನ ಕೈಬಿಟ್ಟು ಐಸಿಎಂಆರ್‌ ಆದೇಶ ಹೊರಡಿಸಿದೆ. ಅದರಂತೆ ಕೊವಿಡ್-19 ಚಿಕಿತ್ಸಾ ಗೈಡ್​ಲೈನ್ಸ್​ನಿಂದ ಪ್ಲಾಸ್ಮಾ ಥೆರಪಿ ತೆಗಯಲಾಗಿದೆ. ನಮ್ಮ ದೇಶದಲ್ಲಿ ಕೊರೊನಾ ರೋಗಿಗಳ ಚಿಕಿತ್ಸೆಗೆ ಬಳಸುತ್ತಿರುವ ಪ್ಲಾಸ್ಮಾ ಥೆರಪಿಯಿಂದ ಅವರ ಜೀವ ಉಳಿಸಲು ಸಾಧ್ಯವೇ ಇಲ್ಲ. ಹೀಗಾಗಿ, ಸದ್ಯದಲ್ಲೇ ನಮ್ಮ ದೇಶದಲ್ಲಿ ಕೊರೊನಾ ರೋಗಿಗಳ ಚಿಕಿತ್ಸಾ ಮಾರ್ಗಸೂಚಿಯಲ್ಲಿ ಬದಲಾವಣೆ ಆಗಲಿದೆ. ಪ್ಲಾಸ್ಮಾ ಥೆರಪಿಯನ್ನು ನಿಲ್ಲಿಸಲು ಸೂಚಿಸಿ ಹೊಸ ಮಾರ್ಗಸೂಚಿಯನ್ನು ಐಸಿಎಂಆರ್ ಹೊರಡಿಸಲಿದೆ ಎಂದು ಹೇಳಲಾಗಿತ್ತು.

ಭಾರತದಲ್ಲಿ ಕೊರೊನಾ ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆಗೆಳಲ್ಲಿ ಪ್ಲಾಸ್ಮಾ ಥೆರಪಿ ಸಹ ಒಂದಾಗಿತ್ತು. ಪ್ಲಾಸ್ಮಾ ಥೆರಪಿಯಿಂದ ಗಂಭೀರ ಸ್ಥಿತಿಯಲ್ಲಿರುವ ಕೊರೊನಾ ರೋಗಿಗಳ ಪ್ರಾಣ ಉಳಿಸಬಹುದೆಂದು ವೈದ್ಯರು ಈ ಚಿಕಿತ್ಸೆಯನ್ನು ನೀಡುತ್ತಿದ್ದರು. ಕೇಂದ್ರ ಸರ್ಕಾರ ಕೂಡ ಪ್ಲಾಸ್ಮಾ ಥೆರಪಿಯನ್ನು ಕೊರೊನಾ ರೋಗಿಗಳ ವೈದ್ಯಕೀಯ ಚಿಕಿತ್ಸೆಯ ಮಾರ್ಗಸೂಚಿಯಲ್ಲಿ ಸೇರಿಸಿತ್ತು.

ಗಂಭೀರ ಸ್ಥಿತಿಯಲ್ಲಿರುವ ರೋಗಿಗಳಿಗೆ ಕೊರೊನಾದಿಂದ ಗುಣಮುಖರಾದ ವ್ಯಕ್ತಿಗಳ ರಕ್ತದ ಪ್ಲಾಸ್ಮಾವನ್ನು ಸಂಗ್ರಹಿಸಿ ಪ್ಲಾಸ್ಮಾ ಥೆರಪಿ ನೀಡಲು ಸರ್ಕಾರ ಒಪ್ಪಿಗೆ ನೀಡಿತ್ತು. ಕಳೆದೊಂದು ವರ್ಷದಿಂದ ನಮ್ಮ ದೇಶ ಹಾಗೂ ವಿದೇಶಗಳಲ್ಲೂ ಕೂಡ ಕೊರೊನಾ ರೋಗಿಗಳಿಗೆ ಪ್ಲಾಸ್ಮಾ ಥೆರಪಿ ನೀಡಲಾಗುತ್ತಿತ್ತು. ಚೀನಾ, ಇಂಗ್ಲೆಂಡ್, ಆಮೆರಿಕಾ ಸೇರಿದಂತೆ ಬಹುತೇಕ ದೇಶಗಳಲ್ಲಿ ಕೊರೊನಾ ರೋಗಿಗಳ ಜೀವ ಉಳಿಸಲು ಅಂತಿಮ ಅಸ್ತ್ರವಾಗಿ ವೈದ್ಯರು ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡುತ್ತಿದ್ದರು. ನಮ್ಮ ದೇಶದಲ್ಲೂ ಕೊರೊನಾದಿಂದ ಗುಣಮುಖರಾದವರು ಬೇರೆಯವರ ಜೀವ ಉಳಿಸಲು ಪ್ಲಾಸ್ಮಾ ಥೆರಪಿಗಾಗಿ ಪ್ಲಾಸ್ಮಾ ದಾನ ಮಾಡುವುದನ್ನು ಪೋತ್ಸಾಹಿಸಲಾಗುತ್ತಿತ್ತು. ದೆಹಲಿ ಸರ್ಕಾರ ಪ್ಲಾಸ್ಮಾ ದಾನ ಮಾಡಿದವರಿಗೆ ಮೆಚ್ಚುಗೆಯ ಸರ್ಟಿಫಿಕೇಟ್ ನೀಡಿ ಪೋತ್ಸಾಹಿಸುತ್ತಿತ್ತು. ಆದರೆ ಈಗ, ಐಸಿಎಂಆರ್‌ ಆದೇಶದಂತೆ ಕೊವಿಡ್ ಚಿಕಿತ್ಸಾ ಗೈಡ್‌ಲೈನ್ಸ್‌ನಿಂದ ಪ್ಲಾಸ್ಮಾ ಥೆರಪಿಯನ್ನು ತೆಗೆಯಲಾಗಿದೆ.

ಇದನ್ನೂ ಓದಿ: ಐಸಿಎಮ್ಆರ್ ತಜ್ಞರ ಪ್ರಕಾರ ಪ್ಲಾಸ್ಮಾ ಚಿಕಿತ್ಸೆಯಿಂದ ಕೊವಿಡ್-19 ರೋಗಿಗೆ ಯಾವುದೇ ಉಪಯೋಗವಿಲ್ಲ!

ಕೊರೊನಾ ತಡೆಗೆ ಜಾಗತಿಕ ಆವಿಷ್ಕಾರ ಮೈತ್ರಿಕೂಟದ 11ಕ್ಕೂ ಹೆಚ್ಚು ದೇಶಗಳ ರಾಜತಾಂತ್ರಿಕರ ಜತೆ ಡಿಸಿಎಂ ಮಾತುಕತೆ

Published On - 10:57 pm, Mon, 17 May 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!