AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಚಿಕಿತ್ಸಾ ಗೈಡ್‌ಲೈನ್ಸ್‌ನಿಂದ ಪ್ಲಾಸ್ಮಾ ಥೆರಪಿ ಹೊರಕ್ಕೆ: ಐಸಿಎಂಆರ್‌ ಆದೇಶ

ಕೊರೊನಾ ಚಿಕಿತ್ಸೆಯಲ್ಲಿ ಪ್ಲಾಸ್ಮಾ ಥೆರಪಿ ವಿಧಾನವನ್ನ ಕೈಬಿಟ್ಟು ಐಸಿಎಂಆರ್‌ ಆದೇಶ ಹೊರಡಿಸಿದೆ. ಅದರಂತೆ ಕೊವಿಡ್-19 ಚಿಕಿತ್ಸಾ ಗೈಡ್​ಲೈನ್ಸ್​ನಿಂದ ಪ್ಲಾಸ್ಮಾ ಥೆರಪಿ ತೆಗಯಲಾಗಿದೆ.

ಕೊವಿಡ್ ಚಿಕಿತ್ಸಾ ಗೈಡ್‌ಲೈನ್ಸ್‌ನಿಂದ ಪ್ಲಾಸ್ಮಾ ಥೆರಪಿ ಹೊರಕ್ಕೆ: ಐಸಿಎಂಆರ್‌ ಆದೇಶ
ಪ್ಲಾಸ್ಮಾ ಚಿಕಿತ್ಸೆ
TV9 Web
| Edited By: |

Updated on:Aug 21, 2021 | 10:13 AM

Share

ದೆಹಲಿ: ಕೊರೊನಾ ಚಿಕಿತ್ಸೆಯಲ್ಲಿ ಪ್ಲಾಸ್ಮಾ ಥೆರಪಿ ವಿಧಾನವನ್ನ ಕೈಬಿಟ್ಟು ಐಸಿಎಂಆರ್‌ ಆದೇಶ ಹೊರಡಿಸಿದೆ. ಅದರಂತೆ ಕೊವಿಡ್-19 ಚಿಕಿತ್ಸಾ ಗೈಡ್​ಲೈನ್ಸ್​ನಿಂದ ಪ್ಲಾಸ್ಮಾ ಥೆರಪಿ ತೆಗಯಲಾಗಿದೆ. ನಮ್ಮ ದೇಶದಲ್ಲಿ ಕೊರೊನಾ ರೋಗಿಗಳ ಚಿಕಿತ್ಸೆಗೆ ಬಳಸುತ್ತಿರುವ ಪ್ಲಾಸ್ಮಾ ಥೆರಪಿಯಿಂದ ಅವರ ಜೀವ ಉಳಿಸಲು ಸಾಧ್ಯವೇ ಇಲ್ಲ. ಹೀಗಾಗಿ, ಸದ್ಯದಲ್ಲೇ ನಮ್ಮ ದೇಶದಲ್ಲಿ ಕೊರೊನಾ ರೋಗಿಗಳ ಚಿಕಿತ್ಸಾ ಮಾರ್ಗಸೂಚಿಯಲ್ಲಿ ಬದಲಾವಣೆ ಆಗಲಿದೆ. ಪ್ಲಾಸ್ಮಾ ಥೆರಪಿಯನ್ನು ನಿಲ್ಲಿಸಲು ಸೂಚಿಸಿ ಹೊಸ ಮಾರ್ಗಸೂಚಿಯನ್ನು ಐಸಿಎಂಆರ್ ಹೊರಡಿಸಲಿದೆ ಎಂದು ಹೇಳಲಾಗಿತ್ತು.

ಭಾರತದಲ್ಲಿ ಕೊರೊನಾ ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆಗೆಳಲ್ಲಿ ಪ್ಲಾಸ್ಮಾ ಥೆರಪಿ ಸಹ ಒಂದಾಗಿತ್ತು. ಪ್ಲಾಸ್ಮಾ ಥೆರಪಿಯಿಂದ ಗಂಭೀರ ಸ್ಥಿತಿಯಲ್ಲಿರುವ ಕೊರೊನಾ ರೋಗಿಗಳ ಪ್ರಾಣ ಉಳಿಸಬಹುದೆಂದು ವೈದ್ಯರು ಈ ಚಿಕಿತ್ಸೆಯನ್ನು ನೀಡುತ್ತಿದ್ದರು. ಕೇಂದ್ರ ಸರ್ಕಾರ ಕೂಡ ಪ್ಲಾಸ್ಮಾ ಥೆರಪಿಯನ್ನು ಕೊರೊನಾ ರೋಗಿಗಳ ವೈದ್ಯಕೀಯ ಚಿಕಿತ್ಸೆಯ ಮಾರ್ಗಸೂಚಿಯಲ್ಲಿ ಸೇರಿಸಿತ್ತು.

ಗಂಭೀರ ಸ್ಥಿತಿಯಲ್ಲಿರುವ ರೋಗಿಗಳಿಗೆ ಕೊರೊನಾದಿಂದ ಗುಣಮುಖರಾದ ವ್ಯಕ್ತಿಗಳ ರಕ್ತದ ಪ್ಲಾಸ್ಮಾವನ್ನು ಸಂಗ್ರಹಿಸಿ ಪ್ಲಾಸ್ಮಾ ಥೆರಪಿ ನೀಡಲು ಸರ್ಕಾರ ಒಪ್ಪಿಗೆ ನೀಡಿತ್ತು. ಕಳೆದೊಂದು ವರ್ಷದಿಂದ ನಮ್ಮ ದೇಶ ಹಾಗೂ ವಿದೇಶಗಳಲ್ಲೂ ಕೂಡ ಕೊರೊನಾ ರೋಗಿಗಳಿಗೆ ಪ್ಲಾಸ್ಮಾ ಥೆರಪಿ ನೀಡಲಾಗುತ್ತಿತ್ತು. ಚೀನಾ, ಇಂಗ್ಲೆಂಡ್, ಆಮೆರಿಕಾ ಸೇರಿದಂತೆ ಬಹುತೇಕ ದೇಶಗಳಲ್ಲಿ ಕೊರೊನಾ ರೋಗಿಗಳ ಜೀವ ಉಳಿಸಲು ಅಂತಿಮ ಅಸ್ತ್ರವಾಗಿ ವೈದ್ಯರು ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡುತ್ತಿದ್ದರು. ನಮ್ಮ ದೇಶದಲ್ಲೂ ಕೊರೊನಾದಿಂದ ಗುಣಮುಖರಾದವರು ಬೇರೆಯವರ ಜೀವ ಉಳಿಸಲು ಪ್ಲಾಸ್ಮಾ ಥೆರಪಿಗಾಗಿ ಪ್ಲಾಸ್ಮಾ ದಾನ ಮಾಡುವುದನ್ನು ಪೋತ್ಸಾಹಿಸಲಾಗುತ್ತಿತ್ತು. ದೆಹಲಿ ಸರ್ಕಾರ ಪ್ಲಾಸ್ಮಾ ದಾನ ಮಾಡಿದವರಿಗೆ ಮೆಚ್ಚುಗೆಯ ಸರ್ಟಿಫಿಕೇಟ್ ನೀಡಿ ಪೋತ್ಸಾಹಿಸುತ್ತಿತ್ತು. ಆದರೆ ಈಗ, ಐಸಿಎಂಆರ್‌ ಆದೇಶದಂತೆ ಕೊವಿಡ್ ಚಿಕಿತ್ಸಾ ಗೈಡ್‌ಲೈನ್ಸ್‌ನಿಂದ ಪ್ಲಾಸ್ಮಾ ಥೆರಪಿಯನ್ನು ತೆಗೆಯಲಾಗಿದೆ.

ಇದನ್ನೂ ಓದಿ: ಐಸಿಎಮ್ಆರ್ ತಜ್ಞರ ಪ್ರಕಾರ ಪ್ಲಾಸ್ಮಾ ಚಿಕಿತ್ಸೆಯಿಂದ ಕೊವಿಡ್-19 ರೋಗಿಗೆ ಯಾವುದೇ ಉಪಯೋಗವಿಲ್ಲ!

ಕೊರೊನಾ ತಡೆಗೆ ಜಾಗತಿಕ ಆವಿಷ್ಕಾರ ಮೈತ್ರಿಕೂಟದ 11ಕ್ಕೂ ಹೆಚ್ಚು ದೇಶಗಳ ರಾಜತಾಂತ್ರಿಕರ ಜತೆ ಡಿಸಿಎಂ ಮಾತುಕತೆ

Published On - 10:57 pm, Mon, 17 May 21

KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ