AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಖಾಸುಮ್ಮನೆ RT-PCR ಪರೀಕ್ಷೆ ಅಗತ್ಯವಿಲ್ಲ; ಪ್ರಯೋಗಾಲಯಗಳ ಮೇಲಿನ ಒತ್ತಡ ತಗ್ಗಿಸಲು ICMR ಹೊಸ ಮಾರ್ಗಸೂಚಿ

ಭಾರತದಲ್ಲಿ 2,506 ಮಾಲಿಕ್ಯುಲರ್ ಲ್ಯಾಬೋರೇಟರಿಗಳಿಂದ ಬೇರೆ ಬೇರೆ ಪರೀಕ್ಷೆಗಳನ್ನೂ ಸೇರಿಸಿ ಒಟ್ಟು 15 ಲಕ್ಷ ಪರೀಕ್ಷೆಗಳನ್ನು ಕಡಿಮೆ ಅವಧಿಯಲ್ಲಿ ನಡೆಸುವ ಸಾಮರ್ಥ್ಯವಿದೆ. ಆದರೆ, ಪ್ರಸ್ತುತ RT-PCR ಟೆಸ್ಟ್​ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವುದು ಹಾಗೂ ಪ್ರಯೋಗಾಲಯದ ಸಿಬ್ಬಂದಿ ಕೊರೊನಾ ಸೋಂಕಿಗೆ ತುತ್ತಾಗುತ್ತಿರುವುದು ಪ್ರಯೋಗಾಲಯದ ಮೇಲೆ ಒತ್ತಡ ತರುತ್ತಿದೆ.

ಸುಖಾಸುಮ್ಮನೆ RT-PCR ಪರೀಕ್ಷೆ ಅಗತ್ಯವಿಲ್ಲ; ಪ್ರಯೋಗಾಲಯಗಳ ಮೇಲಿನ ಒತ್ತಡ ತಗ್ಗಿಸಲು ICMR ಹೊಸ ಮಾರ್ಗಸೂಚಿ
ಪ್ರಾತಿನಿಧಿಕ ಚಿತ್ರ
Follow us
Skanda
| Updated By: preethi shettigar

Updated on: May 05, 2021 | 1:10 PM

ದೆಹಲಿ: ಭಾರತದಲ್ಲಿ ಕೊರೊನಾ ಎರಡನೇ ಅಲೆ ಅನಿರೀಕ್ಷಿತ ಆಘಾತ ನೀಡಿದೆ. ಬೇರೆ ದೇಶಗಳಿಗೆ ಹೋಲಿಸಿದರೆ ಯಶಸ್ವಿಯಾಗಿ ಮೊದಲ ಅಲೆಯನ್ನು ಎದುರಿಸಿದ್ದ ಭಾರತದಲ್ಲೀಗ ವೈದ್ಯಕೀಯ ವ್ಯವಸ್ಥೆಯೇ ಅಲುಗಾಡಲಾರಂಭಿಸಿದೆ. ಸೋಂಕಿತರನ್ನು ಪತ್ತೆ ಹಚ್ಚಿ ಸೋಂಕು ಹಬ್ಬದಂತೆ ತಡೆಯಲು ಕೇಂದ್ರ ಸರ್ಕಾರವು ಎಲ್ಲಾ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ RT-PCR ಪರೀಕ್ಷೆಯನ್ನು ಹೆಚ್ಚಿಸುವಂತೆ ನಿರ್ದೇಶನ ನೀಡಿತ್ತು. ಆದರೆ, ಈಗ ಇದಕ್ಕೆ ವ್ಯತಿರಿಕ್ತವಾಗಿ ಹೇಳಿಕೆ ನೀಡಿರುವ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ವೈದ್ಯಕೀಯ ಪ್ರಯೋಗಾಲಯಗಳ ಮೇಲಿನ ಹೊರೆ ತಪ್ಪಿಸುವ ಸಲುವಾಗಿ RT-PCR ಪರೀಕ್ಷೆ ಪ್ರಮಾಣವನ್ನು ಕಡಿಮೆ ಮಾಡಲು ತಿಳಿಸಿದೆ.

ಅಲ್ಲದೇ, ಯಾವ ಯಾವ ಸಂದರ್ಭಗಳಲ್ಲಿ RT-PCR ಟೆಸ್ಟ್ ಅಗತ್ಯವಿಲ್ಲ ಎಂಬುದನ್ನೂ ICMR ಸ್ಪಷ್ಟವಾಗಿ ಹೇಳಿದೆ. ಈ ನೂತನ ನಿಯಮಾವಳಿ ಪ್ರಕಾರ ಈ ಕೆಳಕಂಡ ಸಂದರ್ಭಗಳಲ್ಲಿ RT-PCR ಪರೀಕ್ಷೆ ಮಾಡಿಸಬೇಕಾಗಿಲ್ಲ.

1. ಯಾವುದೇ ವ್ಯಕ್ತಿಗೆ ರ್ಯಾಪಿಡ್ ಆ್ಯಂಟಿಜೆನ್​ ಟೆಸ್ಟ್​ನಲ್ಲಿ ಪಾಸಿಟಿವ್ ಕಂಡುಬಂದರೆ ಮತ್ತೆ RT-PCR ಪರೀಕ್ಷೆ ಅಗತ್ಯವಿಲ್ಲ 2. ಮೊದಲ ಬಾರಿ RT-PCR ಟೆಸ್ಟ್​ ಮಾಡಿಸಿದಾಗ ಪಾಸಿಟಿವ್ ಬಂದಿದ್ದರೆ ಮತ್ತೆ ಮಾಡಿಸಬೇಕಾಗಿಲ್ಲ. 3. 10 ದಿನಗಳ ಹೋಂ ಐಸೋಲೇಷನ್ ಮುಗಿಸಿ ನಂತರದ ಮೂರು ದಿನಗಳಲ್ಲಿ ಯಾವುದೇ ಜ್ವರ ಬಾರದಿದ್ದಲ್ಲಿ RT-PCR ಬೇಡ. 4. ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಮಾಡುವ ಹೊತ್ತಿನಲ್ಲಿ RT-PCR ಪರೀಕ್ಷೆ ಬೇಕಿಲ್ಲ. 5. ಹೊರರಾಜ್ಯ ಪ್ರಯಾಣಿಕರು RT-PCR ಟೆಸ್ಟ್​ ಮಾಡಿಸಬೇಕೆಂದು ರಾಜ್ಯ ಸರ್ಕಾರಗಳು ಹೇಳಿವೆಯಾದರೂ ಅನಗತ್ಯ ಹೊರೆ ತಪ್ಪಿಸುವ ಸಲುವಾಗಿ ಅದನ್ನು ಕೈ ಬಿಡುವಂತೆ ಐಸಿಎಂಆರ್​ ಸೂಚಿಸಿದೆ.

ಭಾರತದಲ್ಲಿ 2,506 ಮಾಲಿಕ್ಯುಲರ್ ಲ್ಯಾಬೋರೇಟರಿಗಳಿಂದ ಬೇರೆ ಬೇರೆ ಪರೀಕ್ಷೆಗಳನ್ನೂ ಸೇರಿಸಿ ಒಟ್ಟು 15 ಲಕ್ಷ ಪರೀಕ್ಷೆಗಳನ್ನು ಕಡಿಮೆ ಅವಧಿಯಲ್ಲಿ ನಡೆಸುವ ಸಾಮರ್ಥ್ಯವಿದೆ. ಆದರೆ, ಪ್ರಸ್ತುತ RT-PCR ಟೆಸ್ಟ್​ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವುದು ಹಾಗೂ ಪ್ರಯೋಗಾಲಯದ ಸಿಬ್ಬಂದಿ ಕೊರೊನಾ ಸೋಂಕಿಗೆ ತುತ್ತಾಗುತ್ತಿರುವುದು ಪ್ರಯೋಗಾಲಯದ ಮೇಲೆ ಒತ್ತಡ ತರುತ್ತಿದೆ. ಇದರಿಂದಾಗಿ ಒಂದು RT-PCR ಟೆಸ್ಟ್​ ನಡೆಸಿ ಫಲಿತಾಂಶ ಪಡೆಯಲು 72 ಗಂಟೆಗೂ ಅಧಿಕ ಸಮಯ ಬೇಕಾಗುತ್ತಿದೆ. ಇದನ್ನು ತಡೆಗಟ್ಟಬೇಕೆಂದರೆ RT-PCR ಪರೀಕ್ಷೆಗಳನ್ನು ಅಗತ್ಯಕ್ಕನುಸಾರವಾಗಿ ಮಾತ್ರ ಮಾಡಬೇಕೆಂದು ತಿಳಿಸಲಾಗಿದೆ.

ಯಾವಾಗ RT-PCR ಪರೀಕ್ಷೆ ಮಾಡಿಸಬೇಕು? ಯಾವ ವ್ಯಕ್ತಿಗೆ ಸೋಂಕಿನ ಲಕ್ಷಣಗಳಿದ್ದರೂ ರ್ಯಾಪಿಡ್​ ಆ್ಯಂಟಿಜೆನ್​ ಟೆಸ್ಟ್​ನಲ್ಲಿ ನೆಗೆಟಿವ್​ ಬರುತ್ತದೋ ಅವರು RT-PCR ಪರೀಕ್ಷೆ ಮೊರೆ ಹೋಗಬೇಕು.

RAT ಅಥವಾ RT-PCR ಟೆಸ್ಟ್​ ನಂತರ ಲಸಿಕೆ ವಿವರ ಕಡ್ಡಾಯ ಇದೇ ವೇಳೆ ಲಸಿಕೆ ವಿವರಕ್ಕೆ ಮಹತ್ವ ನೀಡಿರುವ ಐಸಿಎಂಆರ್ RAT ಅಥವಾ RT-PCR ಪರೀಕ್ಷೆ ಬಳಿಕ ಕೊರೊನಾ ಲಸಿಕೆ ವಿವರವನ್ನು ಕಡ್ಡಾಯವಾಗಿ ದಾಖಲಿಸುವಂತೆ ಸೂಚಿಸಿದೆ. ಲಸಿಕೆ ಪಡೆದ ವ್ಯಕ್ತಿಗೆ ಸೋಂಕು ತಗುಲಿದೆಯೋ? ಇಲ್ಲವೋ? ಎಂದು ಅರಿತುಕೊಳ್ಳುವ ಸಲುವಾಗಿ ಈ ನಿರ್ಧಾರವನ್ನು ಪ್ರಕಟಿಸಿದೆ.

ಇದನ್ನೂ ಓದಿ: 2 ಹನಿ ಲಿಂಬೆ ರಸ ಮೂಗಿನಲ್ಲಿ ಹಾಕಿದರೆ ಕೊರೊನಾ ನಿವಾರಣೆ?- ಫ್ಯಾಕ್ಟ್​ಚೆಕ್​ನಲ್ಲಿ ಬಯಲಾಯ್ತು ಸತ್ಯ.. ದಯವಿಟ್ಟು ಇಂಥದ್ದು ಮಾಡ್ಬೇಡಿ ಎಂದ ವೈದ್ಯರು

VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
VIDEO: ಅತ್ಯಂತ ಕೆಟ್ಟ ದಾಖಲೆ: ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ವೈಭವ್
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಸರಣಿ ಅಪಘಾತ, 4 ಕಾರುಗಳು ಜಖಂ
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಸ್ತ್ರೀಯರು ಗರ್ಭಾವಸ್ಥೆಯಲ್ಲಿ ನೀತಿಕತೆಗಳನ್ನು ಯಾಕೆ ಕೇಳಬೇಕು?
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಮೇಷ ರಾಶಿಯವರಿಗಿಂದು ಐದು ರಾಶಿಗಳ ಶುಭ ಫಲ: ಉಳಿದ ರಾಶಿಗಳ ಫಲಾಫಲವೂ ಇಲ್ಲಿದೆ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ