AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಶ್ತ್ವಾರಾದಲ್ಲಿ ಐಇಡಿ ಪತ್ತೆ; ಸೇತುವೆ ಬಳಿಯಿದ್ದ ಸ್ಫೋಟಕವನ್ನು ನಿಷ್ಕ್ರಿಯಗೊಳಿಸಿದ ಭದ್ರತಾ ಪಡೆಗಳು

ಇತ್ತೀಚೆಗೆ ಜಮ್ಮು-ಕಾಶ್ಮೀರ, ಶ್ರೀನಗರಗಳಲ್ಲಿ ಡ್ರೋನ್​ ಹಾರಾಟ, ಐಇಡಿ ಸ್ಫೋಟಕ ಪತ್ತೆ ಪ್ರಕರಣಗಳು ಹೆಚ್ಚಾಗಿವೆ. ಇಲ್ಲಿನ ಭದ್ರತಾ ಪಡೆಗಳು ಸದಾ ಅಲರ್ಟ್​ ಆಗಿರುತ್ತಿದ್ದು, ಉಗ್ರಚಟುವಟಿಕೆಗಳನ್ನು ಯಶಸ್ವಿಯಾಗಿ ನಿಯಂತ್ರಣ ಮಾಡುತ್ತಿವೆ.

ಕಿಶ್ತ್ವಾರಾದಲ್ಲಿ ಐಇಡಿ ಪತ್ತೆ; ಸೇತುವೆ ಬಳಿಯಿದ್ದ ಸ್ಫೋಟಕವನ್ನು ನಿಷ್ಕ್ರಿಯಗೊಳಿಸಿದ ಭದ್ರತಾ ಪಡೆಗಳು
ಸೇತುವೆ ಬಳಿ ಪತ್ತೆಯಾದ ಐಇಡಿಯನ್ನು ನಿಷ್ಕ್ರಿಯಗೊಳಿಸಿದ ಭದ್ರತಾ ಪಡೆ
TV9 Web
| Edited By: |

Updated on: Aug 14, 2021 | 7:09 PM

Share

ಶ್ರೀನಗರ: ಇಲ್ಲಿನ ಕಿಶ್ತ್ವಾರ್​-ಕೇಶ್ವಾನ್​ ರಸ್ತೆಯಲ್ಲಿ ಇಡಲಾಗಿದ್ದ ಐಇಡಿ (IED) ಸ್ಫೋಟಕವನ್ನು ಭದ್ರತಾ ಪಡೆಗಳು (Security Forces) ಇಂದು ನಿಷ್ಕ್ರಿಯಗೊಳಿಸಿವೆ. ಗ್ರೇಟರ್​ ಕಾಶ್ಮೀರದ ಪೊಲೀಸ್​ ವಕ್ತಾರ (Police Spokesperson) ಈ ಬಗ್ಗೆ ಮಾಹಿತಿ ನೀಡಿದ್ದು, ಇಂದು ಮುಂಜಾನೆ ಕಿಶ್ತ್ವಾರ್​-ಕೇಶ್ವಾನ್ (Kishtwar-Keshwan)​ ರಸ್ತೆಯಲ್ಲಿ ಸೇನೆಯ 26 ಆರ್​ಆರ್​ ಮತ್ತು ಸ್ಥಳೀಯ ಪೊಲೀಸರು ಗಸ್ತು ತಿರುಗುತ್ತಿದ್ದರು. ಈ ವೇಳೆ ಇಲ್ಲಿನ ಕುರಿಯಾ ಸೇತುವೆ (Kuriya Bridge) ಬಳಿ, ರಕ್ಷಣಾ ಪಡೆಗಳ ಶ್ವಾನ (Dog Scout)ಗಳ ಸಹಾಯದಿಂದ ಸ್ಫೋಟಕ ಸಾಧನವನ್ನು ಪತ್ತೆಹಚ್ಚಲಾಗಿದೆ ಎಂದು ಹೇಳಿದ್ದಾರೆ. ಐಇಡಿ ಇದ್ದ ಸ್ಥಳದಲ್ಲೇ ಅದನ್ನು ನಿಷ್ಕ್ರಿಯಗೊಳಿಸಲಾಯಿತು ಎಂದೂ ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ ಜಮ್ಮು-ಕಾಶ್ಮೀರ, ಶ್ರೀನಗರಗಳಲ್ಲಿ ಡ್ರೋನ್​ ಹಾರಾಟ, ಐಇಡಿ ಸ್ಫೋಟಕ ಪತ್ತೆ ಪ್ರಕರಣಗಳು ಹೆಚ್ಚಾಗಿವೆ. ಇಲ್ಲಿನ ಭದ್ರತಾ ಪಡೆಗಳು ಸದಾ ಅಲರ್ಟ್​ ಆಗಿರುತ್ತಿದ್ದು, ಉಗ್ರಚಟುವಟಿಕೆಗಳನ್ನು ಯಶಸ್ವಿಯಾಗಿ ನಿಯಂತ್ರಣ ಮಾಡುತ್ತಿವೆ. ಜುಲೈನಲ್ಲಿ ಕುಲ್ಗಾಮ್ ಜಿಲ್ಲೆಯ, ಕ್ವಾಜಿಗುಂಡ ಪ್ರದೇಶದಲ್ಲಿ ಐಇಡಿ ಪತ್ತೆಯಾಗಿತ್ತು. ಹಾಗೇ, ಐದು ದಿನಗಳ ಹಿಂದೆ ಪಂಜಾಬ್​​ನ ಅಮೃತಸರ್​​ನ ದೆಲೆಕೆ ಎಂಬ ಹಳ್ಳಿಯಲ್ಲಿ ಟಿಫಿನ್​ ಬಾಕ್ಸ್​ನಲ್ಲಿ ಐಇಡಿ ಪತ್ತೆಯಾಗಿತ್ತು. ಸ್ವಾತಂತ್ರ್ಯ ದಿನಾಚರಣೆ ಸಮೀಪಿಸುತ್ತಿರುವಂತೆಯೇ ಇಂಥ ಉಗ್ರಕೃತ್ಯಗಳೂ ಹೆಚ್ಚುತ್ತಿವೆ. ಹಾಗೇ, ದೆಹಲಿ ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆಯಿದ್ದು, ಈ ಮಧ್ಯೆ ಅಲ್ಲಿನ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಇದನ್ನೂ ಓದಿ: Health Tips: ಹಲವು ಅನಾರೋಗ್ಯ ಸಮಸ್ಯೆಗಳಿಗೆ ಪಪ್ಪಾಯಿ ಎಲೆಗಳೇ ಔಷಧಿ

(IED Explosive detected along the Kishtwar Keshwan road of Jammu Kashmir)

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ