AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಶ್ತ್ವಾರಾದಲ್ಲಿ ಐಇಡಿ ಪತ್ತೆ; ಸೇತುವೆ ಬಳಿಯಿದ್ದ ಸ್ಫೋಟಕವನ್ನು ನಿಷ್ಕ್ರಿಯಗೊಳಿಸಿದ ಭದ್ರತಾ ಪಡೆಗಳು

ಇತ್ತೀಚೆಗೆ ಜಮ್ಮು-ಕಾಶ್ಮೀರ, ಶ್ರೀನಗರಗಳಲ್ಲಿ ಡ್ರೋನ್​ ಹಾರಾಟ, ಐಇಡಿ ಸ್ಫೋಟಕ ಪತ್ತೆ ಪ್ರಕರಣಗಳು ಹೆಚ್ಚಾಗಿವೆ. ಇಲ್ಲಿನ ಭದ್ರತಾ ಪಡೆಗಳು ಸದಾ ಅಲರ್ಟ್​ ಆಗಿರುತ್ತಿದ್ದು, ಉಗ್ರಚಟುವಟಿಕೆಗಳನ್ನು ಯಶಸ್ವಿಯಾಗಿ ನಿಯಂತ್ರಣ ಮಾಡುತ್ತಿವೆ.

ಕಿಶ್ತ್ವಾರಾದಲ್ಲಿ ಐಇಡಿ ಪತ್ತೆ; ಸೇತುವೆ ಬಳಿಯಿದ್ದ ಸ್ಫೋಟಕವನ್ನು ನಿಷ್ಕ್ರಿಯಗೊಳಿಸಿದ ಭದ್ರತಾ ಪಡೆಗಳು
ಸೇತುವೆ ಬಳಿ ಪತ್ತೆಯಾದ ಐಇಡಿಯನ್ನು ನಿಷ್ಕ್ರಿಯಗೊಳಿಸಿದ ಭದ್ರತಾ ಪಡೆ
TV9 Web
| Updated By: Lakshmi Hegde|

Updated on: Aug 14, 2021 | 7:09 PM

Share

ಶ್ರೀನಗರ: ಇಲ್ಲಿನ ಕಿಶ್ತ್ವಾರ್​-ಕೇಶ್ವಾನ್​ ರಸ್ತೆಯಲ್ಲಿ ಇಡಲಾಗಿದ್ದ ಐಇಡಿ (IED) ಸ್ಫೋಟಕವನ್ನು ಭದ್ರತಾ ಪಡೆಗಳು (Security Forces) ಇಂದು ನಿಷ್ಕ್ರಿಯಗೊಳಿಸಿವೆ. ಗ್ರೇಟರ್​ ಕಾಶ್ಮೀರದ ಪೊಲೀಸ್​ ವಕ್ತಾರ (Police Spokesperson) ಈ ಬಗ್ಗೆ ಮಾಹಿತಿ ನೀಡಿದ್ದು, ಇಂದು ಮುಂಜಾನೆ ಕಿಶ್ತ್ವಾರ್​-ಕೇಶ್ವಾನ್ (Kishtwar-Keshwan)​ ರಸ್ತೆಯಲ್ಲಿ ಸೇನೆಯ 26 ಆರ್​ಆರ್​ ಮತ್ತು ಸ್ಥಳೀಯ ಪೊಲೀಸರು ಗಸ್ತು ತಿರುಗುತ್ತಿದ್ದರು. ಈ ವೇಳೆ ಇಲ್ಲಿನ ಕುರಿಯಾ ಸೇತುವೆ (Kuriya Bridge) ಬಳಿ, ರಕ್ಷಣಾ ಪಡೆಗಳ ಶ್ವಾನ (Dog Scout)ಗಳ ಸಹಾಯದಿಂದ ಸ್ಫೋಟಕ ಸಾಧನವನ್ನು ಪತ್ತೆಹಚ್ಚಲಾಗಿದೆ ಎಂದು ಹೇಳಿದ್ದಾರೆ. ಐಇಡಿ ಇದ್ದ ಸ್ಥಳದಲ್ಲೇ ಅದನ್ನು ನಿಷ್ಕ್ರಿಯಗೊಳಿಸಲಾಯಿತು ಎಂದೂ ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ ಜಮ್ಮು-ಕಾಶ್ಮೀರ, ಶ್ರೀನಗರಗಳಲ್ಲಿ ಡ್ರೋನ್​ ಹಾರಾಟ, ಐಇಡಿ ಸ್ಫೋಟಕ ಪತ್ತೆ ಪ್ರಕರಣಗಳು ಹೆಚ್ಚಾಗಿವೆ. ಇಲ್ಲಿನ ಭದ್ರತಾ ಪಡೆಗಳು ಸದಾ ಅಲರ್ಟ್​ ಆಗಿರುತ್ತಿದ್ದು, ಉಗ್ರಚಟುವಟಿಕೆಗಳನ್ನು ಯಶಸ್ವಿಯಾಗಿ ನಿಯಂತ್ರಣ ಮಾಡುತ್ತಿವೆ. ಜುಲೈನಲ್ಲಿ ಕುಲ್ಗಾಮ್ ಜಿಲ್ಲೆಯ, ಕ್ವಾಜಿಗುಂಡ ಪ್ರದೇಶದಲ್ಲಿ ಐಇಡಿ ಪತ್ತೆಯಾಗಿತ್ತು. ಹಾಗೇ, ಐದು ದಿನಗಳ ಹಿಂದೆ ಪಂಜಾಬ್​​ನ ಅಮೃತಸರ್​​ನ ದೆಲೆಕೆ ಎಂಬ ಹಳ್ಳಿಯಲ್ಲಿ ಟಿಫಿನ್​ ಬಾಕ್ಸ್​ನಲ್ಲಿ ಐಇಡಿ ಪತ್ತೆಯಾಗಿತ್ತು. ಸ್ವಾತಂತ್ರ್ಯ ದಿನಾಚರಣೆ ಸಮೀಪಿಸುತ್ತಿರುವಂತೆಯೇ ಇಂಥ ಉಗ್ರಕೃತ್ಯಗಳೂ ಹೆಚ್ಚುತ್ತಿವೆ. ಹಾಗೇ, ದೆಹಲಿ ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆಯಿದ್ದು, ಈ ಮಧ್ಯೆ ಅಲ್ಲಿನ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಇದನ್ನೂ ಓದಿ: Health Tips: ಹಲವು ಅನಾರೋಗ್ಯ ಸಮಸ್ಯೆಗಳಿಗೆ ಪಪ್ಪಾಯಿ ಎಲೆಗಳೇ ಔಷಧಿ

(IED Explosive detected along the Kishtwar Keshwan road of Jammu Kashmir)

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ