AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಶ್ತ್ವಾರಾದಲ್ಲಿ ಐಇಡಿ ಪತ್ತೆ; ಸೇತುವೆ ಬಳಿಯಿದ್ದ ಸ್ಫೋಟಕವನ್ನು ನಿಷ್ಕ್ರಿಯಗೊಳಿಸಿದ ಭದ್ರತಾ ಪಡೆಗಳು

ಇತ್ತೀಚೆಗೆ ಜಮ್ಮು-ಕಾಶ್ಮೀರ, ಶ್ರೀನಗರಗಳಲ್ಲಿ ಡ್ರೋನ್​ ಹಾರಾಟ, ಐಇಡಿ ಸ್ಫೋಟಕ ಪತ್ತೆ ಪ್ರಕರಣಗಳು ಹೆಚ್ಚಾಗಿವೆ. ಇಲ್ಲಿನ ಭದ್ರತಾ ಪಡೆಗಳು ಸದಾ ಅಲರ್ಟ್​ ಆಗಿರುತ್ತಿದ್ದು, ಉಗ್ರಚಟುವಟಿಕೆಗಳನ್ನು ಯಶಸ್ವಿಯಾಗಿ ನಿಯಂತ್ರಣ ಮಾಡುತ್ತಿವೆ.

ಕಿಶ್ತ್ವಾರಾದಲ್ಲಿ ಐಇಡಿ ಪತ್ತೆ; ಸೇತುವೆ ಬಳಿಯಿದ್ದ ಸ್ಫೋಟಕವನ್ನು ನಿಷ್ಕ್ರಿಯಗೊಳಿಸಿದ ಭದ್ರತಾ ಪಡೆಗಳು
ಸೇತುವೆ ಬಳಿ ಪತ್ತೆಯಾದ ಐಇಡಿಯನ್ನು ನಿಷ್ಕ್ರಿಯಗೊಳಿಸಿದ ಭದ್ರತಾ ಪಡೆ
TV9 Web
| Edited By: |

Updated on: Aug 14, 2021 | 7:09 PM

Share

ಶ್ರೀನಗರ: ಇಲ್ಲಿನ ಕಿಶ್ತ್ವಾರ್​-ಕೇಶ್ವಾನ್​ ರಸ್ತೆಯಲ್ಲಿ ಇಡಲಾಗಿದ್ದ ಐಇಡಿ (IED) ಸ್ಫೋಟಕವನ್ನು ಭದ್ರತಾ ಪಡೆಗಳು (Security Forces) ಇಂದು ನಿಷ್ಕ್ರಿಯಗೊಳಿಸಿವೆ. ಗ್ರೇಟರ್​ ಕಾಶ್ಮೀರದ ಪೊಲೀಸ್​ ವಕ್ತಾರ (Police Spokesperson) ಈ ಬಗ್ಗೆ ಮಾಹಿತಿ ನೀಡಿದ್ದು, ಇಂದು ಮುಂಜಾನೆ ಕಿಶ್ತ್ವಾರ್​-ಕೇಶ್ವಾನ್ (Kishtwar-Keshwan)​ ರಸ್ತೆಯಲ್ಲಿ ಸೇನೆಯ 26 ಆರ್​ಆರ್​ ಮತ್ತು ಸ್ಥಳೀಯ ಪೊಲೀಸರು ಗಸ್ತು ತಿರುಗುತ್ತಿದ್ದರು. ಈ ವೇಳೆ ಇಲ್ಲಿನ ಕುರಿಯಾ ಸೇತುವೆ (Kuriya Bridge) ಬಳಿ, ರಕ್ಷಣಾ ಪಡೆಗಳ ಶ್ವಾನ (Dog Scout)ಗಳ ಸಹಾಯದಿಂದ ಸ್ಫೋಟಕ ಸಾಧನವನ್ನು ಪತ್ತೆಹಚ್ಚಲಾಗಿದೆ ಎಂದು ಹೇಳಿದ್ದಾರೆ. ಐಇಡಿ ಇದ್ದ ಸ್ಥಳದಲ್ಲೇ ಅದನ್ನು ನಿಷ್ಕ್ರಿಯಗೊಳಿಸಲಾಯಿತು ಎಂದೂ ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ ಜಮ್ಮು-ಕಾಶ್ಮೀರ, ಶ್ರೀನಗರಗಳಲ್ಲಿ ಡ್ರೋನ್​ ಹಾರಾಟ, ಐಇಡಿ ಸ್ಫೋಟಕ ಪತ್ತೆ ಪ್ರಕರಣಗಳು ಹೆಚ್ಚಾಗಿವೆ. ಇಲ್ಲಿನ ಭದ್ರತಾ ಪಡೆಗಳು ಸದಾ ಅಲರ್ಟ್​ ಆಗಿರುತ್ತಿದ್ದು, ಉಗ್ರಚಟುವಟಿಕೆಗಳನ್ನು ಯಶಸ್ವಿಯಾಗಿ ನಿಯಂತ್ರಣ ಮಾಡುತ್ತಿವೆ. ಜುಲೈನಲ್ಲಿ ಕುಲ್ಗಾಮ್ ಜಿಲ್ಲೆಯ, ಕ್ವಾಜಿಗುಂಡ ಪ್ರದೇಶದಲ್ಲಿ ಐಇಡಿ ಪತ್ತೆಯಾಗಿತ್ತು. ಹಾಗೇ, ಐದು ದಿನಗಳ ಹಿಂದೆ ಪಂಜಾಬ್​​ನ ಅಮೃತಸರ್​​ನ ದೆಲೆಕೆ ಎಂಬ ಹಳ್ಳಿಯಲ್ಲಿ ಟಿಫಿನ್​ ಬಾಕ್ಸ್​ನಲ್ಲಿ ಐಇಡಿ ಪತ್ತೆಯಾಗಿತ್ತು. ಸ್ವಾತಂತ್ರ್ಯ ದಿನಾಚರಣೆ ಸಮೀಪಿಸುತ್ತಿರುವಂತೆಯೇ ಇಂಥ ಉಗ್ರಕೃತ್ಯಗಳೂ ಹೆಚ್ಚುತ್ತಿವೆ. ಹಾಗೇ, ದೆಹಲಿ ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆಯಿದ್ದು, ಈ ಮಧ್ಯೆ ಅಲ್ಲಿನ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಇದನ್ನೂ ಓದಿ: Health Tips: ಹಲವು ಅನಾರೋಗ್ಯ ಸಮಸ್ಯೆಗಳಿಗೆ ಪಪ್ಪಾಯಿ ಎಲೆಗಳೇ ಔಷಧಿ

(IED Explosive detected along the Kishtwar Keshwan road of Jammu Kashmir)

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಭಾರತ ಮತ್ತು ಇಲ್ಲಿನ ಜನರ ಪ್ರೀತಿ ಅದ್ಭುತ: ಇರಾನ್ ಮೂಲದ ಪೈಲ್ವಾನ್ ಮಿರ್ಜಾ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಅಧಿಕಾರ ಹಂಚಿಕೆ ಜಟಾಪಟಿ: ಅಚ್ಚರಿಯ ಹೇಳಿಕೆ ಕೊಟ್ಟ ಸತೀಶ್​​ ಜಾರಕಿಹೊಳಿ
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಸಿಲಿಂಡರ್​​ ಸ್ಫೋಟಗೊಂಡು ಮನೆಗೆ ಮನೆಯೇ ಸರ್ವನಾಶ!
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಕುವೈತ್​ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಆವರಣದಲ್ಲಿ ಇರಾನ್ ಡ್ರೋನ್ ದಾಳಿ
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಬೆಂಗಳೂರಿನಿಂದ ವಿದೇಶಕ್ಕೆ ಹೋಗಬೇಕಾದ, ಬರಬೇಕಾದ ಒಟ್ಟು 24 ವಿಮಾನ ರದ್ದು
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ
ಉಚಿತ ಗ್ಯಾರಂಟಿಗೆ ‘ಕೈ’ ಶಾಸಕರಿಂದಲೇ ಮತ್ತೆ ಅಪಸ್ವರ