AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಶ್ತ್ವಾರಾದಲ್ಲಿ ಐಇಡಿ ಪತ್ತೆ; ಸೇತುವೆ ಬಳಿಯಿದ್ದ ಸ್ಫೋಟಕವನ್ನು ನಿಷ್ಕ್ರಿಯಗೊಳಿಸಿದ ಭದ್ರತಾ ಪಡೆಗಳು

ಇತ್ತೀಚೆಗೆ ಜಮ್ಮು-ಕಾಶ್ಮೀರ, ಶ್ರೀನಗರಗಳಲ್ಲಿ ಡ್ರೋನ್​ ಹಾರಾಟ, ಐಇಡಿ ಸ್ಫೋಟಕ ಪತ್ತೆ ಪ್ರಕರಣಗಳು ಹೆಚ್ಚಾಗಿವೆ. ಇಲ್ಲಿನ ಭದ್ರತಾ ಪಡೆಗಳು ಸದಾ ಅಲರ್ಟ್​ ಆಗಿರುತ್ತಿದ್ದು, ಉಗ್ರಚಟುವಟಿಕೆಗಳನ್ನು ಯಶಸ್ವಿಯಾಗಿ ನಿಯಂತ್ರಣ ಮಾಡುತ್ತಿವೆ.

ಕಿಶ್ತ್ವಾರಾದಲ್ಲಿ ಐಇಡಿ ಪತ್ತೆ; ಸೇತುವೆ ಬಳಿಯಿದ್ದ ಸ್ಫೋಟಕವನ್ನು ನಿಷ್ಕ್ರಿಯಗೊಳಿಸಿದ ಭದ್ರತಾ ಪಡೆಗಳು
ಸೇತುವೆ ಬಳಿ ಪತ್ತೆಯಾದ ಐಇಡಿಯನ್ನು ನಿಷ್ಕ್ರಿಯಗೊಳಿಸಿದ ಭದ್ರತಾ ಪಡೆ
TV9 Web
| Edited By: |

Updated on: Aug 14, 2021 | 7:09 PM

Share

ಶ್ರೀನಗರ: ಇಲ್ಲಿನ ಕಿಶ್ತ್ವಾರ್​-ಕೇಶ್ವಾನ್​ ರಸ್ತೆಯಲ್ಲಿ ಇಡಲಾಗಿದ್ದ ಐಇಡಿ (IED) ಸ್ಫೋಟಕವನ್ನು ಭದ್ರತಾ ಪಡೆಗಳು (Security Forces) ಇಂದು ನಿಷ್ಕ್ರಿಯಗೊಳಿಸಿವೆ. ಗ್ರೇಟರ್​ ಕಾಶ್ಮೀರದ ಪೊಲೀಸ್​ ವಕ್ತಾರ (Police Spokesperson) ಈ ಬಗ್ಗೆ ಮಾಹಿತಿ ನೀಡಿದ್ದು, ಇಂದು ಮುಂಜಾನೆ ಕಿಶ್ತ್ವಾರ್​-ಕೇಶ್ವಾನ್ (Kishtwar-Keshwan)​ ರಸ್ತೆಯಲ್ಲಿ ಸೇನೆಯ 26 ಆರ್​ಆರ್​ ಮತ್ತು ಸ್ಥಳೀಯ ಪೊಲೀಸರು ಗಸ್ತು ತಿರುಗುತ್ತಿದ್ದರು. ಈ ವೇಳೆ ಇಲ್ಲಿನ ಕುರಿಯಾ ಸೇತುವೆ (Kuriya Bridge) ಬಳಿ, ರಕ್ಷಣಾ ಪಡೆಗಳ ಶ್ವಾನ (Dog Scout)ಗಳ ಸಹಾಯದಿಂದ ಸ್ಫೋಟಕ ಸಾಧನವನ್ನು ಪತ್ತೆಹಚ್ಚಲಾಗಿದೆ ಎಂದು ಹೇಳಿದ್ದಾರೆ. ಐಇಡಿ ಇದ್ದ ಸ್ಥಳದಲ್ಲೇ ಅದನ್ನು ನಿಷ್ಕ್ರಿಯಗೊಳಿಸಲಾಯಿತು ಎಂದೂ ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ ಜಮ್ಮು-ಕಾಶ್ಮೀರ, ಶ್ರೀನಗರಗಳಲ್ಲಿ ಡ್ರೋನ್​ ಹಾರಾಟ, ಐಇಡಿ ಸ್ಫೋಟಕ ಪತ್ತೆ ಪ್ರಕರಣಗಳು ಹೆಚ್ಚಾಗಿವೆ. ಇಲ್ಲಿನ ಭದ್ರತಾ ಪಡೆಗಳು ಸದಾ ಅಲರ್ಟ್​ ಆಗಿರುತ್ತಿದ್ದು, ಉಗ್ರಚಟುವಟಿಕೆಗಳನ್ನು ಯಶಸ್ವಿಯಾಗಿ ನಿಯಂತ್ರಣ ಮಾಡುತ್ತಿವೆ. ಜುಲೈನಲ್ಲಿ ಕುಲ್ಗಾಮ್ ಜಿಲ್ಲೆಯ, ಕ್ವಾಜಿಗುಂಡ ಪ್ರದೇಶದಲ್ಲಿ ಐಇಡಿ ಪತ್ತೆಯಾಗಿತ್ತು. ಹಾಗೇ, ಐದು ದಿನಗಳ ಹಿಂದೆ ಪಂಜಾಬ್​​ನ ಅಮೃತಸರ್​​ನ ದೆಲೆಕೆ ಎಂಬ ಹಳ್ಳಿಯಲ್ಲಿ ಟಿಫಿನ್​ ಬಾಕ್ಸ್​ನಲ್ಲಿ ಐಇಡಿ ಪತ್ತೆಯಾಗಿತ್ತು. ಸ್ವಾತಂತ್ರ್ಯ ದಿನಾಚರಣೆ ಸಮೀಪಿಸುತ್ತಿರುವಂತೆಯೇ ಇಂಥ ಉಗ್ರಕೃತ್ಯಗಳೂ ಹೆಚ್ಚುತ್ತಿವೆ. ಹಾಗೇ, ದೆಹಲಿ ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆಯಿದ್ದು, ಈ ಮಧ್ಯೆ ಅಲ್ಲಿನ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಇದನ್ನೂ ಓದಿ: Health Tips: ಹಲವು ಅನಾರೋಗ್ಯ ಸಮಸ್ಯೆಗಳಿಗೆ ಪಪ್ಪಾಯಿ ಎಲೆಗಳೇ ಔಷಧಿ

(IED Explosive detected along the Kishtwar Keshwan road of Jammu Kashmir)

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು