AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಮ್ಲಜನಕ ಪೂರೈಕೆಗೆ ಯಾರೇ ಅಡ್ಡಿಯಾದರೂ ಅವರನ್ನು ನೇಣಿಗೆ ಏರಿಸುತ್ತೇವೆ: ದೆಹಲಿ ಹೈಕೋರ್ಟ್ ಖಡಕ್​ ವಾರ್ನಿಂಗ್​​

ಇನ್ನು ಆಕ್ಸಿಜನ್​ಗೆ ಸಂಬಂಧಪಟ್ಟಂತೆ ದೆಹಲಿ ಸರ್ಕಾರ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಕೇಂದ್ರ ಸರ್ಕಾರ ಹೈಕೋರ್ಟ್​ಗೆ ಹೇಳಿದೆ. ಉಳಿದೆಲ್ಲ ರಾಜ್ಯಗಳೂ ಆಮ್ಲಜನಕ ಪೂರೈಕೆಗಾಗಿ ಟ್ಯಾಂಕರ್​ ಸೇರಿ ಎಲ್ಲ ರೀತಿಯ ವ್ಯವಸ್ಥೆಯನ್ನು ಮಾಡಿಕೊಳ್ಳುತ್ತಿವೆ ಎಂದು ಹೇಳಿದೆ.

ಆಮ್ಲಜನಕ ಪೂರೈಕೆಗೆ ಯಾರೇ ಅಡ್ಡಿಯಾದರೂ ಅವರನ್ನು ನೇಣಿಗೆ ಏರಿಸುತ್ತೇವೆ: ದೆಹಲಿ ಹೈಕೋರ್ಟ್ ಖಡಕ್​ ವಾರ್ನಿಂಗ್​​
ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on:Apr 24, 2021 | 3:29 PM

ದೆಹಲಿ: ವೈದ್ಯಕೀಯ ಆಮ್ಲಜನಕ ಪೂರೈಕೆಗೆ ಯಾರೇ ಅಡ್ಡಿಪಡಿಸಿದರೂ, ಖಂಡಿತ ಅವರನ್ನು ಸುಮ್ಮನೆ ಬಿಡುವುದಿಲ್ಲ, ನೇಣಿಗೆ ಏರಿಸುತ್ತೇವೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ದೆಹಲಿಯಲ್ಲಿ ಎರಡ್ಮೂರುವ ಆಸ್ಪತ್ರೆಗಳು ಆಮ್ಲಜನಕ ಕೊರತೆಯ ಬಗ್ಗೆ ಹೈಕೋರ್ಟ್​ಗೆ ದೂರು ನೀಡಿ ಅರ್ಜಿ ಸಲ್ಲಿಸಿವೆ. ಹಾಗೇ, ದೆಹಲಿಗೆ ಒಟ್ಟಾರೆ 480 ಮೆಟ್ರಿಕ್​ ಟನ್​​ಗಳಷ್ಟು ಆಕ್ಸಿಜನ್​ ಪೂರೈಕೆ ಆಗದೆ ಇದ್ದರೆ, ಇಡೀ ವೈದ್ಯಕೀಯ ವ್ಯವಸ್ಥೆ ಕುಸಿಯುತ್ತದೆ ಎಂದು ಸರ್ಕಾರವೂ ಕೋರ್ಟ್​ಗೆ ತಿಳಿಸಿದೆ.

ಕಳೆದ 24ಗಂಟೆಯಲ್ಲಿ ಎರಡು ಆಸ್ಪತ್ರೆಗಳಲ್ಲಿ 20ಕ್ಕೂ ಹೆಚ್ಚು ರೋಗಿಗಳು ಸಾವನ್ನಪ್ಪಿದ್ದಾರೆ. ತ್ವರಿತವಾಗಿ 480 ಮೆಟ್ರಿಕ್​ ಟನ್​​ಗಳಷ್ಟು ಆಕ್ಸಿಜನ್​ ಬೇಕು. ನಿನ್ನೆಯವರೆಗೆ ಕೇವಲ 297 ಮೆಟ್ರಿಕ್ ಟನ್​​ಗಳಷ್ಟು ಮಾತ್ರ ಆಕ್ಸಿಜನ್​ ಲಭ್ಯವಾಗಿದೆ. ಹೀಗೆ ಆದರೆ ಇನ್ನಷ್ಟು ವಿನಾಶ ತಪ್ಪಿದ್ದಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಅವರು ಹೈಕೋರ್ಟ್​ಗೆ ಹೇಳಿದ್ದಾರೆ.

ಈ ಎಲ್ಲದರ ಬಗ್ಗೆ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್​, ದೆಹಲಿ ಯಾವಾಗ 480 ಮೆಟ್ರಿಕ್​ ಟನ್​​ಗಳಷ್ಟು ಆಕ್ಸಿಜನ್​ ಪಡೆಯುತ್ತದೆ? ದಯವಿಟ್ಟು ನಮಗೆ ಮಾಹಿತಿ ನೀಡಿ ಎಂದು ಕೇಂದ್ರ ಸರ್ಕಾರಕ್ಕೆ ಹೇಳಿದೆ. ಆಮ್ಲಜನಕ ಪೂರೈಕೆಗೆ ಯಾರು ಅಡ್ಡಿಯಾಗುತ್ತಿದ್ದಾರೆ ಎಂಬುದನ್ನು ತಿಳಿಸಿ ಎಂದು ದೆಹಲಿ ಸರ್ಕಾರಕ್ಕೂ ಕೋರ್ಟ್ ಸೂಚನೆ ನೀಡಿದೆ.

ಇನ್ನು ಆಕ್ಸಿಜನ್​ಗೆ ಸಂಬಂಧಪಟ್ಟಂತೆ ದೆಹಲಿ ಸರ್ಕಾರ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಕೇಂದ್ರ ಸರ್ಕಾರ ಹೈಕೋರ್ಟ್​ಗೆ ಹೇಳಿದೆ. ಉಳಿದೆಲ್ಲ ರಾಜ್ಯಗಳೂ ಆಮ್ಲಜನಕ ಪೂರೈಕೆಗಾಗಿ ಟ್ಯಾಂಕರ್​ ಸೇರಿ ಎಲ್ಲ ರೀತಿಯ ವ್ಯವಸ್ಥೆಯನ್ನು ಮಾಡಿಕೊಳ್ಳುತ್ತಿವೆ. ನಾವು ಅವರಿಗೆ ನಿರ್ದೇಶನ, ನೆರವು ನೀಡುತ್ತಿದ್ದೇವೆ ಅಷ್ಟೆ. ಆದರೆ ದೆಹಲಿ ಸರ್ಕಾರ ಸಂಪೂರ್ಣವಾಗಿ ನಮ್ಮ ಮೇಲೆ ಅವಲಂಬಿತವಾಗಿದೆ. ಇಲ್ಲಿನ ಸರ್ಕಾರ, ಅಧಿಕಾರಿಗಳು ಅವರ ಕೆಲಸವನ್ನು ಮಾಡಬೇಕಾಗಿದೆ ಎಂದು ತಿಳಿಸಿದೆ.

ರಾಷ್ಟ್ರರಾಜಧಾನಿಯಲ್ಲಿ ಆಕ್ಸಿಜನ್ ಅಭಾವದ ಸಮಸ್ಯೆ ತುಸು ಹೆಚ್ಚಾಗೇ ಬಾಧಿಸುತ್ತಿದೆ. ಜೈಪುರ ಗೋಲ್ಡನ್​ ಆಸ್ಪತ್ರೆ, ಗಂಗಾರಾಮ್ ಆಸ್ಪತ್ರೆಗಳಲ್ಲಿ ಸುಮಾರು 25 ರೋಗಿಗಳು ಆಮ್ಲಜನಕ ಇಲ್ಲದೆ ಮೃತಪಟ್ಟಿದ್ದಾರೆ. ಇದನ್ನು ಹೊರತುಪಡಿಸಿ ಕೆಲವು ಆಸ್ಪತ್ರೆಗಳು, ಆಮ್ಲಜನಕ ಬಿಕ್ಕಟ್ಟಿನ ಸಮಸ್ಯೆಗೆ ಪರಿಹಾರ ಕೊಡಿ ಹೈಕೋರ್ಟ್ ಮೆಟ್ಟಿಲೇರಿವೆ. ಇನ್ನು ಜೈಪುರ ಗೋಲ್ಡನ್​ ಆಸ್ಪತ್ರೆ ಕೂಡ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದು, ಈಗಾಗಲೇ 25 ರೋಗಿಗಳನ್ನು ಕಳೆದುಕೊಂಡಿದ್ದೇವೆ. ಆದರೆ ಆಕ್ಸಿಜನ್ ಪೂರೈಕೆ ಆಗಿಲ್ಲ. ಹೀಗಾದರೆ ಇವತ್ತು ಮತ್ತೆ ಅನಾಹುತ ತಪ್ಪಿದ್ದಲ್ಲ ಎಂದು ಹೇಳಿಕೊಂಡಿದೆ.

ನಮಗೆ 8000 ಲೀಟರ್​ ಆಮ್ಲಜನಕ ಬೇಕಿತ್ತು. ಆದರೆ ಕೇವಲ 500 ಲೀ.ಪೂರೈಕೆಯಾಗಿದೆ. ಹೀಗಾದರೆ ನಾವು ಮಾಡುವುದಾದರೂ ಏನು ಎಂದು ಆಸ್ಪತ್ರೆಯೊಂದು ದೆಹಲಿ ಹೈಕೋರ್ಟ್​ಗೆ ಪ್ರಶ್ನಿಸಿದೆ. ದೆಹಲಿ ಹೈಕೋರ್ಟ್ ಸಹ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಈ ಮಧ್ಯೆ ಕೇಂದ್ರ ಸರ್ಕಾರ, ನಾವು ಸರಿಯಾಗಿಯೇ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿಕೊಂಡಿದೆ.

ಇದನ್ನೂ ಓದಿ: ಮಾಡಿದ ತಪ್ಪಿಗೆ ಪ್ರಾಯಶ್ಚಿತ?; ತಾಯಾಣೆ ಬಡ ಮಕ್ಕಳಿಗೆ 10 ಸಾವಿರ ಮೊಟ್ಟೆ ದಾನ ಮಾಡ್ತೀನಿ ಎಂದ ಪ್ರಶಾಂತ್​ ಸಂಬರಗಿ

ಪ್ರಭಾವ ಬೀರಿದರೂ ನನ್ನ ಆಪ್ತನನ್ನ ಕಾಪಾಡಿಕೊಳ್ಳೋಕೆ ಆಗಲಿಲ್ಲ, ಎಲ್ಲರೂ ಮನೆಯಲ್ಲೇ ಇರೀ: ನಟ ಅನಿರುದ್ಧ್ ಕಳಕಳಿ

Published On - 3:09 pm, Sat, 24 April 21

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ