AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳು ಬೆಳಗ್ಗೆ 7 ಗಂಟೆಗೆ ಶಾಲೆಗೆ ಹೋಗುತ್ತಾರೆ ಹೀಗಿರುವಾಗ ಸುಪ್ರೀಂಕೋರ್ಟ್​​​ 9 ಗಂಟೆಗೆ ಕೆಲಸ ಆರಂಭಿಸಬಹುದು: ನ್ಯಾಯಮೂರ್ತಿ ಲಲಿತ್​​

ಶುಕ್ರವಾರ ಸುಪ್ರೀಂಕೋರ್ಟ್​​ನಲ್ಲಿ ಕಲಾಪ ಆರಂಭವಾಗುವ ಸಾಮಾನ್ಯ ಸಮಯಕ್ಕಿಂತ ಒಂದು ಗಂಟೆ ಮುಂಚೆ ಕೆಲಸ ಆರಂಭವಾಗಿದೆ. ಸುಪ್ರೀಂಕೋರ್ಟ್ ವಾರದ ದಿನಗಳಲ್ಲಿ ಬೆಳಗ್ಗೆ 10.30ಕ್ಕೆ ಆರಂಭವಾಗುತ್ತದೆ.

ಮಕ್ಕಳು ಬೆಳಗ್ಗೆ 7 ಗಂಟೆಗೆ ಶಾಲೆಗೆ ಹೋಗುತ್ತಾರೆ ಹೀಗಿರುವಾಗ ಸುಪ್ರೀಂಕೋರ್ಟ್​​​ 9 ಗಂಟೆಗೆ ಕೆಲಸ ಆರಂಭಿಸಬಹುದು: ನ್ಯಾಯಮೂರ್ತಿ ಲಲಿತ್​​
ಸುಪ್ರೀಂಕೋರ್ಟ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jul 15, 2022 | 12:56 PM

Share

ಮಕ್ಕಳು ಬೆಳಗ್ಗೆ 7 ಗಂಟೆಗೆ ಶಾಲೆಗೆ ಹೋಗುತ್ತಾರೆ. ಹೀಗಿರುವಾಗ ನ್ಯಾಯಮೂರ್ತಿ ಮತ್ತು ವಕೀಲರು 9 ಗಂಟೆಗೆ ತಮ್ಮ ಕೆಲಸ ಆರಂಭ ಮಾಡಬಹುದಲ್ಲವೇ ಎಂದು ನ್ಯಾಯಮೂರ್ತಿ ಯು ಲಲಿತ್ (Justice Lalit) ಹೇಳಿದ್ದಾರೆ. ಶುಕ್ರವಾರ ಸುಪ್ರೀಂಕೋರ್ಟ್​​ನಲ್ಲಿ (Supreme Court) ಕಲಾಪ ಆರಂಭವಾಗುವ ಸಾಮಾನ್ಯ ಸಮಯಕ್ಕಿಂತ ಒಂದು ಗಂಟೆ ಮುಂಚೆ ಕೆಲಸ ಆರಂಭವಾಗಿದೆ. ಸುಪ್ರೀಂಕೋರ್ಟ್ ವಾರದ ದಿನಗಳಲ್ಲಿ ಬೆಳಗ್ಗೆ 10.30ಕ್ಕೆ ಆರಂಭವಾಗುತ್ತದೆ. 4 ಗಂಟೆಯವರೆಗೆ ಕೆಲಸ ನಡೆಯುತ್ತದೆ. ಇದರಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆ ವರೆಗೆ ಭೋಜನ ವಿರಾಮವಿರುತ್ತದೆ.ಸಾಮಾನ್ಯ ದಿನಕ್ಕಿಂತ ವ್ಯತ್ಯಸ್ತವಾಗಿ ಶುಕ್ರವಾರ ನ್ಯಾಯಮೂರ್ತಿ ಲಲಿತ್ ಅವರು ಬೆಳಗ್ಗೆ 9.30ಕ್ಕೆ ವಿಚಾರಣೆ ಆರಂಭಿಸಿದ್ದಾರೆ. ಅವರ ನ್ಯಾಯಪೀಠದಲ್ಲಿ ಎಸ್ ರವೀಂದ್ರ ಭಟ್ ಮತ್ತು ಸುಧಾಂಶು ಧುಲಿಯಾ ಇದ್ದರು. ಜಾಮೀನು ಅರ್ಜಿಯೊಂದರ ವಿಚಾರಣೆಗೆ ಹಾಜರಾದ ಮಾಜಿ ಅಟಾರ್ನಿ ಜನರಲ್ ಮುಕುಲ್ ರಸ್ಟೋಗಿ ಬೇಗನೆ ಕೋರ್ಟ್ ಕಲಾಪ ಆರಂಭಿಸಿದ್ದಕ್ಕೆ ನ್ಯಾಯಪೀಠವನ್ನು ಶ್ಲಾಘಿಸಿದ್ದಾರೆ. ಬೆಳಗ್ಗೆ 9.30 ಕೋರ್ಟ್ ಕಲಾಪ ಆರಂಭಿಸಲು ಸರಿಯಾದ ಸಮಯ ಎಂದು ರಸ್ಟೋಗಿ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಲಲಿತ್ ಅವರು ಕೋರ್ಟ್ ಕಲಾಪ ಯಾವತ್ತೂ ಬೆಳಗ್ಗೆ ಆರಂಭವಾಗಬೇಕು ಎಂಬ ನಿಲುವು ನನ್ನದು. ನಾವು ಬೆಳಗ್ಗೆ 9 ಗಂಟೆಗೆ ಕಲಾಪ ಆರಂಭಿಸಬೇಕು. ನಮ್ಮ ಮಕ್ಕಳು ಬೆಳಗ್ಗೆ 7ಗಂಟೆಗೆ ಶಾಲೆಗೆ ಹೋಗುತ್ತಾರೆ. ಅವರು ಅಷ್ಟು ಬೆಳಗ್ಗೆ ಶಾಲೆಗೆ ಹೋಗಲು ಸಾಧ್ಯವಾಗುವುದಾದರೆ ನಾವು ಯಾಕೆ ಬೆಳಗ್ಗೆ 9 ಗಂಟೆಗೆ ಕೋರ್ಟ್ ಕಲಾಪ ಆರಂಭ ಮಾಡಬಾರದು? ಎಂದು ಹೇಳಿದ್ದಾರೆ.

ಆಗಸ್ಟ್ ತಿಂಗಳಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಲಿರುವ ನ್ಯಾಯಮೂರ್ತಿ ಲಲಿತ್ ಅವರು ಸುಪ್ರೀಂಕೋರ್ಟ್ ಬೆಳಗ್ಗೆ 9 ಗಂಟೆಗೆ ಆರಂಭವಾಗಬೇಕು. ಬೆಳಗ್ಗೆ 11.30ಕ್ಕೆ ಅರ್ಧ ಗಂಟೆ ವಿರಾಮ. ಆಮೇಲೆ 12 ಗಂಟೆಗೆ ಮತ್ತೆ ಆರಂಭವಾಗಿ ಮಧ್ಯಾಹ್ನ 2 ಗಂಟೆಗೆ ಮುಗಿಯಬೇಕು. ಸಂಜೆ ನಮಗೆ ಹೆಚ್ಚು ಹೊತ್ತು ಸಿಗುತ್ತದೆ ಎಂದು  ಹೇಳಿದ್ದಾರೆ. ಹೊಸ ವಿಚಾರಣೆ ಮತ್ತು ಪ್ರಕರಣಗಳು ಸಾಮಾನ್ಯವಾಗಿ ವಿಚಾರಣೆಗೆ ಹೆಚ್ಚು ಹೊತ್ತು ತೆಗೆದುಕೊಳ್ಳುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
ಉತ್ತರ ಪ್ರದೇಶದಲ್ಲಿ ತನ್ನ ವಿರುದ್ಧವಿರುವ 6 ಕೇಸುಗಳನ್ನು ರದ್ದು ಮಾಡುವಂತೆ ಸುಪ್ರೀಂಗೆ ಮನವಿ ಸಲ್ಲಿಸಿದ ಜುಬೇರ್
Image
ರಾಮಸೇತುವನ್ನು ಪಾರಂಪರಿಕ ಸ್ಮಾರಕವಾಗಿ ಘೋಷಿಸಲು ಮನವಿ; ಸುಪ್ರೀಂನಲ್ಲಿ ಜುಲೈ 26ಕ್ಕೆ ವಿಚಾರಣೆ
Image
ಕಟ್ಟಡ ನೆಲಸಮ ನಿಷೇಧಿಸುವ ಆದೇಶ ಅಂಗೀಕರಿಸಲು ನಿರಾಕರಿಸಿದ ಸುಪ್ರೀಂಕೋರ್ಟ್​​

Published On - 12:35 pm, Fri, 15 July 22

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ