AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳು ಬೆಳಗ್ಗೆ 7 ಗಂಟೆಗೆ ಶಾಲೆಗೆ ಹೋಗುತ್ತಾರೆ ಹೀಗಿರುವಾಗ ಸುಪ್ರೀಂಕೋರ್ಟ್​​​ 9 ಗಂಟೆಗೆ ಕೆಲಸ ಆರಂಭಿಸಬಹುದು: ನ್ಯಾಯಮೂರ್ತಿ ಲಲಿತ್​​

ಶುಕ್ರವಾರ ಸುಪ್ರೀಂಕೋರ್ಟ್​​ನಲ್ಲಿ ಕಲಾಪ ಆರಂಭವಾಗುವ ಸಾಮಾನ್ಯ ಸಮಯಕ್ಕಿಂತ ಒಂದು ಗಂಟೆ ಮುಂಚೆ ಕೆಲಸ ಆರಂಭವಾಗಿದೆ. ಸುಪ್ರೀಂಕೋರ್ಟ್ ವಾರದ ದಿನಗಳಲ್ಲಿ ಬೆಳಗ್ಗೆ 10.30ಕ್ಕೆ ಆರಂಭವಾಗುತ್ತದೆ.

ಮಕ್ಕಳು ಬೆಳಗ್ಗೆ 7 ಗಂಟೆಗೆ ಶಾಲೆಗೆ ಹೋಗುತ್ತಾರೆ ಹೀಗಿರುವಾಗ ಸುಪ್ರೀಂಕೋರ್ಟ್​​​ 9 ಗಂಟೆಗೆ ಕೆಲಸ ಆರಂಭಿಸಬಹುದು: ನ್ಯಾಯಮೂರ್ತಿ ಲಲಿತ್​​
ಸುಪ್ರೀಂಕೋರ್ಟ್
TV9 Web
| Edited By: |

Updated on:Jul 15, 2022 | 12:56 PM

Share

ಮಕ್ಕಳು ಬೆಳಗ್ಗೆ 7 ಗಂಟೆಗೆ ಶಾಲೆಗೆ ಹೋಗುತ್ತಾರೆ. ಹೀಗಿರುವಾಗ ನ್ಯಾಯಮೂರ್ತಿ ಮತ್ತು ವಕೀಲರು 9 ಗಂಟೆಗೆ ತಮ್ಮ ಕೆಲಸ ಆರಂಭ ಮಾಡಬಹುದಲ್ಲವೇ ಎಂದು ನ್ಯಾಯಮೂರ್ತಿ ಯು ಲಲಿತ್ (Justice Lalit) ಹೇಳಿದ್ದಾರೆ. ಶುಕ್ರವಾರ ಸುಪ್ರೀಂಕೋರ್ಟ್​​ನಲ್ಲಿ (Supreme Court) ಕಲಾಪ ಆರಂಭವಾಗುವ ಸಾಮಾನ್ಯ ಸಮಯಕ್ಕಿಂತ ಒಂದು ಗಂಟೆ ಮುಂಚೆ ಕೆಲಸ ಆರಂಭವಾಗಿದೆ. ಸುಪ್ರೀಂಕೋರ್ಟ್ ವಾರದ ದಿನಗಳಲ್ಲಿ ಬೆಳಗ್ಗೆ 10.30ಕ್ಕೆ ಆರಂಭವಾಗುತ್ತದೆ. 4 ಗಂಟೆಯವರೆಗೆ ಕೆಲಸ ನಡೆಯುತ್ತದೆ. ಇದರಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆ ವರೆಗೆ ಭೋಜನ ವಿರಾಮವಿರುತ್ತದೆ.ಸಾಮಾನ್ಯ ದಿನಕ್ಕಿಂತ ವ್ಯತ್ಯಸ್ತವಾಗಿ ಶುಕ್ರವಾರ ನ್ಯಾಯಮೂರ್ತಿ ಲಲಿತ್ ಅವರು ಬೆಳಗ್ಗೆ 9.30ಕ್ಕೆ ವಿಚಾರಣೆ ಆರಂಭಿಸಿದ್ದಾರೆ. ಅವರ ನ್ಯಾಯಪೀಠದಲ್ಲಿ ಎಸ್ ರವೀಂದ್ರ ಭಟ್ ಮತ್ತು ಸುಧಾಂಶು ಧುಲಿಯಾ ಇದ್ದರು. ಜಾಮೀನು ಅರ್ಜಿಯೊಂದರ ವಿಚಾರಣೆಗೆ ಹಾಜರಾದ ಮಾಜಿ ಅಟಾರ್ನಿ ಜನರಲ್ ಮುಕುಲ್ ರಸ್ಟೋಗಿ ಬೇಗನೆ ಕೋರ್ಟ್ ಕಲಾಪ ಆರಂಭಿಸಿದ್ದಕ್ಕೆ ನ್ಯಾಯಪೀಠವನ್ನು ಶ್ಲಾಘಿಸಿದ್ದಾರೆ. ಬೆಳಗ್ಗೆ 9.30 ಕೋರ್ಟ್ ಕಲಾಪ ಆರಂಭಿಸಲು ಸರಿಯಾದ ಸಮಯ ಎಂದು ರಸ್ಟೋಗಿ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಲಲಿತ್ ಅವರು ಕೋರ್ಟ್ ಕಲಾಪ ಯಾವತ್ತೂ ಬೆಳಗ್ಗೆ ಆರಂಭವಾಗಬೇಕು ಎಂಬ ನಿಲುವು ನನ್ನದು. ನಾವು ಬೆಳಗ್ಗೆ 9 ಗಂಟೆಗೆ ಕಲಾಪ ಆರಂಭಿಸಬೇಕು. ನಮ್ಮ ಮಕ್ಕಳು ಬೆಳಗ್ಗೆ 7ಗಂಟೆಗೆ ಶಾಲೆಗೆ ಹೋಗುತ್ತಾರೆ. ಅವರು ಅಷ್ಟು ಬೆಳಗ್ಗೆ ಶಾಲೆಗೆ ಹೋಗಲು ಸಾಧ್ಯವಾಗುವುದಾದರೆ ನಾವು ಯಾಕೆ ಬೆಳಗ್ಗೆ 9 ಗಂಟೆಗೆ ಕೋರ್ಟ್ ಕಲಾಪ ಆರಂಭ ಮಾಡಬಾರದು? ಎಂದು ಹೇಳಿದ್ದಾರೆ.

ಆಗಸ್ಟ್ ತಿಂಗಳಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಲಿರುವ ನ್ಯಾಯಮೂರ್ತಿ ಲಲಿತ್ ಅವರು ಸುಪ್ರೀಂಕೋರ್ಟ್ ಬೆಳಗ್ಗೆ 9 ಗಂಟೆಗೆ ಆರಂಭವಾಗಬೇಕು. ಬೆಳಗ್ಗೆ 11.30ಕ್ಕೆ ಅರ್ಧ ಗಂಟೆ ವಿರಾಮ. ಆಮೇಲೆ 12 ಗಂಟೆಗೆ ಮತ್ತೆ ಆರಂಭವಾಗಿ ಮಧ್ಯಾಹ್ನ 2 ಗಂಟೆಗೆ ಮುಗಿಯಬೇಕು. ಸಂಜೆ ನಮಗೆ ಹೆಚ್ಚು ಹೊತ್ತು ಸಿಗುತ್ತದೆ ಎಂದು  ಹೇಳಿದ್ದಾರೆ. ಹೊಸ ವಿಚಾರಣೆ ಮತ್ತು ಪ್ರಕರಣಗಳು ಸಾಮಾನ್ಯವಾಗಿ ವಿಚಾರಣೆಗೆ ಹೆಚ್ಚು ಹೊತ್ತು ತೆಗೆದುಕೊಳ್ಳುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
ಉತ್ತರ ಪ್ರದೇಶದಲ್ಲಿ ತನ್ನ ವಿರುದ್ಧವಿರುವ 6 ಕೇಸುಗಳನ್ನು ರದ್ದು ಮಾಡುವಂತೆ ಸುಪ್ರೀಂಗೆ ಮನವಿ ಸಲ್ಲಿಸಿದ ಜುಬೇರ್
Image
ರಾಮಸೇತುವನ್ನು ಪಾರಂಪರಿಕ ಸ್ಮಾರಕವಾಗಿ ಘೋಷಿಸಲು ಮನವಿ; ಸುಪ್ರೀಂನಲ್ಲಿ ಜುಲೈ 26ಕ್ಕೆ ವಿಚಾರಣೆ
Image
ಕಟ್ಟಡ ನೆಲಸಮ ನಿಷೇಧಿಸುವ ಆದೇಶ ಅಂಗೀಕರಿಸಲು ನಿರಾಕರಿಸಿದ ಸುಪ್ರೀಂಕೋರ್ಟ್​​

Published On - 12:35 pm, Fri, 15 July 22

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?