AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚಾದರೆ ಲಾಕ್​ಡೌನ್​ ಅನಿವಾರ್ಯ; ಸಿಎಂ ಉದ್ಧವ್​ ಠಾಕ್ರೆ

ಮಹಾರಾಷ್ಟ್ರದ ಕೊವಿಡ್ ಪರಿಸ್ಥಿತಿ ಗಂಭೀರವಾಗಿದೆ ಎಂದು ಕರೆದಿರುವ ಠಾಕ್ರೆ, ದೈನಂದಿನ ಅಂಕಿ ಅಂಶಗಳ ಪ್ರಸ್ತುತ ಏರಿಕೆ ಆತಂಕ ಮೂಡಿಸಿದೆ ಎಂದಿದ್ದಾರೆ.

ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚಾದರೆ ಲಾಕ್​ಡೌನ್​ ಅನಿವಾರ್ಯ; ಸಿಎಂ ಉದ್ಧವ್​ ಠಾಕ್ರೆ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​​ ಠಾಕ್ರೆ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Feb 21, 2021 | 9:25 PM

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್​ ಪ್ರಕರಣಗಳು ಮತ್ತೆ ಹೆಚ್ಚಿದೆ. ಇದು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ನೇತೃತ್ವದ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಪ್ರಕರಣಗಳು ಹೀಗೆಯೇ ಮುಂದುವರಿದರೆ ಲಾಕ್​ಡೌನ್​ ಘೋಷಣೆ ಮಾಡುವ ನಿರ್ಧಾರ ತೆಗೆದುಕೊಳ್ಳುವುದು ಅನಿವಾರ್ಯ ಆಗಲಿದೆ ಎಂದು ಉದ್ಧವ್​ ಅಭಿಪ್ರಾಯಪಟ್ಟಿದ್ದಾರೆ.

ಮಹಾರಾಷ್ಟ್ರದ ಕೊವಿಡ್ ಪರಿಸ್ಥಿತಿ ಗಂಭೀರವಾಗಿದೆ ಎಂದು ಕರೆದಿರುವ ಠಾಕ್ರೆ, ದೈನಂದಿನ ಅಂಕಿ ಅಂಶಗಳ ಪ್ರಸ್ತುತ ಏರಿಕೆ ಆತಂಕ ಮೂಡಿಸಿದೆ. ಇದು ಸೋಂಕಿನ ಹೊಸ ಅಲೆಯೇ ಎಂದು ಕಂಡುಹಿಡಿಯಲು ಒಂದೆರಡು ವಾರಗಳು ಬೇಕು. ಮತ್ತೊಂದು ಲಾಕ್​​ಡೌನ್ ತಪ್ಪಿಸಲು ಜನರು ಕೊರೊನಾ ವೈರಸ್ ನಿಯಂತ್ರಣ ಶಿಷ್ಟಾಚಾರಗಳನ್ನು ಅನುಸರಿಸಬೇಕೆಂದು ಅವರು ಎಚ್ಚರಿಸಿದರು.

ನಮಗೆ ಲಾಕ್​ಡೌನ್​ ಅಗತ್ಯವಿದೆಯೇ? ನೀವು ಜವಾಬ್ದಾರಿಯುತವಾಗಿ ವರ್ತಿಸಿ. ಮುಂದಿನ ಎಂಟು ದಿನಗಳಲ್ಲಿ ಪರಿಸ್ಥಿತಿ ಸ್ಪಷ್ಟವಾಗುತ್ತದೆ. ಲಾಕ್‌ಡೌನ್ ಬೇಡದವರು ಮಾಸ್ಕ್​ ಧರಿಸುತ್ತಾರೆ. ಲಾಕ್‌ಡೌನ್ ಬಯಸುವವರು ಮಾಸ್ಕ್​ ಧರಿಸುವುದಿಲ್ಲ. ಮಾಸ್ಕ್​ ಧರಿಸಿ, ಲಾಕ್​ಡೌನ್​ ಬೇಡವೆನ್ನಿ ಎಂದು ಕರೆಕೊಟ್ಟರು ಉದ್ಧವ್​.

ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಹೆಚ್ಚುತ್ತಿವೆ. ರಾಜ್ಯದಲ್ಲಿ ಈ ಮೊದಲು 2,000-2,500 ಪ್ರಕರಣಗಳು ವರದಿ ಆಗುತ್ತಿದ್ದವು. ಈಗ, ಇದು ಸುಮಾರು 7,000ಕ್ಕೆ ಏರಿಕೆ ಆಗಿದೆ. ಸಕ್ರಿಯ ಪ್ರಕರಣಗಳು 40,000 ದಿಂದ 53,000ಕ್ಕೆ ಏರಿದೆ ಎಂದು ಉದ್ಧವ್​ ಹೇಳಿದರು.

ಎಲ್ಲಾ ರಾಷ್ಟ್ರಗಳಲ್ಲಿ ಕೊರೊನಾ ಕಡಿಮೆ ಆಗಿದ್ದರೂ ಮಹಾರಾಷ್ಟ್ರದಲ್ಲಿ ಮಾತ್ರ ಕೊರೊನಾ ವೈರಸ್​ ಕಡಿಮೆ ಆಗಿರಲಿಲ್ಲ. ಕಳೆದ ವಾರ 6 ಸಾವಿರ ಇದ್ದ ಪ್ರಕರಣಗಳ ಸಂಖ್ಯೆ, ಈಗ 7 ಸಾವಿರಕ್ಕೆ ಏರಿಕೆ ಆಗಿದೆ. ಇಂದು 6,971 ಪ್ರಕರಣ ವರದಿ ಆದರೆ, 35 ಸಾವು ಸಂಭವಿಸಿದೆ.

ಶನಿವಾರ ಮಾತನಾಡಿದ್ದ ಮುಂಬೈ ಮೇಯರ್​ ಕಿಶೋರಿ ಪಡ್ನೇಕರ್, ಕೊರೊನಾ ಸೋಂಕು ನಿಯಂತ್ರಣಕ್ಕೆ ಸಾಕಷ್ಟು ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಸೂಚಿಸಲಾಗಿದೆ. ಕೊವಿಡ್​ ನಿಯಮದನ್ವಯ, ಮಾಸ್ಕ್​ ಹಾಕುವುದು ಕಡ್ಡಾಯವಾದರೆ, ಗುಂಪು ಸೇರುವುದರ ಮೇಲೆ ನಿಷೇಧ ಹೇರಲಾಗಿದೆ. ಆದಾಗ್ಯೂ, ಜನರು ನಿಯಮವನ್ನು ಪಾಲನೆ ಮಾಡುತ್ತಿಲ್ಲ. ಹೀಗಾಗಿ, ಕಟ್ಟುನಿಟ್ಟಾಗಿ ಕೊರೊನಾ ನಿಯಮ ಪಾಲನೆ ಸೂಚಿಸಲಾಗಿದೆ. ನೀವು ಕೊವಿಡ್​ ನಿಯಮ ಪಾಲನೆ ಮಾಡದೆ ಕೊರೊನಾ ಕೇಸ್​ಗಳ ಸಂಖ್ಯೆ ಹೆಚ್ಚುತ್ತಾ ಹೋದರೆ ಲಾಕ್​ಡೌನ್​ ಘೋಷಣೆ ಮಾಡಬೇಕಾಗುತ್ತದೆ. ಇದನ್ನು ತಪ್ಪಿಸಬೇಕಾದರೆ ನೀವು ನಿಯಮ ಪಾಲನೆ ಮಾಡಿ ಎಂದಿದ್ದರು.

ಅಮರಾವತಿಯಲ್ಲಿ ಒಂದು ವಾರ ಲಾಕ್​ಡೌನ್ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬರದ ಕಾರಣ ಒಂದು ವಾರಗಳ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಸೋಮವಾರ ಸಂಜೆಯಿಂದ ಲಾಕ್​ಡೌನ್​ ನಿಯಮ ಜಾರಿಗೆ ತರಲಿದೆ. ಏಳು ದಿನ ಲಾಕ್​ಡೌನ್​ ವೇಳೆ ಅಗತ್ಯ ಸೇವೆಗಳು ಮಾತ್ರ ಸಿಗಲಿವೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಮತ್ತೆ ಚುರುಕುಗೊಂಡ ಕೊರೊನಾ: ಲಾಕ್​ಡೌನ್​ ಸೂಚನೆ ನೀಡಿದ ಮುಂಬೈ ಮೇಯರ್​

Published On - 9:25 pm, Sun, 21 February 21

5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!