AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಆಗದಿದ್ದರೆ ರಾಜೀನಾಮೆ ನೀಡುತ್ತೇನೆ: ಹರ್ಯಾಣ DCM ದುಶ್ಯಂತ್​ ಚೌಟಾಲಾ

ನಾನು ಕೇಂದ್ರ ಸರ್ಕಾರದ ಜೊತೆಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ಇದರ ಜೊತೆಗೆ ನಾನು ನಿರಂತರವಾಗಿ ರೈತರ ಅಭಿಪ್ರಾಯಗಳನ್ನು ಕೇಂದ್ರದ ಮುಂದೆ ಇಡುತ್ತಿದ್ದೇನೆ ಎಂದು ದುಶ್ಯಂತ್ ಚೌಟಾಲಾ ಹೇಳಿದರು.

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಆಗದಿದ್ದರೆ ರಾಜೀನಾಮೆ ನೀಡುತ್ತೇನೆ: ಹರ್ಯಾಣ DCM ದುಶ್ಯಂತ್​ ಚೌಟಾಲಾ
ಹರಿಯಾಣ ಉಪ ಮುಖ್ಯಮಂತ್ರಿ ದುಷ್ಯಂತ್ ಚೌಟಾಲಾ
ರಾಜೇಶ್ ದುಗ್ಗುಮನೆ
| Edited By: |

Updated on:Dec 11, 2020 | 9:19 PM

Share

ನವದೆಹಲಿ: ರೈತರಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಆಗದೆ ಇದ್ದರೆ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿಜೆಪಿ ಮಿತ್ರ ಪಕ್ಷವಾಗಿರುವ ಜನನಾಯಕ ಜನತಾ ಪಾರ್ಟಿ ನಾಯಕ ದುಶ್ಯಂತ್​ ಚೌಟಾಲಾ ಹೇಳಿದ್ದಾರೆ. ಬೆಂಬಲ ಬೆಲೆಯ ವ್ಯವಸ್ಥೆಗೆ ಧಕ್ಕೆ ತರುವುದಿಲ್ಲ ಎಂದು ಕೇಂದ್ರ ಸರ್ಕಾರ ಪ್ರತಿಭಟನಾನಿರತ ರೈತರಿಗೆ ಹೇಳಿತ್ತು. ಆದರೆ, ರೈತರು ಇದನ್ನು ಒಪ್ಪಿರಲಿಲ್ಲ. ಈ ಬೆಳವಣಿಗೆ ಬೆನ್ನಲ್ಲೇ ದುಶ್ಯಂತ್​ ಚೌಟಾಲಾ ಈ ಹೇಳಿಕೆ ನೀಡಿದ್ದಾರೆ.

ರೈತರಿಗೆ ಬೆಂಬಲ ಬೆಲೆ ಖಾತರಿಪಡಿಸಬೇಕು ಎಂದು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಸರ್ಕಾರ ಪ್ರತಿಭಟನಾ ನಿರತ ರೈತರಿಗೆ ನೀಡಿದ ಲಿಖಿತ ಪ್ರಸ್ತಾಪಗಳಲ್ಲಿ ಕನಿಷ್ಠ ಬೆಂಬಲ ಬೆಲೆಯನ್ನು ಉಳಿಸಿಕೊಳ್ಳುವುದಾಗಿ ಹೇಳಿದೆ. ನಾನು ಅಧಿಕಾರದಲ್ಲಿ ಇರುವವರೆಗೆ ಇದಕ್ಕಾಗಿ ಹೋರಾಡುತ್ತೇನೆ. ನನ್ನಿಂದ ಆಶ್ವಾಸನೆ ಈಡೇರಿಸಲು ಸಾಧ್ಯವಾಗದ ದಿನ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಅವರು ಹೇಳಿದರು.

ನಾನು ಕೇಂದ್ರ ಸರ್ಕಾರದ ಜೊತೆಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ನಿರಂತರವಾಗಿ ರೈತರ ಅಭಿಪ್ರಾಯಗಳನ್ನು ಕೇಂದ್ರದ ಮುಂದೆ ಇಡುತ್ತಿದ್ದೇನೆ ಎಂದು ದುಶ್ಯಂತ್ ಹೇಳಿದರು.

2019ರ ವಿಧಾನಸಭೆ ಚುನಾವಣೆ ನಂತರ ಜನನಾಯಕ ಜನತಾ ಪಕ್ಷದ ಜೊತೆ ಸೇರಿ ಹರಿಯಾಣದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ದುಶ್ಯಂತ್​ ಚೌಟಾಲಾಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲಾಗಿತ್ತು.

ಮಾತುಕತೆ ವಿಫಲ: ಕೇಂದ್ರ ಸರ್ಕಾರ ರೈತರ ಜೊತೆ ಇನ್ನೊಂದು ಸುತ್ತಿನ ಮಾತುಕತೆಗೆ ಸಿದ್ಧವಿರುವುದಾಗಿ ಹೇಳಿದೆ. ರೈತರ ಬೇಡಿಕೆಗೆ ಅನುಗುಣವಾಗಿ ಕಾಯ್ದೆಗಳಲ್ಲಿ ಕೆಲ ಬದಲಾವಣೆ ತರುವುದಾಗಿ ಕೃಷಿ ಸಚಿವ ನರೇಂದ್ರ ಸಿಂಗ್​ ತೋಮರ್​ ತಿಳಿಸಿದ್ದಾರೆ. ಆದರೆ, ಮಾತುಕತೆಯ ಪ್ರಸ್ತಾವನೆಯನ್ನು ತಿರಸ್ಕರಿಸಿರುವ ರೈತರು ಕಾಯ್ದೆಯನ್ನು ಸಂಪೂರ್ಣ ಹಿಂಪಡೆಯಬೇಕು ಎಂದು ಪಟ್ಟು ಹಿಡಿದಿದ್ದಾರೆ.

ರೈತರ ಬಲ ಕುಗ್ಗಲಿದ್ದು, ಕಾರ್ಪೊರೇಟ್​ ಕಂಪನಿಗಳ ಅಡಿಯಾಳಾಗುವ ಅಪಾಯವಿದೆ: ಸುಪ್ರೀಂ ಕೋರ್ಟ್​ನಲ್ಲಿ BKU ಅರ್ಜಿ

Published On - 9:17 pm, Fri, 11 December 20

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್