AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ತಂಟೆಗೆ ಬರುವ ಮುನ್ನ ಯೋಚಿಸಿ, ಹಾನಿ ಮಾಡಿದವರನ್ನು ಒಬ್ಬರನ್ನೂ ಬಿಡುವುದಿಲ್ಲ: ಎಚ್ಚರಿಕೆ ನೀಡಿದ ರಾಜನಾಥ್ ಸಿಂಗ್​

ಗಡಿ ಸಂಘರ್ಷವಾದಾಗ ನಮ್ಮ ಸರ್ಕಾರ ಏನು ಕೈಗೊಂಡಿತು, ಭಾರತೀಯ ಯೋಧರು ಏನು ಮಾಡಿದರು ಎಂಬುದನ್ನು ನಾನು ಬಹಿರಂಗವಾಗಿ ಹೇಳಲಾರೆ. ಆದರೆ ಭಾರತದ ತಂಟೆಗೆ ಯಾರೇ ಬಂದರೂ ಅವರನ್ನು ಈ ರಾಷ್ಟ್ರ ಸುಮ್ಮನೆ ಬಿಡುವುದಿಲ್ಲ ಎಂದು ರಾಜನಾಥ್​ ಸಿಂಗ್ ಹೇಳಿದ್ದಾರೆ.

ಭಾರತದ ತಂಟೆಗೆ ಬರುವ ಮುನ್ನ ಯೋಚಿಸಿ, ಹಾನಿ ಮಾಡಿದವರನ್ನು ಒಬ್ಬರನ್ನೂ ಬಿಡುವುದಿಲ್ಲ: ಎಚ್ಚರಿಕೆ ನೀಡಿದ ರಾಜನಾಥ್ ಸಿಂಗ್​
ರಾಜನಾಥ್ ಸಿಂಗ್​
TV9 Web
| Updated By: Lakshmi Hegde|

Updated on:Apr 15, 2022 | 7:58 PM

Share

ಭಾರತಕ್ಕೆ ಹಾನಿ ಮಾಡಿದರೆ, ಅವರು ಯಾರೇ ಆಗಿರಲಿ ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು. ಈ ಮೂಲಕ ಚೀನಾ ಮತ್ತು ಪಾಕಿಸ್ತಾನಕ್ಕೆ ಒಂದು ಗಟ್ಟಿ ಸಂದೇಶ ನೀಡಿದ್ದಾರೆ. ಯುಎಸ್​ನ ಸ್ಯಾನ್ ಫ್ರಾನ್ಸ್ಕಿಸ್ಕೋದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಈ ಮಾತುಗಳನ್ನಾಡಿದ್ದಾರೆ. ಅಷ್ಟೇ ಅಲ್ಲ, ಭಾರತ-ಚೀನಾ ಗಡಿ ಸಂಘರ್ಷದ ಸಮಯದಲ್ಲಿ ಭಾರತೀಯ ಯೋಧರು ತೋರಿದ ಶೌರ್ಯವನ್ನು ಹೊಗಳಿದರು. 

ಗಡಿ ಸಂಘರ್ಷವಾದಾಗ ನಮ್ಮ ಸರ್ಕಾರ ಏನು ಕೈಗೊಂಡಿತು, ಭಾರತೀಯ ಯೋಧರು ಏನು ಮಾಡಿದರು ಎಂಬುದನ್ನು ನಾನು ಬಹಿರಂಗವಾಗಿ ಹೇಳಲಾರೆ. ಆದರೆ ಭಾರತದ ತಂಟೆಗೆ ಯಾರೇ ಬಂದರೂ ಅವರನ್ನು ಈ ರಾಷ್ಟ್ರ ಸುಮ್ಮನೆ ಬಿಡುವುದಿಲ್ಲ. ಇದೊಂದು ಸಂದೇಶ ಎಲ್ಲಿ ಹೋಗಬೇಕೋ ಅಲ್ಲಿ ಹೋಗಿದೆ ಎಂದುಕೊಳ್ಳುತ್ತೇನೆ ಎಂದು ರಾಜನಾಥ್ ಸಿಂಗ್ ಹೇಳಿದರು. ಭಾರತ-ಚೀನಾ ಪೂರ್ವ ಲಡಾಖ್​ ಗಡಿ ಸಮಸ್ಯೆ ಶುರುವಾಗಿದ್ದು 2020 ರ ಮೇ ತಿಂಗಳಲ್ಲಿ. ಮೊದಲು ಪ್ಯಾಂಗಾಂಗ್​ ಸರೋವರದ ಬಳಿ ಭಾರತ-ಚೀನಾ ಸೈನಿಕರ ನಡುವೆ ಘರ್ಷಣೆ ನಡೆಯಿತು. ಅದಾದ ಬಳಿಕ 2020ರ ಜೂನ್​ನಲ್ಲಿ ಗಲ್ವಾನ್​ ಕಣಿವೆಯಲ್ಲಿ ನಡೆದ ಸಂಘರ್ಷ ಭೀಕರ ಸ್ವರೂಪದ್ದಾಗಿದೆ. ಚೀನಾ ಸೈನಿಕರ ದಾಳಿಗೆ ಭಾರತದ ಸುಮಾರು 20 ಸೈನಿಕರು ಹತ್ಯೆಗೀಡಾದರು. ಅಂದಿನಿಂದಲೂ ಚೀನಾ ಉಪಟಳ ಮತ್ತು ಅದಕ್ಕೆ ಭಾರತದ ತಿರುಗೇಟು ಪ್ರಕ್ರಿಯೆ ನಡೆಯುತ್ತಲೇ ಇದೆ. ಇಲ್ಲಿಯವರೆಗೆ ಎರಡೂ ದೇಶಗಳ ಮಧ್ಯೆ ಸುಮಾರು 15  ಮಿಲಿಟರಿ ಸುತ್ತುಗಳ ಮಾತುಕತೆ ನಡೆದಿದೆ. ಆದರೆ ಸಮಸ್ಯೆ ಸಂಪೂರ್ಣವಾಗಿ ಬಗೆಹರಿದಿಲ್ಲ.

ಈಗಾಗಲೇ ಚೀನಾಕ್ಕೆ ಹಲವು ಬಾರಿ ಎಚ್ಚರಿಕೆ ನೀಡಿರುವ ರಾಜನಾಥ್ ಸಿಂಗ್ ಸ್ಯಾನ್​ ಫ್ರಾನ್ಸಿಸ್ಕೋದಲ್ಲಿಯೂ  ಇದನ್ನು ಪ್ರಸ್ತಾಪ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ಪ್ರಬಲ ರಾಷ್ಟ್ರವಾಗಿ ರೂಪುಗೊಂಡಿದೆ.  ಭಾರತದ ಚಿತ್ರಣ ಬದಲಾಗಿದೆ. ನಮ್ಮ ರಾಷ್ಟ್ರದ ಪ್ರತಿಷ್ಠೆ ಮೇರುಮಟ್ಟಕ್ಕೇರಿದೆ. ಇನ್ನು ಕೆಲವೇ ವರ್ಷಗಳಲ್ಲಿ ವಿಶ್ವದ ಆರ್ಥಿಕತೆಯಲ್ಲಿ ಟಾಪ್​ 3 ಸ್ಥಾನದಲ್ಲಿರುವದರಲ್ಲಿ ಸಂಶಯವಲ್ಲಿ ಎಂದೂ ರಾಜನಾಥ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಮೈಸೂರು ಬಳಿಯ ವೀರನಹೊಸಹಳ್ಳಿಗೆ ನುಗ್ಗಿತೊಂದು ಕಾಡಾನೆ, ಕಾಡಿಗಟ್ಟಲು ಅರಣ್ಯ ಸಿಬ್ಬಂದಿ ಹರಸಾಹಸ!

Published On - 7:58 pm, Fri, 15 April 22

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ