AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜೀನಾಮೆ ನೀಡಲ್ಲ, ಹೇಳಿಕೆ ನೀಡಿದರೆ ಸುನಾಮಿ ಉಂಟಾಗುತ್ತದೆ: ಕುಸ್ತಿ ಫೆಡರೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಸರಣ್ ಸಿಂಗ್

ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಸಿಂಗ್ ಅವರನ್ನು ಕರೆಸಿದ್ದು ಉದ್ವಿಗ್ನತೆಯನ್ನು ಉಲ್ಬಣಗೊಳಿಸಬಹುದು ಎಂಬ ಆತಂಕದಿಂದ ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡದಂತೆ ಎಚ್ಚರಿಕೆ ನೀಡಿದ್ದಾರೆ.

ರಾಜೀನಾಮೆ ನೀಡಲ್ಲ, ಹೇಳಿಕೆ ನೀಡಿದರೆ ಸುನಾಮಿ ಉಂಟಾಗುತ್ತದೆ: ಕುಸ್ತಿ ಫೆಡರೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಸರಣ್ ಸಿಂಗ್
ಬ್ರಿಜ್ ಭೂಷಣ್ ಶರಣ್ ಸಿಂಗ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jan 20, 2023 | 8:43 PM

Share

ದೆಹಲಿ: ಆಪಾದಿತ ಲೈಂಗಿಕ ಕಿರುಕುಳದ (MeToo allegations) ವಿರುದ್ಧ ಪ್ರತಿಭಟಿಸುವ ಕುಸ್ತಿಪಟುಗಳು ತಮ್ಮ ರಾಜೀನಾಮೆಯ ಬೇಡಿಕೆಯ ಮೇಲೆ ದೃಢವಾಗಿ ಉಳಿದುಕೊಂಡಿರುವಂತೆಯೇ, ಕುಸ್ತಿ ಸಂಸ್ಥೆಯ ಮುಖ್ಯಸ್ಥ ಬ್ರಿಜ್ ಭೂಷಣ್ ಸರಣ್ ಸಿಂಗ್ (Brij Bhushan Sharan Singh) ನಾನು ಹೇಳಿಕೆ ನೀಡಿದರೆ ಸುನಾಮಿ ಉಂಟಾಗುತ್ತದೆ. ನಾನು ಯಾರ ಸಹಾಯಾರ್ಥವಾಗಿ ಇಲ್ಲಿಲ್ಲ. ನಾನು ಚುನಾಯಿತ ಪ್ರತಿನಿಧಿ ಎಂದಿದ್ದಾರೆ. ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಹಲವಾರು ಪ್ರಸಿದ್ಧ ಭಾರತೀಯ ಕುಸ್ತಿಪಟುಗಳು ದೆಹಲಿಯಲ್ಲಿ ಕಳೆದ ಎರಡು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು,ಭಾರತ ಕುಸ್ತಿ ಫೆಡರೇಶನ್ (WFI) ಮುಖ್ಯಸ್ಥರು ರಾಜೀನಾಮೆ ನೀಡಲು ನಿರಾಕರಿಸಿದ್ದಾರೆ. ಸಿಂಗ್ ವಿರುದ್ಧ ಕುಸ್ತಿಪಟುಗಳು #MeToo ಆರೋಪ ಹೊರಿಸಿದ್ದು, ತಮಗೆ ಜೀವ ಭಯವಿದೆ ಎಂದಿದ್ದಾರೆ. ಮೀಟೂ ಆರೋಪ ಹೊಂದಿರುವ ಸಿಂಗ್ ಅವರನ್ನು ಕುಸ್ತಿ ಸಂಸ್ಥೆಯ ಮುಖ್ಯಸ್ಥ ಸ್ಥಾನದಿಂದ ತಕ್ಷಣವೇ ವಜಾಗೊಳಿಸಬೇಕೆಂದು ಕುಸ್ತಿಪಟುಗಳು ಒತ್ತಾಯಿಸುತ್ತಿದ್ದಾರೆ. ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ನಾನು ಪ್ರಧಾನಿ ಕಾರ್ಯಾಲಯ ಮತ್ತು ಗೃಹ ಸಚಿವರೊಂದಿಗೆ ಮಾತನಾಡಿಲ್ಲ” ಎಂದು ಸಿಂಗ್ ಹೇಳಿದ್ದಾರೆ.

ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಸಿಂಗ್ ಅವರನ್ನು ಕರೆಸಿದ್ದು ಉದ್ವಿಗ್ನತೆಯನ್ನು ಉಲ್ಬಣಗೊಳಿಸಬಹುದು ಎಂಬ ಆತಂಕದಿಂದ ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡದಂತೆ ಎಚ್ಚರಿಕೆ ನೀಡಿದ್ದಾರೆ. ಅನುರಾಗ್ ಠಾಕೂರ್ ಅವರು ನಿನ್ನೆ ರಾತ್ರಿ 2 ಗಂಟೆಯವರೆಗೆ ಪ್ರತಿಭಟನಾ ನಿರತ ಕ್ರೀಡಾಪಟುಗಳೊಂದಿಗೆ ನಾಲ್ಕು ಗಂಟೆಗಳ ಕಾಲ ಸಭೆ ನಡೆಸಿದರು.

ಇದನ್ನೂ ಓದಿ:ಬಿಹಾರದಲ್ಲಿ ಜಾತಿ ಸಮೀಕ್ಷೆ ವಿರೋಧಿಸಿ ಸಲ್ಲಿಸಿದ ಮನವಿ ತಿರಸ್ಕರಿಸಿದ ಸುಪ್ರೀಂಕೋರ್ಟ್

ಇಂದು, ಕುಸ್ತಿಪಟುಗಳು ಭಾರತೀಯ ಒಲಿಂಪಿಕ್ ಸಂಸ್ಥೆಯ ಮುಖ್ಯಸ್ಥೆ ಪಿಟಿ ಉಷಾ ಅವರಿಗೆ ಪತ್ರ ಬರೆದು, ಸಿಂಗ್ ಅವರು ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಟೋಕಿಯೊದಲ್ಲಿ ಒಲಿಂಪಿಕ್ ಪದಕವನ್ನು ತಪ್ಪಿಸಿದ ನಂತರ WFI ಮುಖ್ಯಸ್ಥರಿಂದ ವಿನೇಶ್ ಫೋಗಟ್ ಮಾನಸಿಕವಾಗಿ ಕಿರುಕುಳ ಮತ್ತು ಚಿತ್ರಹಿಂಸೆಗೆ ಒಳಗಾಗಿದ್ದರು. ಅವರು ಆತ್ಮಹತ್ಯೆ ಬಗ್ಗೆಯೂ ಯೋಚಿಸಿದ್ದರು. ನಮಗೆ ಜೀವಭಯವಿದೆ ಎಂದು ಕುಸ್ತಿಪಟುಗಳು ಹೇಳಿದ್ದಾರೆ. ಬುಧವಾರ, ಕೇಂದ್ರವು ಡಬ್ಲ್ಯುಎಫ್‌ಐ ಆರೋಪಗಳಿಗೆ ಮೂರು ದಿನಗಳಲ್ಲಿ ಪ್ರತಿಕ್ರಿಯಿಸದಿದ್ದರೆ, ಕ್ರೀಡಾ ಸಚಿವಾಲಯವು “ರಾಷ್ಟ್ರೀಯ ಕ್ರೀಡಾ ಅಭಿವೃದ್ಧಿ ಸಂಹಿತೆ, 2011 ರ ನಿಬಂಧನೆಗಳ ಪ್ರಕಾರ ಫೆಡರೇಶನ್ ವಿರುದ್ಧ ಕ್ರಮ ಕೈಗೊಳ್ಳಲು ಮುಂದುವರಿಯುತ್ತದೆ” ಎಂದು ಸ್ಪಷ್ಟಪಡಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:38 pm, Fri, 20 January 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!