AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​​ನ 25 ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ, ಆದರೆ ಕಸಗಳನ್ನು ಒಪ್ಪಿಕೊಳ್ಳಲು ನಾನು ಸಿದ್ಧನಿಲ್ಲ: ಅರವಿಂದ್ ಕೇಜ್ರಿವಾಲ್​

ಪಂಜಾಬ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ ಅರವಿಂದ್ ಕೇಜ್ರಿವಾಲ್​, ಈಗ ರಾಜ್ಯದ ಖಜಾನೆ ಸಂಪೂರ್ಣವಾಗಿ ಖಾಲಿಯಾಗಿದೆ ಎಂದು ಇಲ್ಲಿನ ಸರ್ಕಾರ ಕಣ್ಣಲ್ಲಿ ನೀರಿಡುತ್ತಿದೆ. 15 ವರ್ಷಗಳಿಂದ ಇಲ್ಲಿ ನೀವೇ ಅಧಿಕಾರದಲ್ಲಿ ಇರುವಾಗ ಅದನ್ನು ಖಾಲಿ ಮಾಡಿದ್ದು ಯಾರು? ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್​​ನ 25 ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ, ಆದರೆ ಕಸಗಳನ್ನು ಒಪ್ಪಿಕೊಳ್ಳಲು ನಾನು ಸಿದ್ಧನಿಲ್ಲ: ಅರವಿಂದ್ ಕೇಜ್ರಿವಾಲ್​
ಅರವಿಂದ ಕೇಜ್ರಿವಾಲ್
TV9 Web
| Edited By: |

Updated on:Nov 23, 2021 | 4:13 PM

Share

ಪಂಜಾಬ್​ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಪ್​ ನಾಯಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸದ್ಯ ಪಂಜಾಬ್​ ರಾಜ್ಯದ ಪ್ರವಾಸದಲ್ಲಿದ್ದಾರೆ. ನಿನ್ನೆ ಪಂಜಾಬ್​​ನಲ್ಲಿ ಮಾತನಾಡಿದ್ದ ಅವರು, ತಮ್ಮ ಪಕ್ಷ ಇಲ್ಲಿಗೆ ಅಧಿಕಾರಕ್ಕೆ ಬಂದರೆ, ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿ ಮಹಿಳೆಗೂ ತಿಂಗಳಿಗೆ 1 ಸಾವಿರ ರೂಪಾಯಿ ನೀಡುವ ಭರವಸೆ ನೀಡಿದ್ದರು. ಹಾಗೇ, ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ನ ಸುಮಾರು 25 ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ಅವರೆಲ್ಲ ಆಪ್​ ಸೇರಲು ಉತ್ಸುಕರಾಗಿದ್ದಾರೆ. ಆದರೆ ನನಗೆ ಕಾಂಗ್ರೆಸ್​ ಕಸವನ್ನು ಒಪ್ಪಿಕೊಳ್ಳಲು, ನಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಲು ಮನಸು ಒಪ್ಪುತ್ತಿಲ್ಲ ಎಂದು ನಗುತ್ತ ಹೇಳಿದ್ದಾರೆ. ಇತ್ತೀಚೆಗೆ ಒಂದಿಲ್ಲೊಂದು ವಿವಾದ ಎಬ್ಬಿಸುತ್ತಿರುವ ನವಜೋತ್​ ಸಿಂಗ್​ ಸಿಧು ಆಪ್​​ನೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಸುದ್ದಿ ಹರಡಿದೆ. ಇದು ನಿಜವಾ ಎಂದು ಮಾಧ್ಯಮ ಸಿಬ್ಬಂದಿ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.  

ಕಾಂಗ್ರೆಸ್​ನ ಹಲವರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ಆದರೆ ಕಾಂಗ್ರೆಸ್​ನ ಕಚಡಾ, ಕಸಕಡ್ಡಿಗಳನ್ನೇಕೆ ನಾವು ಸೇರಿಸಿಕೊಳ್ಳಬೇಕು. ಕಾಂಗ್ರೆಸ್​ನ ಒಂದು ಕಸವನ್ನು ಸೇರಿಸಿಕೊಂಡರೂ ಅದರ ಹಿಂದೆ ಮತ್ತೆ 25 ಶಾಸಕರು, ಮೂವರು ಸಂಸದರು ಆ ಪಕ್ಷದಿಂದ ಬರುತ್ತಾರೆ ಎಂದು ಖಚಿತವಾಗಿಯೂ ಸತ್ಯ ಎಂದಿದ್ದಾರೆ. ಪಂಜಾಬ್​ ವಿಧಾನಸಭೆ ಚುನಾವಣೆಯಲ್ಲಿ ಆಪ್​ ಅಧಿಕಾರಕ್ಕೆ ಬರಬೇಕು ಎಂಬುದು ನನ್ನ ಬಲವಾದ ಆಶಯ. ಹಾಗೊಮ್ಮೆ ನಮ್ಮ ಪಕ್ಷ ಗೆದ್ದರೆ ನಾನಂತೂ ಖಂಡಿತವಾಗಿಯೂ ಇಲ್ಲಿನ ಮುಖ್ಯಮಂತ್ರಿ ಅಭ್ಯರ್ಥಿಯಲ್ಲ ಎಂದು ಕೇಜ್ರಿವಾಲ್ ಹೇಳಿಕೊಂಡಿದ್ದಾರೆ.

ಪಂಜಾಬ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ ಅರವಿಂದ್ ಕೇಜ್ರಿವಾಲ್​, ಈಗ ರಾಜ್ಯದ ಖಜಾನೆ ಸಂಪೂರ್ಣವಾಗಿ ಖಾಲಿಯಾಗಿದೆ ಎಂದು ಇಲ್ಲಿನ ಸರ್ಕಾರ ಕಣ್ಣಲ್ಲಿ ನೀರಿಡುತ್ತಿದೆ. 15 ವರ್ಷಗಳಿಂದ ಇಲ್ಲಿ ನೀವೇ ಅಧಿಕಾರದಲ್ಲಿ ಇರುವಾಗ ಅದನ್ನು ಖಾಲಿ ಮಾಡಿದ್ದು ಯಾರು? ಆದರೆ ನನಗೆ ಗೊತ್ತಿದೆ ಪಂಜಾಬ್​ ಖಜಾನೆ ಹೇಗೆ ತುಂಬಿಸಬೇಕು ಎಂಬುದು ಎಂದು ದೆಹಲಿ ಸಿಎಂ ಹೇಳಿದ್ದಾರೆ.  ಪಂಜಾಬ್​ನಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿದ್ದೇ ಆದರೆ, ದೆಹಲಿಯನ್ನು ನಾವು ಹೇಗೆ ಬದಲಾಯಿಸಿದ್ದೇವೋ ಹಾಗೇ ಇದನ್ನೂ ಬದಲಿಸುತ್ತೇವೆ ಎಂಬ ಭರವಸೆಯನ್ನೂ ನೀಡಿದ್ದಾರೆ.

ಇದನ್ನೂ ಓದಿ: ಕೃಷಿ ಕಾನೂನು ರದ್ದುಗೊಳಿಸಲು ಕೇಂದ್ರ ನಿರ್ಧರಿಸಿದ ನಂತರ ಪರಿಣಾಮಗಳ ಬಗ್ಗೆ ಬಿಜೆಪಿಗೆ ಎಚ್ಚರಿಕೆ ನೀಡಿದ ಸಚಿನ್ ಪೈಲಟ್

Published On - 4:12 pm, Tue, 23 November 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್