AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​​ನ 25 ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ, ಆದರೆ ಕಸಗಳನ್ನು ಒಪ್ಪಿಕೊಳ್ಳಲು ನಾನು ಸಿದ್ಧನಿಲ್ಲ: ಅರವಿಂದ್ ಕೇಜ್ರಿವಾಲ್​

ಪಂಜಾಬ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ ಅರವಿಂದ್ ಕೇಜ್ರಿವಾಲ್​, ಈಗ ರಾಜ್ಯದ ಖಜಾನೆ ಸಂಪೂರ್ಣವಾಗಿ ಖಾಲಿಯಾಗಿದೆ ಎಂದು ಇಲ್ಲಿನ ಸರ್ಕಾರ ಕಣ್ಣಲ್ಲಿ ನೀರಿಡುತ್ತಿದೆ. 15 ವರ್ಷಗಳಿಂದ ಇಲ್ಲಿ ನೀವೇ ಅಧಿಕಾರದಲ್ಲಿ ಇರುವಾಗ ಅದನ್ನು ಖಾಲಿ ಮಾಡಿದ್ದು ಯಾರು? ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್​​ನ 25 ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ, ಆದರೆ ಕಸಗಳನ್ನು ಒಪ್ಪಿಕೊಳ್ಳಲು ನಾನು ಸಿದ್ಧನಿಲ್ಲ: ಅರವಿಂದ್ ಕೇಜ್ರಿವಾಲ್​
ಅರವಿಂದ ಕೇಜ್ರಿವಾಲ್
TV9 Web
| Edited By: |

Updated on:Nov 23, 2021 | 4:13 PM

Share

ಪಂಜಾಬ್​ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಪ್​ ನಾಯಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸದ್ಯ ಪಂಜಾಬ್​ ರಾಜ್ಯದ ಪ್ರವಾಸದಲ್ಲಿದ್ದಾರೆ. ನಿನ್ನೆ ಪಂಜಾಬ್​​ನಲ್ಲಿ ಮಾತನಾಡಿದ್ದ ಅವರು, ತಮ್ಮ ಪಕ್ಷ ಇಲ್ಲಿಗೆ ಅಧಿಕಾರಕ್ಕೆ ಬಂದರೆ, ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿ ಮಹಿಳೆಗೂ ತಿಂಗಳಿಗೆ 1 ಸಾವಿರ ರೂಪಾಯಿ ನೀಡುವ ಭರವಸೆ ನೀಡಿದ್ದರು. ಹಾಗೇ, ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ನ ಸುಮಾರು 25 ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ಅವರೆಲ್ಲ ಆಪ್​ ಸೇರಲು ಉತ್ಸುಕರಾಗಿದ್ದಾರೆ. ಆದರೆ ನನಗೆ ಕಾಂಗ್ರೆಸ್​ ಕಸವನ್ನು ಒಪ್ಪಿಕೊಳ್ಳಲು, ನಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಲು ಮನಸು ಒಪ್ಪುತ್ತಿಲ್ಲ ಎಂದು ನಗುತ್ತ ಹೇಳಿದ್ದಾರೆ. ಇತ್ತೀಚೆಗೆ ಒಂದಿಲ್ಲೊಂದು ವಿವಾದ ಎಬ್ಬಿಸುತ್ತಿರುವ ನವಜೋತ್​ ಸಿಂಗ್​ ಸಿಧು ಆಪ್​​ನೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಸುದ್ದಿ ಹರಡಿದೆ. ಇದು ನಿಜವಾ ಎಂದು ಮಾಧ್ಯಮ ಸಿಬ್ಬಂದಿ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.  

ಕಾಂಗ್ರೆಸ್​ನ ಹಲವರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ಆದರೆ ಕಾಂಗ್ರೆಸ್​ನ ಕಚಡಾ, ಕಸಕಡ್ಡಿಗಳನ್ನೇಕೆ ನಾವು ಸೇರಿಸಿಕೊಳ್ಳಬೇಕು. ಕಾಂಗ್ರೆಸ್​ನ ಒಂದು ಕಸವನ್ನು ಸೇರಿಸಿಕೊಂಡರೂ ಅದರ ಹಿಂದೆ ಮತ್ತೆ 25 ಶಾಸಕರು, ಮೂವರು ಸಂಸದರು ಆ ಪಕ್ಷದಿಂದ ಬರುತ್ತಾರೆ ಎಂದು ಖಚಿತವಾಗಿಯೂ ಸತ್ಯ ಎಂದಿದ್ದಾರೆ. ಪಂಜಾಬ್​ ವಿಧಾನಸಭೆ ಚುನಾವಣೆಯಲ್ಲಿ ಆಪ್​ ಅಧಿಕಾರಕ್ಕೆ ಬರಬೇಕು ಎಂಬುದು ನನ್ನ ಬಲವಾದ ಆಶಯ. ಹಾಗೊಮ್ಮೆ ನಮ್ಮ ಪಕ್ಷ ಗೆದ್ದರೆ ನಾನಂತೂ ಖಂಡಿತವಾಗಿಯೂ ಇಲ್ಲಿನ ಮುಖ್ಯಮಂತ್ರಿ ಅಭ್ಯರ್ಥಿಯಲ್ಲ ಎಂದು ಕೇಜ್ರಿವಾಲ್ ಹೇಳಿಕೊಂಡಿದ್ದಾರೆ.

ಪಂಜಾಬ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ ಅರವಿಂದ್ ಕೇಜ್ರಿವಾಲ್​, ಈಗ ರಾಜ್ಯದ ಖಜಾನೆ ಸಂಪೂರ್ಣವಾಗಿ ಖಾಲಿಯಾಗಿದೆ ಎಂದು ಇಲ್ಲಿನ ಸರ್ಕಾರ ಕಣ್ಣಲ್ಲಿ ನೀರಿಡುತ್ತಿದೆ. 15 ವರ್ಷಗಳಿಂದ ಇಲ್ಲಿ ನೀವೇ ಅಧಿಕಾರದಲ್ಲಿ ಇರುವಾಗ ಅದನ್ನು ಖಾಲಿ ಮಾಡಿದ್ದು ಯಾರು? ಆದರೆ ನನಗೆ ಗೊತ್ತಿದೆ ಪಂಜಾಬ್​ ಖಜಾನೆ ಹೇಗೆ ತುಂಬಿಸಬೇಕು ಎಂಬುದು ಎಂದು ದೆಹಲಿ ಸಿಎಂ ಹೇಳಿದ್ದಾರೆ.  ಪಂಜಾಬ್​ನಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿದ್ದೇ ಆದರೆ, ದೆಹಲಿಯನ್ನು ನಾವು ಹೇಗೆ ಬದಲಾಯಿಸಿದ್ದೇವೋ ಹಾಗೇ ಇದನ್ನೂ ಬದಲಿಸುತ್ತೇವೆ ಎಂಬ ಭರವಸೆಯನ್ನೂ ನೀಡಿದ್ದಾರೆ.

ಇದನ್ನೂ ಓದಿ: ಕೃಷಿ ಕಾನೂನು ರದ್ದುಗೊಳಿಸಲು ಕೇಂದ್ರ ನಿರ್ಧರಿಸಿದ ನಂತರ ಪರಿಣಾಮಗಳ ಬಗ್ಗೆ ಬಿಜೆಪಿಗೆ ಎಚ್ಚರಿಕೆ ನೀಡಿದ ಸಚಿನ್ ಪೈಲಟ್

Published On - 4:12 pm, Tue, 23 November 21

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!