AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​​ನ 25 ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ, ಆದರೆ ಕಸಗಳನ್ನು ಒಪ್ಪಿಕೊಳ್ಳಲು ನಾನು ಸಿದ್ಧನಿಲ್ಲ: ಅರವಿಂದ್ ಕೇಜ್ರಿವಾಲ್​

ಪಂಜಾಬ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ ಅರವಿಂದ್ ಕೇಜ್ರಿವಾಲ್​, ಈಗ ರಾಜ್ಯದ ಖಜಾನೆ ಸಂಪೂರ್ಣವಾಗಿ ಖಾಲಿಯಾಗಿದೆ ಎಂದು ಇಲ್ಲಿನ ಸರ್ಕಾರ ಕಣ್ಣಲ್ಲಿ ನೀರಿಡುತ್ತಿದೆ. 15 ವರ್ಷಗಳಿಂದ ಇಲ್ಲಿ ನೀವೇ ಅಧಿಕಾರದಲ್ಲಿ ಇರುವಾಗ ಅದನ್ನು ಖಾಲಿ ಮಾಡಿದ್ದು ಯಾರು? ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್​​ನ 25 ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ, ಆದರೆ ಕಸಗಳನ್ನು ಒಪ್ಪಿಕೊಳ್ಳಲು ನಾನು ಸಿದ್ಧನಿಲ್ಲ: ಅರವಿಂದ್ ಕೇಜ್ರಿವಾಲ್​
ಅರವಿಂದ ಕೇಜ್ರಿವಾಲ್
TV9 Web
| Edited By: |

Updated on:Nov 23, 2021 | 4:13 PM

Share

ಪಂಜಾಬ್​ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಪ್​ ನಾಯಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸದ್ಯ ಪಂಜಾಬ್​ ರಾಜ್ಯದ ಪ್ರವಾಸದಲ್ಲಿದ್ದಾರೆ. ನಿನ್ನೆ ಪಂಜಾಬ್​​ನಲ್ಲಿ ಮಾತನಾಡಿದ್ದ ಅವರು, ತಮ್ಮ ಪಕ್ಷ ಇಲ್ಲಿಗೆ ಅಧಿಕಾರಕ್ಕೆ ಬಂದರೆ, ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿ ಮಹಿಳೆಗೂ ತಿಂಗಳಿಗೆ 1 ಸಾವಿರ ರೂಪಾಯಿ ನೀಡುವ ಭರವಸೆ ನೀಡಿದ್ದರು. ಹಾಗೇ, ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ನ ಸುಮಾರು 25 ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ಅವರೆಲ್ಲ ಆಪ್​ ಸೇರಲು ಉತ್ಸುಕರಾಗಿದ್ದಾರೆ. ಆದರೆ ನನಗೆ ಕಾಂಗ್ರೆಸ್​ ಕಸವನ್ನು ಒಪ್ಪಿಕೊಳ್ಳಲು, ನಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಲು ಮನಸು ಒಪ್ಪುತ್ತಿಲ್ಲ ಎಂದು ನಗುತ್ತ ಹೇಳಿದ್ದಾರೆ. ಇತ್ತೀಚೆಗೆ ಒಂದಿಲ್ಲೊಂದು ವಿವಾದ ಎಬ್ಬಿಸುತ್ತಿರುವ ನವಜೋತ್​ ಸಿಂಗ್​ ಸಿಧು ಆಪ್​​ನೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಸುದ್ದಿ ಹರಡಿದೆ. ಇದು ನಿಜವಾ ಎಂದು ಮಾಧ್ಯಮ ಸಿಬ್ಬಂದಿ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.  

ಕಾಂಗ್ರೆಸ್​ನ ಹಲವರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ಆದರೆ ಕಾಂಗ್ರೆಸ್​ನ ಕಚಡಾ, ಕಸಕಡ್ಡಿಗಳನ್ನೇಕೆ ನಾವು ಸೇರಿಸಿಕೊಳ್ಳಬೇಕು. ಕಾಂಗ್ರೆಸ್​ನ ಒಂದು ಕಸವನ್ನು ಸೇರಿಸಿಕೊಂಡರೂ ಅದರ ಹಿಂದೆ ಮತ್ತೆ 25 ಶಾಸಕರು, ಮೂವರು ಸಂಸದರು ಆ ಪಕ್ಷದಿಂದ ಬರುತ್ತಾರೆ ಎಂದು ಖಚಿತವಾಗಿಯೂ ಸತ್ಯ ಎಂದಿದ್ದಾರೆ. ಪಂಜಾಬ್​ ವಿಧಾನಸಭೆ ಚುನಾವಣೆಯಲ್ಲಿ ಆಪ್​ ಅಧಿಕಾರಕ್ಕೆ ಬರಬೇಕು ಎಂಬುದು ನನ್ನ ಬಲವಾದ ಆಶಯ. ಹಾಗೊಮ್ಮೆ ನಮ್ಮ ಪಕ್ಷ ಗೆದ್ದರೆ ನಾನಂತೂ ಖಂಡಿತವಾಗಿಯೂ ಇಲ್ಲಿನ ಮುಖ್ಯಮಂತ್ರಿ ಅಭ್ಯರ್ಥಿಯಲ್ಲ ಎಂದು ಕೇಜ್ರಿವಾಲ್ ಹೇಳಿಕೊಂಡಿದ್ದಾರೆ.

ಪಂಜಾಬ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ ಅರವಿಂದ್ ಕೇಜ್ರಿವಾಲ್​, ಈಗ ರಾಜ್ಯದ ಖಜಾನೆ ಸಂಪೂರ್ಣವಾಗಿ ಖಾಲಿಯಾಗಿದೆ ಎಂದು ಇಲ್ಲಿನ ಸರ್ಕಾರ ಕಣ್ಣಲ್ಲಿ ನೀರಿಡುತ್ತಿದೆ. 15 ವರ್ಷಗಳಿಂದ ಇಲ್ಲಿ ನೀವೇ ಅಧಿಕಾರದಲ್ಲಿ ಇರುವಾಗ ಅದನ್ನು ಖಾಲಿ ಮಾಡಿದ್ದು ಯಾರು? ಆದರೆ ನನಗೆ ಗೊತ್ತಿದೆ ಪಂಜಾಬ್​ ಖಜಾನೆ ಹೇಗೆ ತುಂಬಿಸಬೇಕು ಎಂಬುದು ಎಂದು ದೆಹಲಿ ಸಿಎಂ ಹೇಳಿದ್ದಾರೆ.  ಪಂಜಾಬ್​ನಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿದ್ದೇ ಆದರೆ, ದೆಹಲಿಯನ್ನು ನಾವು ಹೇಗೆ ಬದಲಾಯಿಸಿದ್ದೇವೋ ಹಾಗೇ ಇದನ್ನೂ ಬದಲಿಸುತ್ತೇವೆ ಎಂಬ ಭರವಸೆಯನ್ನೂ ನೀಡಿದ್ದಾರೆ.

ಇದನ್ನೂ ಓದಿ: ಕೃಷಿ ಕಾನೂನು ರದ್ದುಗೊಳಿಸಲು ಕೇಂದ್ರ ನಿರ್ಧರಿಸಿದ ನಂತರ ಪರಿಣಾಮಗಳ ಬಗ್ಗೆ ಬಿಜೆಪಿಗೆ ಎಚ್ಚರಿಕೆ ನೀಡಿದ ಸಚಿನ್ ಪೈಲಟ್

Published On - 4:12 pm, Tue, 23 November 21

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ