AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ದೊಡ್ಡ ಪಕ್ಷ ಗೂಂಡಾಗಿರಿ ನಡೆಸಿದರೆ ಅದು ತಪ್ಪು ಸಂದೇಶ ರವಾನಿಸುತ್ತದೆ, ದೇಶಕ್ಕಾಗಿ ನಾನು ಪ್ರಾಣ ಕೊಡಬಲ್ಲೆ: ಅರವಿಂದ ಕೇಜ್ರಿವಾಲ್

ದೇಶದ ಅತಿ ದೊಡ್ಡ ಹಾಗೂ ಆಡಳಿತಾರೂಢ ಪಕ್ಷವೇ ದೆಹಲಿಯಲ್ಲಿ ಇಂತಹ ‘ಗೂಂಡಾಗಿರಿ’ ಮಾಡಿದರೆ ದೇಶದ ಯುವಕರಿಗೆ ಯಾವ ಸಂದೇಶ ನೀಡಲಿದೆ? ದೇಶ ಈ ರೀತಿ ಪ್ರಗತಿ ಹೊಂದಲು ಸಾಧ್ಯವಿಲ್ಲ ಎಂದ ಕೇಜ್ರಿವಾಲ್

ಭಾರತದ ದೊಡ್ಡ ಪಕ್ಷ ಗೂಂಡಾಗಿರಿ ನಡೆಸಿದರೆ ಅದು ತಪ್ಪು ಸಂದೇಶ ರವಾನಿಸುತ್ತದೆ, ದೇಶಕ್ಕಾಗಿ ನಾನು ಪ್ರಾಣ ಕೊಡಬಲ್ಲೆ: ಅರವಿಂದ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Mar 31, 2022 | 1:59 PM

ದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಅವರ ಮನೆ ಮೇಲೆ ಬಿಜೆಪಿ (BJP) ಕಾರ್ಯಕರ್ತರು ಬುಧವಾರ ದಾಳಿ ನಡೆಸಿದ್ದು, ಕೇಜ್ರಿವಾಲ್ ಇದನ್ನು ಗೂಂಡಾಗಿರಿ ಎಂದು ಕರೆದಿದ್ದಾರೆ.”ಭಾರತದ ಅತಿದೊಡ್ಡ ಪಕ್ಷವು ಗೂಂಡಾಗಿರಿಯಲ್ಲಿ ತೊಡಗಿದರೆ, ಅದು ತಪ್ಪು ಸಂದೇಶವನ್ನು ರವಾನಿಸುತ್ತದೆ. ಅರವಿಂದ ಕೇಜ್ರಿವಾಲ್ ಮುಖ್ಯವಲ್ಲ ಆದರೆ ರಾಷ್ಟ್ರ ಮುಖ್ಯ. ನಾನು ದೇಶಕ್ಕಾಗಿ ನನ್ನ ಪ್ರಾಣವನ್ನು ಕೊಡಬಲ್ಲೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.  ದೇಶದ ಅತಿ ದೊಡ್ಡ ಹಾಗೂ ಆಡಳಿತಾರೂಢ ಪಕ್ಷವೇ ದೆಹಲಿಯಲ್ಲಿ ಇಂತಹ ‘ಗೂಂಡಾಗಿರಿ’ ಮಾಡಿದರೆ ದೇಶದ ಯುವಕರಿಗೆ ಯಾವ ಸಂದೇಶ ನೀಡಲಿದೆ? ದೇಶ ಈ ರೀತಿ ಪ್ರಗತಿ ಹೊಂದಲು ಸಾಧ್ಯವಿಲ್ಲ ಎಂದು ಕೇಜ್ರಿವಾಲ್ ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.  ಬುಧವಾರ ಆಮ್ ಆದ್ಮಿ ಪಕ್ಷ (AAP) ಕೇಜ್ರಿವಾಲ್ ಅವರ ಮನೆ ಮೇಲಿನ ದಾಳಿಯ ಕುರಿತು ಟ್ವೀಟ್ ಮಾಡಿದ್ದು, “ಬಿಜೆಪಿ ಗೂಂಡಾಗಳು ದೆಹಲಿ ಪೊಲೀಸರ ಸಮ್ಮುಖದಲ್ಲಿ ಸಿಸಿಟಿವಿ ಕ್ಯಾಮೆರಾಗಳು ಮತ್ತು ಭದ್ರತಾ ತಡೆಗಳನ್ನು ಮುರಿದಿದ್ದಾರೆ” ಎಂದು ಹೇಳಿದೆ. ಇದಾದ ನಂತರ 35-ಸೆಕೆಂಡ್ ಕ್ಲಿಪ್ ಅನ್ನು ಟ್ವೀಟ್ ಮಾಡಿ, ಅದನ್ನು “ರಾ ಸಿಸಿಟಿವಿ ಫೂಟೇಜ್” ಎಂದು ಕರೆದಿದೆ. ಕ್ಲಿಪ್ ಸುಮಾರು ಎರಡು ಡಜನ್ ಪ್ರತಿಭಟನಾಕಾರರು ಗೇಟ್‌ಗಳವರೆಗೆ ನಡೆದುಕೊಂಡು ಹೋಗುತ್ತಿರುವುದನ್ನು ತೋರಿಸುತ್ತದೆ ಮತ್ತು ಭದ್ರತಾ ತಡೆಗೋಡೆಯನ್ನು ಉರುಳಿಸುವುದನ್ನು ತೋರಿಸುತ್ತದೆ.

ಘಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಗುರುವಾರ ಎಂಟು ಜನರನ್ನು ಬಂಧಿಸಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಚಲನಚಿತ್ರದ ಕುರಿತು ಕೇಜ್ರಿವಾಲ್ ಅವರ ಹೇಳಿಕೆಗಳನ್ನು ಖಂಡಿಸಿ ದೆಹಲಿಯಲ್ಲಿ ಬಿಜೆಪಿಯ ಯುವ ಘಟಕವಾದ ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ನ ಸುಮಾರು 200 ಪ್ರತಿಭಟನಾಕಾರರು ಪೊಲೀಸ್ ಬ್ಯಾರಿಕೇಡ್‌ಗಳನ್ನು ಭೇದಿಸಿ ಕೇಜ್ರಿವಾಲ್ ಮನೆ ಹೊರಗೆ ಪ್ರತಿಭಟನೆ ನಡೆಸಿದ್ದರು. ಬಿಜೆಪಿ ಕೇಜ್ರಿವಾಲ್ ಅವರನ್ನು ಕೊಲ್ಲಲು ಪ್ರಯತ್ನಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ಕೇಜ್ರಿವಾಲ್ ಮನೆ ಮೇಲಿನ ದಾಳಿ ವಿರುದ್ಧ ದೆಹಲಿ ಹೈಕೋರ್ಟ್ ಮೊರೆ ಹೋದ ಆಪ್ ಶಾಸಕ ಸೌರಭ್ ಭಾರದ್ವಾಜ್ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಅಧಿಕೃತ ನಿವಾಸದ ಮೇಲೆ ಬುಧವಾರ ನಡೆದ ದಾಳಿ ಮತ್ತು ಧ್ವಂಸ ಪ್ರಕರಣದ ಹಿನ್ನೆಲೆಯಲ್ಲಿ ಎಎಪಿ ಶಾಸಕ ಸೌರಭ್ ಭಾರದ್ವಾಜ್ ದೆಹಲಿ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದಾರೆ. ದಾಳಿ ಮತ್ತು ಅದರ ದುಷ್ಕರ್ಮಿಗಳಿಗೆ ಸಂಬಂಧಿಸಿದಂತೆ ಕ್ರಿಮಿನಲ್ ತನಿಖೆ ಮತ್ತು ಭವಿಷ್ಯದಲ್ಲಿ ದೆಹಲಿ ಸಿಎಂ ಮತ್ತು ಅವರ ನಿವಾಸದ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸೂಕ್ತ ನಿರ್ದೇಶನಗಳನ್ನು ಅರ್ಜಿಯಲ್ಲಿ ಕೋರಲಾಗಿದೆ.

ಇದನ್ನೂ ಓದಿ: ಚುನಾವಣೆಯಲ್ಲಿ ಸೋಲಿಸಲು ಆಗುತ್ತಿಲ್ಲ ಹಾಗಾಗಿ ಕೇಜ್ರಿವಾಲ್​​ನ್ನು ಕೊಲ್ಲಲು ಬಿಜೆಪಿ ಪ್ರಯತ್ನಿಸುತ್ತಿದೆ: ಆಮ್ ಆದ್ಮಿ ಪಕ್ಷ

Published On - 1:57 pm, Thu, 31 March 22

ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್