AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದು ಅತ್ಯಾಚಾರವೇ ಆಗಿದ್ರೆ ಆರೋಪಿ ಕುತ್ತಿಗೆಯಲ್ಲಿ ಈ ಲವ್ ಬೈಟ್ ಯಾಕೆ ಇರ್ತಿತ್ತು? ವಕೀಲರ ಪ್ರಶ್ನೆ

ದಕ್ಷಿಣ ಕೋಲ್ಕತ್ತಾ ಕಾನೂನು ಕಾಲೇಜಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಮನೋಜಿತ್ ಮಿಶ್ರಾ ಅವರ ವಕೀಲರು, ವೈದ್ಯಕೀಯ ಪರೀಕ್ಷೆಯ ಸಮಯದಲ್ಲಿ ತಮ್ಮ ಕಕ್ಷಿದಾರರ ದೇಹದಲ್ಲಿ ಕಂಡುಬಂದ ಗೀರು ಗುರುತುಗಳು ಲವ್ ಬೈಟ್ ಎಂದು ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್ ನಾಯಕ ಮನೋಜಿತ್, ಕಾನೂನು ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿಸಲ್ಪಟ್ಟ ಮೂವರು ವ್ಯಕ್ತಿಗಳಲ್ಲಿ ಒಬ್ಬರು. ಮೂವರನ್ನು ಜುಲೈ 8 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಅದು ಅತ್ಯಾಚಾರವೇ ಆಗಿದ್ರೆ ಆರೋಪಿ ಕುತ್ತಿಗೆಯಲ್ಲಿ ಈ ಲವ್ ಬೈಟ್ ಯಾಕೆ ಇರ್ತಿತ್ತು? ವಕೀಲರ ಪ್ರಶ್ನೆ
ಮನೋಜಿತ್ ಮಿಶ್ರಾ Image Credit source: Hindustan Times
ನಯನಾ ರಾಜೀವ್
|

Updated on: Jul 03, 2025 | 9:14 AM

Share

ಕೋಲ್ಕತ್ತಾ, ಜುಲೈ 03: ಕೋಲ್ಕತ್ತಾ ಕಾನೂನು ಕಾಲೇಜಿ(Law College)ನ ಆವರಣದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪರ ವಕೀಲರು ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ. ಅದು ಅತ್ಯಾಚಾರವೇ ಆಗಿದ್ದರೆ ಆರೋಪಿಯ ಕುತ್ತಿಗೆಯಲ್ಲಿ ಲವ್ ಬೈಟ್ ಯಾಕೆ ಇರ್ತಿತ್ತು ಎಂದು ಪ್ರಶ್ನೆ ಮಾಡಿದ್ದಾರೆ. ಕಾನೂನು ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿನಿ ಮೇಲೆ ಮನೋಜಿತ್ ಮಿಶ್ರಾ ಸೇರಿ ಮೂವರು ಆರೋಪಿಗಳು ಸಾಮೂಹಿಕ ಅತ್ಯಾಚಾರವೆಸಗಿದ್ದರು. ಬಳಿಕ ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಳು.

ಸಿಸಿಟಿವಿ ಕ್ಯಾಮರಾವನ್ನು ಪರಿಶೀಲಿಸಿದ ಬಳಿಕ ಮೂವರು ಆಕೆಯನ್ನು ಎಳೆದುಕೊಂಡು ಹೋಗಿರುವುದು ಸತ್ಯ ಎಂದು ಪೊಲೀಸರು ತಿಳಿಸಿದ್ದು, ಮನೋಜಿತ್ ಮಿಶ್ರಾನನ್ನು ಬಂಧಿಸಿದ್ದರು. ಇದೀಗ ಮನೋಜಿತ್ ಪರ ವಕೀಲ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದು, ಒಂದೊಮ್ಮೆ ಅದು ಅತ್ಯಾಚಾರವೇ ಆಗಿದ್ದರೆ, ಮನೋಜಿತ್ ಕುತ್ತಿಗೆಯಲ್ಲಿ ಲವ್ ಬೈಟ್ ಯಾಕೆ ಇರುತ್ತಿತ್ತು ಎಂದು ಕೇಳಿದ್ದು ಈ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿದೆ.

ಮನೋಜಿತ್ ಪರ ವಕೀಲ ರಾಜು ಗಂಗೋಲಿ, ಮನೋಜಿತ್ ಮಿಶ್ರಾ ಅವರ ದೇಹದ ಮೇಲೂ ಲವ್​ ಬೈಟ್ಸ್​​ಗಳು ಗುರುತುಗಳು ಕಂಡುಬಂದಿವೆ, ಅತ್ಯಾಚಾರ ನಡೆದಿದ್ದರೆ, ಆರೋಪಿಯ ದೇಹದ ಮೇಲೆ ಎಂದಿಗೂ ಈ ರೀತಿಯ ಗುರುತುಗಳು  ಇರುತ್ತಿರಲಿಲ್ಲ ಎಂದು ವಾದಿಸಿದ್ದಾರೆ. ಸಂತ್ರಸ್ತೆಯ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆಯೇ ಮತ್ತು ಆಕೆಯ ಕರೆ ದಾಖಲೆಗಳ ಬಗ್ಗೆ ಪರಿಶೀಲಿಸಲಾಗಿದೆಯೇ ಎಂದು ಅವರು ಪ್ರಶ್ನಿಸಿದರು.

ಪ್ರಮುಖ ಆರೋಪಿಗಳಾದ ಮಾಜಿ ವಿದ್ಯಾರ್ಥಿ ಮನೋಜಿತ್ ಮಿಶ್ರಾ ಮತ್ತು ಪ್ರಸ್ತುತ ಕಾನೂನು ಕಾಲೇಜಿನ ವಿದ್ಯಾರ್ಥಿಗಳಾದ ಜೈಬ್ ಅಹ್ಮದ್ ಮತ್ತು ಪ್ರಮಿತ್ ಮುಖರ್ಜಿ ಅವರನ್ನು ಬಂಧಿಸಲಾಗಿತ್ತು. ನಂತರ, ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿನ ಭದ್ರತಾ ಸಿಬ್ಬಂದಿ ಪಿನಾಕಿ ಬಂಡೋಪಾಧ್ಯಾಯ ಅವರನ್ನು ಸಹ ಬಂಧಿಸಲಾಗಿತ್ತು.

ಮತ್ತಷ್ಟು ಓದಿ: ಕೋಲ್ಕತ್ತಾ: ಕಾನೂನು ವಿದ್ಯಾರ್ಥಿನಿ ಮೇಲೆ ಕಾಲೇಜಿನ ಆವರಣದೊಳಗೆ ಸಾಮೂಹಿಕ ಅತ್ಯಾಚಾರ

ಕಸ್ಬಾ ಪ್ರದೇಶದಲ್ಲಿ ಕಾನೂನು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಈ ಪ್ರಕರಣದಲ್ಲಿ ಸೆಕ್ಯೂರಿಟಿ ಗಾರ್ಡ್ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿಯ ವಿವಾಹ ಪ್ರಸ್ತಾಪವನ್ನು ತಿರಸ್ಕರಿಸಿದ ನಂತರ ಕೋಲ್ಕತ್ತಾ ಕಾನೂನು ಕಾಲೇಜಿನೊಳಗೆ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಪೊಲೀಸರ ಮುಂದೆ ಸಂತ್ರಸ್ತೆ ಹೇಳಿಕೆ ದಾಖಲಿಸಿದ್ದಾಳೆ.

ಪರವಾನಗಿ ರದ್ದು ಪಶ್ಚಿಮ ಬಂಗಾಳ ಬಾರ್ ಕೌನ್ಸಿಲ್ ಬುಧವಾರ ಮನೋಜಿತ್ ಮಿಶ್ರಾ ಅವರ ಪರವಾನಗಿಯನ್ನು ರದ್ದುಗೊಳಿಸಿ, ಅವರು ವಕೀಲರಾಗಿ ಅಭ್ಯಾಸ ಮಾಡುವುದನ್ನು ನಿಷೇಧಿಸಿದೆ. ಘಟನೆಯ ಕುರಿತು ಔಪಚಾರಿಕ ದೂರು ಸ್ವೀಕರಿಸಿದ ಏಳು ದಿನಗಳ ನಂತರ ಬಾರ್ ಕೌನ್ಸಿಲ್ ಕ್ರಮ ಕೈಗೊಂಡಿತು.

ಜುಲೈ 2 ರಂದು ನಡೆದ ಬಂಗಾಳ ಬಾರ್ ಕೌನ್ಸಿಲ್ ಸಭೆಯ ನಂತರ, ಮಿಶ್ರಾ ಅವರ ಹೆಸರನ್ನು ವಕೀಲರ ಪಟ್ಟಿಯಿಂದ ತೆಗೆದುಹಾಕಲಾಗುವುದು ಮತ್ತು ನಿರ್ಧಾರವನ್ನು ಕೇಂದ್ರ ಬಾರ್ ಕೌನ್ಸಿಲ್‌ಗೆ ತಿಳಿಸಲಾಗುವುದು ಎಂದು ನಿರ್ಧರಿಸಲಾಯಿತು.

ಮಿಶ್ರಾ ತೃಣಮೂಲ ಕಾಂಗ್ರೆಸ್ ವಿದ್ಯಾರ್ಥಿ ಪರಿಷತ್ತಿನಲ್ಲಿ (TMCP) ಪ್ರಮುಖ ಹುದ್ದೆಯನ್ನು ಹೊಂದಿದ್ದರು ಮತ್ತು ಅಲಿಪುರ ನ್ಯಾಯಾಲಯದಲ್ಲಿ ವಕೀಲರಾಗಿ ಅಭ್ಯಾಸ ಮಾಡುತ್ತಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ