AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೊಮ್ಮೆ ಭೂ ಹಗರಣ ಸಾಬೀತಾದರೆ ನಾನು ರಾಜಕೀಯದಿಂದಲೇ ಹೊರಬರುತ್ತೇನೆ: ಹೇಮಂತ್ ಸೊರೆನ್

ಒಂದೊಮ್ಮೆ ಭೂಹಗರಣ ಸಾಬೀತಾದಲ್ಲಿ ನಾನು ರಾಜಕೀಯವನ್ನೇ ಬಿಡುತ್ತೇನೆ ಎಂದು ಜಾರ್ಖಂಡ್​ ಮಾಡಿ ಸಿಎಂ, ಹೇಮಂತ್ ಸೊರೆನ್ ಹೇಳಿದ್ದಾರೆ. ಜಾರ್ಖಂಡ್​ ವಿಧಾನಸಭೆಯಲ್ಲಿ ನಡೆಯುತ್ತಿರುವ ವಿಶ್ವಾಸಮತ ಯಾಚನೆಯಲ್ಲಿ ಪಾಲ್ಗೊಂಡಿದ್ದಾರೆ. ನಾವು ಇನ್ನೂ ಸೋಲನ್ನು ಒಪ್ಪಿಕೊಂಡಿಲ್ಲ. ಅವರು ನನ್ನನ್ನು ಕಂಬಿ ಹಿಂದೆ ಹಾಕುವ ಮೂಲಕ ಯಶಸ್ವಿಯಾಗಬಹುದೆಂದು ಅವರು ಭಾವಿಸಿದರೆ ಅದು ತಪ್ಪು ಎಂದು ಹೇಳಿದ್ದಾರೆ.

ಒಂದೊಮ್ಮೆ ಭೂ ಹಗರಣ ಸಾಬೀತಾದರೆ ನಾನು ರಾಜಕೀಯದಿಂದಲೇ ಹೊರಬರುತ್ತೇನೆ: ಹೇಮಂತ್ ಸೊರೆನ್
ಹೇಮಂತ್ ಸೊರೆನ್ Image Credit source: Jagran
ನಯನಾ ರಾಜೀವ್
|

Updated on: Feb 05, 2024 | 2:07 PM

Share

ಒಂದೊಮ್ಮೆ ಭೂ ಹಗರಣ ಸಾಬೀತಾದರೆ ನಾನು ರಾಜಕೀಯದಿಂದಲೇ ಹೊರಬರುತ್ತೇನೆ ಎಂದು ಜಾರ್ಖಂಡ್​ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್(Hemanth Soren) ಹೇಳಿದ್ದಾರೆ. ಅಕ್ರಮ ಹಣವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಹೇಮಂತ್ ಸೊರೆನ್ ಅನ್ನು ಬಂಧಿಸಿದೆ. ಜಾರ್ಖಂಡ್‌(Jharkhand)ನಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಚಂಪೈ ಸೊರೆನ್ ಸರ್ಕಾರ ಇಂದು 81 ಸದಸ್ಯ ಬಲದ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸಲಿದೆ.

ನಾವು ಇನ್ನೂ ಸೋಲನ್ನು ಒಪ್ಪಿಕೊಂಡಿಲ್ಲ. ಅವರು ನನ್ನನ್ನು ಕಂಬಿ ಹಿಂದೆ ಹಾಕುವ ಮೂಲಕ ಯಶಸ್ವಿಯಾಗಬಹುದೆಂದು ಅವರು ಭಾವಿಸಿದರೆ ಅದು ತಪ್ಪು ಎಂದು ಹೇಳಿದ್ದಾರೆ. ಹೇಮಂತ್ ಸೊರೆನ್ ಅವರು ತಮ್ಮ ಬಂಧನಕ್ಕೂ ಮುನ್ನ ಮುಖ್ಯಮಂತ್ರಿ ಹುದ್ದೆಗೆ ಜನವರಿ 31ರಂದು ರಾಜೀನಾಮೆ ನೀಡಿದ್ದರು.

ರಾಂಚಿಯ ವಿಶೇಷ ನ್ಯಾಯಾಲಯವು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೆನ್ ಅವರಿಗೆ ಸದನದಲ್ಲಿ ಪಾಲ್ಗೊಳ್ಳಲು ಅನುಮತಿ ನೀಡಿತ್ತು. ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೇಮಂತ್ ಸೋರೆನ್ ಅವರನ್ನು ಜಾರಿ ನಿರ್ದೇಶನಾಲಯವು ಜನವರಿ 31 ರಂದು ಬಂಧಿಸಿತ್ತು. ಫೆಬ್ರವರಿ 2 ರಂದು ನ್ಯಾಯಾಲಯ ಅವರನ್ನು ಐದು ದಿನಗಳ ಕಾಲ ಇಡಿ ಕಸ್ಟಡಿಗೆ ಒಪ್ಪಿಸಿತ್ತು.

ಮತ್ತಷ್ಟು ಓದಿ: Champai Soren: ಹೇಮಂತ್ ಸೊರೆನ್ ರಾಜೀನಾಮೆ; ಚಂಪೈ ಸೊರೆನ್ ಜಾರ್ಖಂಡ್ ನೂತನ ಸಿಎಂ

ತಾವು ವಿಧಾನಸಭೆಯ ಸದಸ್ಯರಾಗಿದ್ದು, ಸದನದ ವಿಶೇಷ ಅಧಿವೇಶನದಲ್ಲಿ ಭಾಗವಹಿಸುವ ಹಕ್ಕಿದೆ ಎಂದು ಅವರು ನ್ಯಾಯಾಲಯದ ಮುಂದೆ ಮನವಿ ಮಾಡಿದ್ದರು. ಚಂಪೈ ಸೊರೆನ್ ನೇತೃತ್ವದ ಹೊಸ ಸರ್ಕಾರವು ಸದನದಲ್ಲಿ ತನ್ನ ಬಹುಮತವನ್ನು ಸಾಬೀತುಪಡಿಸಲು ಕರೆದಿರುವ ವಿಶೇಷ ಅಧಿವೇಶನದಲ್ಲಿ ಶಾಸಕಾಂಗ ಪಕ್ಷದ ನಾಯಕ ಚಂಪೈ ಸೊರೆನ್ ಅವರು ಹೇಮಂತ್ ಬಂಧನದ ನಂತರ ಜಾರ್ಖಂಡ್‍ನ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.

ಹೇಮಂತ್ ಸೊರೆನ್ ಅವರು ವಿಶೇಷ ಪಿಎಂಎಲ್‍ಎ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಹೊಸ ಸರ್ಕಾರ ಕೋರಿರುವ ವಿಶ್ವಾಸ ಮತದಲ್ಲಿ ಭಾಗವಹಿಸಲು ಅನುಮತಿ ನೀಡುವಂತೆ ಕೋರಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ