AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರುಣಾನಿಧಿಯ ಮಗ ಆಗಿದ್ರೆ ಗೆಲ್ತಿದ್ದೆ, ನನ್ನಪ್ಪ ಕುಪ್ಪುಸ್ವಾಮಿ ಆದ ಕಾರಣ ಚುನಾವಣೆಯಲ್ಲಿ ಗೆಲ್ಲಲು ಸ್ವಲ್ಪ ಸಮಯ ಬೇಕು: ಅಣ್ಣಾಮಲೈ

ನನ್ನ ತಂದೆಯ ಹೆಸರು ಕುಪ್ಪುಸ್ವಾಮಿ, ಹಾಗಾಗಿ ನಾನು ಚುನಾವಣೆಯಲ್ಲಿ ಗೆಲ್ಲಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. 2026ರಲ್ಲಿ ನಾವು ತಮಿಳುನಾಡಿನಲ್ಲಿ ಸರ್ಕಾರ ರಚಿಸುತ್ತೇವೆ' ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಹೇಳಿದ್ದಾರೆ. 

ಕರುಣಾನಿಧಿಯ ಮಗ ಆಗಿದ್ರೆ ಗೆಲ್ತಿದ್ದೆ, ನನ್ನಪ್ಪ ಕುಪ್ಪುಸ್ವಾಮಿ ಆದ ಕಾರಣ ಚುನಾವಣೆಯಲ್ಲಿ ಗೆಲ್ಲಲು ಸ್ವಲ್ಪ ಸಮಯ ಬೇಕು: ಅಣ್ಣಾಮಲೈ
ಅಣ್ಣಾಮಲೈ
ರಶ್ಮಿ ಕಲ್ಲಕಟ್ಟ
|

Updated on:Jun 06, 2024 | 8:08 PM

Share

ಕೊಯಮತ್ತೂರು ಜೂನ್ 06: ”ನನ್ನ ತಂದೆ ಕರುಣಾನಿಧಿ (Karunanidhi) ಆಗಿದ್ದರೆ ನಾನೂ ಕೂಡ ಇಷ್ಟೊತ್ತಿಗೆ ಚುನಾವಣೆಯಲ್ಲಿ ಗೆಲ್ಲುತ್ತಿದ್ದೆ. ನನ್ನ ತಂದೆಯ ಹೆಸರು ಕುಪ್ಪುಸ್ವಾಮಿ, ಹಾಗಾಗಿ ನಾನು ಚುನಾವಣೆಯಲ್ಲಿ ಗೆಲ್ಲಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. 2026ರಲ್ಲಿ ನಾವು ತಮಿಳುನಾಡಿನಲ್ಲಿ (Tamilnadu) ಸರ್ಕಾರ ರಚಿಸುತ್ತೇವೆ’ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ (K Annamalai) ಹೇಳಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ಸೋಲುಂಡ ನಂತರ ಕೊಯಮತ್ತೂರಿನಲ್ಲಿ ಬಿಜೆಪಿ ನಾಯಕ ಈ ರೀತಿ ಹೇಳಿದ್ದಾರೆ.  ಕೊಯಮತ್ತೂರಿನಲ್ಲಿ ಅಣ್ಣಾಮಲೈ ಅವರ ಸೋಲಿನ ಬಗ್ಗೆ ಡಿಎಂಕೆ ನಾಯಕಿ ಕನಿಮೊಳಿ ಟೀಕಿಸಿದ ನಂತರ ಬಿಜೆಪಿ ನಾಯಕರ ಪ್ರತಿಕ್ರಿಯೆ ಬಂದಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ನನಗೆ ಯಾವ ಅರ್ಹತೆ ಇದೆ ಎಂದು ಪದೇ ಪದೇ ಕೇಳುತ್ತಾರೆ. ಈಗ ಎರಡನೇ ಬಾರಿಗೆ ಜನರಿಂದ ಆಯ್ಕೆಯಾದ ಪ್ರತಿನಿಧಿಯಾಗಿ ಅವರಿಗೆ ಉತ್ತರ ನೀಡುತ್ತೇನೆ. ಈ ಅರ್ಹತೆಯೂ ಇಲ್ಲದ ವ್ಯಕ್ತಿ ಇಲ್ಲಿ ಬಿಜೆಪಿ ನಾಯಕರಾಗಿ ಮುಂದುವರಿದರೆ ಪಕ್ಷಕ್ಕೆ ಒಳ್ಳೆಯದಲ್ಲ ಎಂದು ಕನಿಮೊಳಿ ಹೇಳಿದ್ದರು. ಡಿಎಂಕೆ ಸಂಸ್ಥಾಪಕ ಎಂ ಕರುಣಾನಿಧಿ ಅವರ ಪುತ್ರಿ ಕನಿಮೊಳಿ ತೂತುಕುಡಿಯಿಂದ ಲೋಕಸಭೆಗೆ ಮತ್ತೊಮ್ಮೆ ಆಯ್ಕೆಯಾಗಿದ್ದಾರೆ. ಇವರು ಎಐಎಡಿಎಂಕೆ ಅಭ್ಯರ್ಥಿ ವಿರುದ್ಧ 3 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

ಮತ್ತೊಂದೆಡೆ, ಜೂನ್ 4, 2024 ರಂದು ಫಲಿತಾಂಶ ಪ್ರಕಟವಾದಾಗ ಕೊಯಮತ್ತೂರು ಲೋಕಸಭಾ ಕ್ಷೇತ್ರದಲ್ಲಿ ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಅವರು ಡಿಎಂಕೆಯ ಗಣಪತಿ ರಾಜ್‌ಕುಮಾರ್ ವಿರುದ್ಧ 1 ಲಕ್ಷ ಮತಗಳ ಅಂತರದಿಂದ ಪರಾಭವಗೊಂಡಿದ್ದಾರೆ.

ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳ ಪಟ್ಟಿಯನ್ನು ರಾಷ್ಟ್ರಪತಿಗೆ ಹಸ್ತಾಂತರಿಸಿದ ಚುನಾವಣಾ ಆಯೋಗ

2024 ರ ಲೋಕಸಭಾ ಚುನಾವಣೆಯ ಫಲಿತಾಂಶಗಳ ಕುರಿತು ಮಾತನಾಡಿದ ಅಣ್ಣಾಮಲೈ, “10 ವರ್ಷಗಳ ಹಿಂದೆ ನವೀನ್ ಪಟ್ನಾಯಕ್ ಅವರೊಂದಿಗೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿಯನ್ನು ಕೇಳಲಾಗಿತ್ತು. ಹಾಗಾಗಿರುತ್ತಿದ್ದರೆ ಇಂದು ಬಿಜೆಪಿ ಒಡಿಶಾವನ್ನು ಗೆಲ್ಲುತ್ತಿತ್ತೇ? 2004 ರಲ್ಲಿ ಶೂನ್ಯ ಸ್ಥಾನದಿಂದ 2009 ರಲ್ಲಿ 1 ಸ್ಥಾನಕ್ಕೆ, ಈಗ ನಾವು ಒಡಿಶಾವನ್ನು ಆಳುತ್ತಿದ್ದೇವೆ. ಹಂತ ಹಂತವಾಗಿ ಒಂದು ಪಕ್ಷ ಬೆಳೆಯುವುದು ಹೀಗೆ. ನಾನು ತಮಿಳುನಾಡಿನಲ್ಲಿ ಪಕ್ಷವನ್ನು ಬೆಳೆಸಲು ಬಂದಿದ್ದೇನೆ, ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳಲು ಅಲ್ಲ. ಪಕ್ಷವು ಹೊಂದಾಣಿಕೆಯ ನಾಯಕತ್ವವನ್ನು ಬಯಸಿದರೆ, ಅವರು ಅಂತಹ ನಾಯಕನನ್ನು ನಿಯೋಜಿಸುತ್ತಾರ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:06 pm, Thu, 6 June 24

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ