AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜಯ್ ರಾವತ್ ಮುಗ್ಧರಾಗಿದ್ದರೆ ಭಯ ಪಡುವುದೇಕೆ?: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂದೆ

ಸಂಜಯ್ ರಾವತ್ ಮುಗ್ಧರಾಗಿದ್ದರೆ ಭಯ ಪಡುವುದು ಏಕೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಪ್ರಶ್ನಿಸಿದ್ದಾರೆ.

ಸಂಜಯ್ ರಾವತ್ ಮುಗ್ಧರಾಗಿದ್ದರೆ ಭಯ ಪಡುವುದೇಕೆ?: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂದೆ
Eknath ShindeImage Credit source: ANI
TV9 Web
| Edited By: |

Updated on: Jul 31, 2022 | 3:13 PM

Share

ಮುಂಬೈ: ಸಂಜಯ್ ರಾವತ್ ಮುಗ್ಧರಾಗಿದ್ದರೆ ಭಯ ಪಡುವುದು ಏಕೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಪ್ರಶ್ನಿಸಿದ್ದಾರೆ.

ಶಿವಸೇನೆ ನಾಯಕ ಸಂಜಯ್ ರಾವತ್‌ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈಗಾಗಲೇ ಪತ್ರಾ ಚಾಲ್ ಭೂ ಹಗರಣ ಪ್ರಕರಣದಲ್ಲಿ ಇಡಿ ಅವರ ವಿಚಾರಣೆ ನಡೆಸಿತ್ತು. ಈ ಕುರಿತು ಮಾತನಾಡಿರುವ ಸಿಎಂ ಏಕನಾಥ್ ಶಿಂದೆ, ಸಂಜಯ್ ರಾವತ್ ಏನೂ ತಪ್ಪು ಮಾಡಿಲ್ಲವೆಂದರೆ ಭಯ ಪಡುವುದು ಏಕೆ, ಇಡಿ ಕ್ರಮಗಳಿಂದ ಯಾರಿಗಾದರೂ ಭಯವಿದ್ದರೆ ಅವರು ನಮ್ಮನ್ನು ಅಥವಾ ಬಿಜೆಪಿಗೆ ಸೇರುವುದು ಬೇಡ ಎಂದರು.

ತನಿಖೆ ನಡೆಯುತ್ತಿದೆ. ಅವನೇನೂ ತಪ್ಪು ಮಾಡಿಲ್ಲ ಎಂದಾದರೆ ಅವರಿಗೇಕೆ ಭಯ? ಇಡಿಗೆ ಹೆದರಿ ನಮ್ಮ ಪಕ್ಷಕ್ಕೆ ಬರಬಾರದು ಎಂದರು.

ಇಡಿ ಅಧಿಕಾರಿಗಳು ಮುಂಬೈನಲ್ಲಿರುವ ಸಂಜಯ್ ರಾವತ್ ಮನೆ ಮೇಲೆ ದಾಳಿ ನಡೆಸಿದೆ. ಪತ್ರಾ ಚಾಲ್ ಭೂ ಹಗರಣ ಪ್ರಕರಣದ ಸಂಬಂಧ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಇಡಿ ಸಂಜಯ ರಾವತ್‌ಗೆ ಸಮನ್ಸ್ ನೀಡಿತ್ತು. ಎರಡು ಬಾರಿ ಅವರು ವಿಚಾರಣೆಗೆ ಗೈರಾಗಿದ್ದರು. ಜುಲೈ 27ರಂದು ಸಹ ಅವರು ಇಡಿ ಮುಂದೆ ಹಾಜರಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಇಡಿ ದಾಳಿ ನಡೆಸಿದೆ ಎಂದು ಹೇಳಲಾಗಿದೆ.

ಈ ಪ್ರಕರಣದ ತನಿಖೆ ನಡೆಸುತ್ತಿರುವ ಇಡಿ ಸಂಜಯ್‌ ರಾವತ್‌ಗೆ ಸೇರಿದ 1034 ಕೋಟಿ ರೂ. ಮೊತ್ತದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಈಗ ಮತ್ತೆ ದಾಳಿ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು