AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜಯ್ ರಾವತ್ ಮುಗ್ಧರಾಗಿದ್ದರೆ ಭಯ ಪಡುವುದೇಕೆ?: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂದೆ

ಸಂಜಯ್ ರಾವತ್ ಮುಗ್ಧರಾಗಿದ್ದರೆ ಭಯ ಪಡುವುದು ಏಕೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಪ್ರಶ್ನಿಸಿದ್ದಾರೆ.

ಸಂಜಯ್ ರಾವತ್ ಮುಗ್ಧರಾಗಿದ್ದರೆ ಭಯ ಪಡುವುದೇಕೆ?: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂದೆ
Eknath ShindeImage Credit source: ANI
TV9 Web
| Edited By: |

Updated on: Jul 31, 2022 | 3:13 PM

Share

ಮುಂಬೈ: ಸಂಜಯ್ ರಾವತ್ ಮುಗ್ಧರಾಗಿದ್ದರೆ ಭಯ ಪಡುವುದು ಏಕೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಪ್ರಶ್ನಿಸಿದ್ದಾರೆ.

ಶಿವಸೇನೆ ನಾಯಕ ಸಂಜಯ್ ರಾವತ್‌ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈಗಾಗಲೇ ಪತ್ರಾ ಚಾಲ್ ಭೂ ಹಗರಣ ಪ್ರಕರಣದಲ್ಲಿ ಇಡಿ ಅವರ ವಿಚಾರಣೆ ನಡೆಸಿತ್ತು. ಈ ಕುರಿತು ಮಾತನಾಡಿರುವ ಸಿಎಂ ಏಕನಾಥ್ ಶಿಂದೆ, ಸಂಜಯ್ ರಾವತ್ ಏನೂ ತಪ್ಪು ಮಾಡಿಲ್ಲವೆಂದರೆ ಭಯ ಪಡುವುದು ಏಕೆ, ಇಡಿ ಕ್ರಮಗಳಿಂದ ಯಾರಿಗಾದರೂ ಭಯವಿದ್ದರೆ ಅವರು ನಮ್ಮನ್ನು ಅಥವಾ ಬಿಜೆಪಿಗೆ ಸೇರುವುದು ಬೇಡ ಎಂದರು.

ತನಿಖೆ ನಡೆಯುತ್ತಿದೆ. ಅವನೇನೂ ತಪ್ಪು ಮಾಡಿಲ್ಲ ಎಂದಾದರೆ ಅವರಿಗೇಕೆ ಭಯ? ಇಡಿಗೆ ಹೆದರಿ ನಮ್ಮ ಪಕ್ಷಕ್ಕೆ ಬರಬಾರದು ಎಂದರು.

ಇಡಿ ಅಧಿಕಾರಿಗಳು ಮುಂಬೈನಲ್ಲಿರುವ ಸಂಜಯ್ ರಾವತ್ ಮನೆ ಮೇಲೆ ದಾಳಿ ನಡೆಸಿದೆ. ಪತ್ರಾ ಚಾಲ್ ಭೂ ಹಗರಣ ಪ್ರಕರಣದ ಸಂಬಂಧ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಇಡಿ ಸಂಜಯ ರಾವತ್‌ಗೆ ಸಮನ್ಸ್ ನೀಡಿತ್ತು. ಎರಡು ಬಾರಿ ಅವರು ವಿಚಾರಣೆಗೆ ಗೈರಾಗಿದ್ದರು. ಜುಲೈ 27ರಂದು ಸಹ ಅವರು ಇಡಿ ಮುಂದೆ ಹಾಜರಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಇಡಿ ದಾಳಿ ನಡೆಸಿದೆ ಎಂದು ಹೇಳಲಾಗಿದೆ.

ಈ ಪ್ರಕರಣದ ತನಿಖೆ ನಡೆಸುತ್ತಿರುವ ಇಡಿ ಸಂಜಯ್‌ ರಾವತ್‌ಗೆ ಸೇರಿದ 1034 ಕೋಟಿ ರೂ. ಮೊತ್ತದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಈಗ ಮತ್ತೆ ದಾಳಿ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್