AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್​ ಖುರ್ಷಿದ್​ ಪುಸ್ತಕ ನಿಷೇಧಿಸಲಾಗದು, ನೀವೇ ಓದುವುದನ್ನು ಬಿಡಬಹುದು: ದೆಹಲಿ ಹೈಕೋರ್ಟ್​​

ಸಲ್ಮಾನ್ ಖುರ್ಷಿದ್​ ಪುಸ್ತಕದಲ್ಲಿ ಹೇಳಲಾದ ವಿಚಾರಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಅರ್ಜಿದಾರರು, ಪ್ರತಿಯೊಬ್ಬರಿಗೂ ವಾಕ್​ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ಆದರೆ ಅದು ನಿಯಂತ್ರಣ ಮೀರಬಾರದು ಎಂದಿದ್ದರು.

ಸಲ್ಮಾನ್​ ಖುರ್ಷಿದ್​ ಪುಸ್ತಕ ನಿಷೇಧಿಸಲಾಗದು, ನೀವೇ ಓದುವುದನ್ನು ಬಿಡಬಹುದು: ದೆಹಲಿ ಹೈಕೋರ್ಟ್​​
ದೆಹಲಿ ಹೈಕೋರ್ಟ್​
TV9 Web
| Edited By: |

Updated on: Nov 25, 2021 | 4:37 PM

Share

ಕಾಂಗ್ರೆಸ್​ ನಾಯಕ ಸಲ್ಮಾನ್​ ಖುರ್ಷಿದ್​ ಬರೆದ ಸನ್​ರೈಸ್ ಓವರ್ ಅಯೋಧ್ಯಾ ಎಂಬ ಪುಸ್ತಕ ಇತ್ತೀಚೆಗೆ ವಿವಾದ ಸೃಷ್ಟಿಸಿದೆ. ಆ ಪುಸ್ತಕದಲ್ಲಿ ಸಲ್ಮಾನ್ ಖುರ್ಷಿದ್​ ಹಿಂದುತ್ವವನ್ನು, ಇಸ್ಲಾಂ ಉಗ್ರ ಸಂಘಟನೆಗಳಾದ ಐಸಿಸ್​ ಮತ್ತು ಬೋಕೋ ಹರಾಮ್​ಗೆ ಹೋಲಿಸಿದ್ದೇ ಈ ವಿವಾದ, ವಿರೋಧಕ್ಕೆ ಕಾರಣ. ಕೆಲವರು ಆ ಪುಸ್ತಕವನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ದೆಹಲಿ ಹೈಕೋರ್ಟ್​ಗೆ ಅರ್ಜಿಯನ್ನೂ ಸಲ್ಲಿಸಿದ್ದರು. ಆದರೆ ದೆಹಲಿ ಹೈಕೋರ್ಟ್ ಆ ಅರ್ಜಿಯನ್ನು ವಜಾಗೊಳಿಸಿದೆ. ‘ಈ ಪುಸ್ತಕ ಓದುವುದರಿಂದ ಯಾರ ಭಾವನೆಗೆ ಧಕ್ಕೆಯಾಗುತ್ತದೆಯೋ, ಅಂಥವರು ಇದನ್ನು ಓದಲೇಬೇಡಿ. ಬೇರೆ ಏನಾದರೂ ಒಳ್ಳೆಯದನ್ನು ಓದಿ’ ಎಂದು ಸಲಹೆ ನೀಡಿದೆ.  

‘ಪುಸ್ತಕ ನಿಷೇಧಿಸಬೇಕು ಎಂದು ಇಲ್ಲಿ ಅರ್ಜಿ ಸಲ್ಲಿಸುವ ಬದಲು, ನೀವ್ಯಾಕೆ ಜನರಿಗೇ ಹೇಳಬಾರದು. ಈ ಪುಸ್ತಕವನ್ನು ಖರೀದಿಸಬೇಡಿ, ಓದಬೇಡಿ ಎಂದು ಜನರಿಗೇ ನೇರವಾಗಿ ಹೇಳಿ. ಈ ಪುಸ್ತಕದಲ್ಲಿ ಕೆಟ್ಟದಾಗಿ ಬರೆಯಲಾಗಿದೆ. ಹಾಗಾಗಿ ಓದಬೇಡಿ ಎಂದು ಪ್ರತಿಯೊಬ್ಬರಿಗೂ ಹೇಳಿ. ಇದರಲ್ಲಿ ಏನಾದರೂ ನೋವುಂಟಾಗುವ ವಿಷಯಗಳಿದ್ದರೆ, ಅದನ್ನು ಓದುವುದನ್ನು ಬಿಟ್ಟು, ಬೇರೆ ಏನಾದರೂ ಓದುವುದು ಒಳ್ಳೆಯದು’ ಎಂದು ಹೈಕೋರ್ಟ್ ಅರ್ಜಿದಾರರಿಗೆ ಹೇಳಿದೆ.

ಸಲ್ಮಾನ್ ಖುರ್ಷಿದ್​ ಪುಸ್ತಕದಲ್ಲಿ ಹೇಳಲಾದ ವಿಚಾರಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಅರ್ಜಿದಾರರು, ಪ್ರತಿಯೊಬ್ಬರಿಗೂ ವಾಕ್​ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ಆದರೆ ಅದು ನಿಯಂತ್ರಣ ಮೀರಬಾರದು. ಯಾರಿಗೂ ಇತರರ ಭಾವನೆಗಳನ್ನು ಉಲ್ಲಂಘಿಸುವ ಹಕ್ಕು ಇಲ್ಲ. ಆರ್ಟಿಕಲ್​ 19ರಲ್ಲಿರುವ ನಿರ್ಬಂಧಗಳನ್ನು ಮೀರಿದಂತೆ ಆಗುತ್ತದೆ ಎಂದು ದೆಹಲಿ ಹೈಕೋರ್ಟ್​ಗೆ ಹೇಳಿದ್ದರು. ಆದರೆ ಹೈಕೋರ್ಟ್​ ಪುಸ್ತಕ ನಿರ್ಬಂಧಿಸಲಾಗದು ಎಂದು ಖಡಾಖಂಡಿತವಾಗಿ ಹೇಳಿದೆ.  ಅಷ್ಟೇ ಅಲ್ಲ, ಅರ್ಜಿದಾರರು ಹೇಳುತ್ತಿರುವ ವಿಚಾರ ಪುಸ್ತಕದ ಒಂದು ಆಯ್ದ ಭಾಗಕ್ಕೆ ಮಾತ್ರ ಸೀಮಿತವಾಗಿದೆ. ಆದರೆ ಅದಕ್ಕಾಗಿ ಪ್ರಕಾಶಕರ ಪರವಾನಗಿಯನ್ನು ರದ್ದುಪಡಿಸಲಾಗದು. ನಮಗೆ ಇಡೀ ಪುಸ್ತಕವನ್ನೂ ಕೊಟ್ಟಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಇದನ್ನೂ ಓದಿ: IPL 2022: ಮೆಗಾ ಹರಾಜಿಗೂ ಮುನ್ನ ಮೂವರು ಆಟಗಾರರ ನೇರ ಆಯ್ಕೆ: ಏನಿದು ನಿಯಮ?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ