AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರಿಗೆ ತೊಂದರೆ ಕೊಡಬೇಡಿ, ನಾವು ಅವರಿಗೆ ಬೆಂಬಲ ನೀಡುತ್ತಿದ್ದೇವೆ: ಕೇಂದ್ರ ಸರ್ಕಾರಕ್ಕೆ ರಾಕೇಶ್ ಟಿಕಾಯತ್  ಎಚ್ಚರಿಕೆ

ಹಲವಾರು ರೈತ ಸಂಘಗಳಿವೆ ಮತ್ತು ಅವರಿಗೆ ಬೇರೆ ಬೇರೆ ಸಮಸ್ಯೆಗಳಿವೆ... ದೆಹಲಿಗೆ ಪಾದಯಾತ್ರೆ ಮಾಡುವ ರೈತರಿಗೆ ಸರ್ಕಾರ ಸಮಸ್ಯೆ ಸೃಷ್ಟಿಸಿದರೆ, ನಾವು ಅವರಿಂದ ದೂರವಿಲ್ಲ, ನಾವು ಅವರಿಗೆ ಬೆಂಬಲ ನೀಡುತ್ತೇವೆ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ. ಬಿಕೆಯು ದೇಶದ ದೊಡ್ಡ ರೈತ ಒಕ್ಕೂಟಗಳಲ್ಲಿ ಒಂದಾಗಿದೆ. ಮಂಗಳವಾರ ಪ್ರಾರಂಭವಾದ ಆಂದೋಲನದಲ್ಲಿ ಅದು ಸೇರಿಕೊಂಡರೆ, ಕೇಂದ್ರವು ಎದುರಿಸುತ್ತಿರುವ ಸಮಸ್ಯೆಯ ಪ್ರಮಾಣವು ಮತ್ತಷ್ಚು ಹೆಚ್ಚಾಗಲಿದೆ

ರೈತರಿಗೆ ತೊಂದರೆ ಕೊಡಬೇಡಿ, ನಾವು ಅವರಿಗೆ ಬೆಂಬಲ ನೀಡುತ್ತಿದ್ದೇವೆ: ಕೇಂದ್ರ ಸರ್ಕಾರಕ್ಕೆ ರಾಕೇಶ್ ಟಿಕಾಯತ್  ಎಚ್ಚರಿಕೆ
ರಾಕೇಶ್ ಟಿಕಾಯತ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 13, 2024 | 6:21 PM

Share

ದೆಹಲಿ ಫೆಬ್ರುವರಿ 13: ‘ದೆಹಲಿ ಚಲೋ‘ (Delhi Chalo)ಆಂದೋಲನ ವೇಳೆ ಮಂಗಳವಾರ ಪಂಜಾಬ್-ಹರ್ಯಾಣ ಗಡಿಯಲ್ಲಿರುವ ಶಂಭು ಎಂಬಲ್ಲಿ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದನ್ನು ರೈತ ನಾಯಕ ರಾಕೇಶ್ ಟಿಕಾಯತ್ (Rakesh Tikait) ಖಂಡಿಸಿದ್ದಾರೆ. 2020/21ರ ಸರ್ಕಾರದ ” ಕಪ್ಪು ಕೃಷಿ ಕಾನೂನು” (black farm laws) ವಿರುದ್ಧದ ಪ್ರತಿಭಟನೆಯಲ್ಲಿ ಪ್ರಮುಖ ವ್ಯಕ್ತಿಯಾಗಿದ್ದ ರಾಕೇಶ್ ಟಿಕಾಯತ್, ಇದು ರೈತರು ಮತ್ತು ಪೊಲೀಸ್ ಪಡೆಗಳ ನಡುವೆ ಘರ್ಷಣೆಯನ್ನು ಪ್ರಚೋದಿಸುತ್ತದೆ ಎಂದು ಹೇಳಿದ್ದಾರೆ. “ಹಲವಾರು ರೈತ ಸಂಘಗಳಿವೆ ಮತ್ತು ಅವರಿಗೆ ಬೇರೆ ಬೇರೆ ಸಮಸ್ಯೆಗಳಿವೆ… ದೆಹಲಿಗೆ ಪಾದಯಾತ್ರೆ ಮಾಡುವ ರೈತರಿಗೆ ಸರ್ಕಾರ ಸಮಸ್ಯೆ ಸೃಷ್ಟಿಸಿದರೆ, ನಾವು ಅವರಿಂದ ದೂರವಿಲ್ಲ, ನಾವು ಅವರಿಗೆ ಬೆಂಬಲ ನೀಡುತ್ತೇವೆ ಎಂದು ರೈತ ಮುಖಂಡ ಟಿಕಾಯತ್ ಹೇಳಿದ್ದಾರೆ.  ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರು ಸ್ಥಾಪಿಸಿದ ಉತ್ತರ ಪ್ರದೇಶ ಮೂಲದ ಸಂಸ್ಥೆಯಾದ ಭಾರತೀಯ ಕಿಸಾನ್ ಯೂನಿಯನ್‌ನ ಮುಖ್ಯಸ್ಥರಾಗಿದ್ದಾರೆ. ಈ ತಿಂಗಳು ಸಿಂಗ್ ಅವರಿಗೆ ಮರಣೋತ್ತರ ಭಾರತ ರತ್ನ ನೀಡಲಾಗಿದೆ.

ಬಿಕೆಯು ದೇಶದ ದೊಡ್ಡ ರೈತ ಒಕ್ಕೂಟಗಳಲ್ಲಿ ಒಂದಾಗಿದೆ. ಮಂಗಳವಾರ ಪ್ರಾರಂಭವಾದ ಆಂದೋಲನದಲ್ಲಿ ಅದು ಸೇರಿಕೊಂಡರೆ, ಕೇಂದ್ರವು ಎದುರಿಸುತ್ತಿರುವ ಸಮಸ್ಯೆಯ ಪ್ರಮಾಣವು ಮತ್ತಷ್ಚು ಹೆಚ್ಚಾಗಲಿದೆ. ಬಿಕೆಯು ರಾಷ್ಟ್ರೀಯ ಅಧ್ಯಕ್ಷರಾದ ಟಿಕಾಯತ್ ಅವರ ಸಹೋದರ ನರೇಶ್ ಟಿಕಾಯಿತ್ ಅವರು ರೈತರೊಂದಿಗೆ ಕುಳಿತು ಮಾತುಕತೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. “ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ… ಸರ್ಕಾರವು ಚರ್ಚೆಗಳನ್ನು ನಡೆಸಬೇಕು. ರೈತರಿಗೆ ಗೌರವವನ್ನು ನೀಡಬೇಕು … ಈ ಸಮಸ್ಯೆಯನ್ನು ಪರಿಹರಿಸಲು ಯೋಚಿಸಬೇಕು ಮತ್ತು ಪ್ರಯತ್ನಿಸಬೇಕು ಎಂದು ಅವರು ಹೇಳಿದ್ದಾರೆ.

ಕಳೆದ ತಿಂಗಳು ರಾಕೇಶ್ ಟಿಕಾಯತ್ ರೈತರ ಬೇಡಿಕೆಗಳಿಗೆ ಒತ್ತಾಯಿಸಿ ಫೆಬ್ರವರಿ 16 ರಂದು ಭಾರತ್ ಬಂದ್‌ಗೆ ಕರೆ ನೀಡಿದ್ದರು. ಕಳೆದ ವರ್ಷ ಜೂನ್‌ನಲ್ಲಿ, ಕನಿಷ್ಠ ಬೆಂಬಲ ಬೆಲೆಗಳ ಮೇಲೆ ಕಾನೂನು ಖಾತರಿಯ ಬೇಡಿಕೆಯನ್ನು ಪರಿಹರಿಸದಿದ್ದರೆ, ಈಗ ರದ್ದಾದ ಕೃಷಿ ಕಾನೂನುಗಳ ವಿರುದ್ಧದ ಹೋರಾಟಕ್ಕಿಂತ ದೊಡ್ಡ ಆಂದೋಲನ ಮಾಡುವುದಾಗಿ ಟಿಕಾಯತ್ ಬೆದರಿಕೆ ಹಾಕಿದ್ದರು.

ಎಂಎಸ್‌ಪಿಗಾಗಿ ದೆಹಲಿಯಲ್ಲಿನ ಆಂದೋಲನಕ್ಕಿಂತ ದೊಡ್ಡ ಆಂದೋಲನವನ್ನು (ಈಗ ರದ್ದುಪಡಿಸಿದ ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನ) ಕೈಗೊಳ್ಳಬೇಕಾಗುತ್ತದೆ ”ಎಂದು ಅವರು ಹರ್ಯಾಣದ ಕರ್ನಾಲ್‌ನಲ್ಲಿ ಮಾತನಾಡಿದ್ದ ಟಿಕಾಯತ್ ಹೇಳಿದ್ದರು.

ರೈತರ ‘ದೆಹಲಿ ಚಲೋ’ 2.0 ಇಂದು ಶಂಭು ಗಡಿ ಕ್ರಾಸಿಂಗ್‌ನಲ್ಲಿ ಆರಂಭವಾಗಿದ್ದು, ಮಧ್ಯಾಹ್ನದ ಹೊತ್ತಿಗೆ ರೈತರು ದೆಹಲಿಯತ್ತ ಬರುತ್ತಿದ್ದಂತೆ ಅಶ್ರುವಾಯು ಪ್ರಯೋಗ ನಡೆದಿದೆ. ಪ್ರತಿಭಟನಾ ನಿರತ ರೈತರ ಬೇಡಿಕೆಗಳಲ್ಲಿ ಪ್ರಮುಖವಾದದ್ದು, ಮಾರುಕಟ್ಟೆಯ ಅನಿಶ್ಚಿತತೆಯನ್ನು ಎದುರಿಸುತ್ತಿರುವ ರೈತರಿಗೆ ನಿರ್ಣಾಯಕ ಆರ್ಥಿಕ ಜೀವನಾಡಿಯಾಗಿರುವ ಬೆಳೆಗಳಿಗೆ ಎಂಎಸ್‌ಪಿ ಅಥವಾ ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವ ಕಾನೂನನ್ನು ಜಾರಿಗೊಳಿಸುವುದು. ನಾಲ್ಕು ವರ್ಷಗಳ ಹಿಂದೆ ನಡೆದ ಪ್ರತಿಭಟನೆಗಳಲ್ಲಿ ಎಂಎಸ್‌ಪಿಗೆ ಕಾನೂನು ಬೆಂಬಲವೂ ಸೇರಿತ್ತು.

ಇದನ್ನೂ ಓದಿ:6 ತಿಂಗಳ ಪಡಿತರ, ಟ್ರಾಲಿಗಳಲ್ಲಿ ಡೀಸೆಲ್: ದೀರ್ಘಕಾಲದ ಆಂದೋಲನಕ್ಕೆ ಸಜ್ಜಾಗಿ ಬಂದ ಪಂಜಾಬ್ ರೈತರು

ಇತರ ಪ್ರಮುಖ ಬೇಡಿಕೆಗಳೆಂದರೆ 2020 ರ ವಿದ್ಯುತ್ ಕಾಯಿದೆಯನ್ನು ರದ್ದುಗೊಳಿಸುವುದು, ಯುಪಿಯ ಲಖಿಂಪುರ ಖೇರಿಯಲ್ಲಿ ಸಾವನ್ನಪ್ಪಿದ ರೈತರಿಗೆ ಪರಿಹಾರ ಮತ್ತು ಕೊನೆಯ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವುದು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ