AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡ ಬಲವಂತದ ಲೈಂಗಿಕ ಕ್ರಿಯೆ ನಡೆಸಿದರೆ ಅದು ಕೂಡ ಅತ್ಯಾಚಾರವೇ: ಗುಜರಾತ್​​​​ ಹೈಕೋರ್ಟ್

ಗಂಡ ತನ್ನ ಹೆಂಡತಿಯನ್ನು ಬಲವಂತವಾಗಿ ಲೈಂಗಿಕ ಕ್ರಿಯೆಗೆ ಎಳೆದರೆ ಅದನ್ನು ಅತ್ಯಾಚಾರ ಎಂದು ಹೇಳಲಾಗುವುದು ಎಂದು ಗುಜರಾತ್​​​​ ಹೈಕೋರ್ಟ್​​​ ಹೇಳಿದೆ. ದೇಶದಲ್ಲಿ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಹೆಚ್ಚಾಗಿದೆ. ಇದನ್ನು ಬದಲಾವಣೆ ಮಾಡಬೇಕಿದೆ ಎಂದು ಗುಜರಾತ್​​​​ ಹೈಕೋರ್ಟ್​​​ನ ನ್ಯಾಯಮೂರ್ತಿ ದಿವ್ಯೇಶ್ ಜೋಶಿ ಹೇಳಿದ್ದಾರೆ. ಈ ಕಾರಣಕ್ಕೆ ವೈವಾಹಿಕ ಅತ್ಯಾಚಾರವನ್ನು ಕೂಡ ಅಪರಾಧ ಎಂದು ಪರಿಗಣಿಸಬೇಕಿದೆ ಎಂದು ಹೇಳಿದೆ.

ಗಂಡ ಬಲವಂತದ ಲೈಂಗಿಕ ಕ್ರಿಯೆ ನಡೆಸಿದರೆ ಅದು ಕೂಡ ಅತ್ಯಾಚಾರವೇ: ಗುಜರಾತ್​​​​ ಹೈಕೋರ್ಟ್
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Dec 19, 2023 | 3:06 PM

Share

ಗಾಂಧಿನಗರ, ಡಿ.19: ಅತ್ಯಾಚಾರ ಅತ್ಯಾಚಾರವೇ.. ಅದು ಯಾರು ಮಾಡಿದ್ರೂ ಅದನ್ನು ಅತ್ಯಾಚಾರ ಎಂದು ಪರಿಗಣಿಸಲಾಗುವುದು. ಗಂಡ ತನ್ನ ಹೆಂಡತಿಯನ್ನು ಬಲವಂತವಾಗಿ ಲೈಂಗಿಕ ಕ್ರಿಯೆಗೆ ಎಳೆದರೆ ಅದನ್ನು ಕೂಡ ಅತ್ಯಾಚಾರ ಎಂದು ಹೇಳಲಾಗುವುದು ಎಂದು ಗುಜರಾತ್​​​​ ಹೈಕೋರ್ಟ್​​​ ಹೇಳಿದೆ. ದೇಶದಲ್ಲಿ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಹೆಚ್ಚಾಗಿದೆ. ಇದನ್ನು ಬದಲಾವಣೆ ಮಾಡಬೇಕಿದೆ ಎಂದು ಗುಜರಾತ್​​​​ ಹೈಕೋರ್ಟ್​​​ನ ನ್ಯಾಯಮೂರ್ತಿ ದಿವ್ಯೇಶ್ ಜೋಶಿ ಹೇಳಿದ್ದಾರೆ. ಈ ಕಾರಣಕ್ಕೆ ವೈವಾಹಿಕ ಅತ್ಯಾಚಾರವನ್ನು ಕೂಡ ಅಪರಾಧ ಎಂದು ಪರಿಗಣಿಸಬೇಕಿದೆ ಎಂದು ಹೇಳಿದೆ. ಹೊರದೇಶಗಳಾದ ಅಮೇರಿಕ, ಆಸ್ಟ್ರೇಲಿಯ, ನ್ಯೂಜಿಲೆಂಡ್, ಕೆನಡಾ, ಇಸ್ರೇಲ್​ನಲ್ಲೂ ವೈವಾಹಿಕ ಅತ್ಯಾಚಾರವನ್ನು ಕಾನೂನುಬಾಹಿರ ಎಂದು ಹೇಳಿದೆ.

ಪತ್ನಿಯ ಮೇಲೆ ಪತಿ ಬಲವಂತದ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದರೆ ಅದು ಅಪರಾಧ ಎಂದು ಒಪ್ಪಿಕೊಳ್ಳುತ್ತಿರಲಿಲ್ಲ. ಆದರೆ ನಾನು ಇದನ್ನು ಅಪರಾಧ ಎಂದು ಒಪ್ಪಿಕೊಳ್ಳುವೆ ಎಂದು ಹೇಳಿದ್ದಾರೆ. ನ್ಯಾಯಮೂರ್ತಿ ದಿವ್ಯೇಶ್ ಜೋಶಿ ಅವರು ಹೇಳಿರುವಂತೆ ಭಾರತದಲ್ಲಿ ಮಹಿಳೆ ಮೇಲೆ ದೌರ್ಜನ್ಯ ಹೆಚ್ಚಾಗಿದೆ. ಇದು ಸಾಮಾಜಿಕ ನೆಲೆಯಲ್ಲಿ ಮಹಿಳೆಯನ್ನು ಬದಕಲು ಬಿಡುತ್ತಿಲ್ಲ ಎಂದು ಹೇಳಿದ್ದಾರೆ. ಮಹಿಳೆ ಮೇಲೆ ಮಾನಸಿಕವಾಗಿ ಅಥವಾ ದೈಹಿಕವಾಗಿ ಹಿಂಸೆ ನೀಡಿದರೆ ಅದು ದೊಡ್ಡ ಅಪರಾಧವಲ್ಲ ಎಂದು ಹೇಳುತ್ತೇವೆ. ಆದರೆ ಇದು ವಿಷಾದನೀಯ ಎಂದು ಹೇಳಿದ್ದಾರೆ.

ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಬಲವಂತದ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಇದರ ಜತೆಗೆ ಮಹಿಳೆಯ ಅತ್ತೆ ಕೂಡ ಇದಕ್ಕೆ ಸಾಥ್ ನೀಡಿದ್ದಾಳೆ ಎಂದು ದೂರು ದಾಖಲಿಸಲಾಗಿತ್ತು. ಇದನ್ನು ಗುಜರಾತ್​​​​ ಹೈಕೋರ್ಟ್​​​ ವಿಚಾರಣೆ ನಡೆಸುವ ವೇಳೆ ಈ ಅಂಶವನ್ನು ಹೇಳಿದೆ. ಮಹಿಳೆ  ದೂರಿನಲ್ಲಿ ತನ್ನ ಪತಿ ನನಗೆ ಲೈಂಗಿಕ ಕಿರುಕುಳ ಹಾಗೂ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿ, ನನ್ನ ನಗ್ನ ಫೋಟೋಗಳನ್ನು ಅಶ್ಲೀಲ ಸೈಟ್​​​ಗಳಿಗೆ ಅಪ್ಲೋಡ್​​​​​​ ಮಾಡಲು ಮುಂದಾಗಿದ್ದಾರೆ ಎಂದು ತಿಳಿಸಿದ್ದಾಳೆ. ಇದನ್ನು ವಿಚಾರಣೆ ನಡೆಸಿದ ಹೈಕೋರ್ಟ್​​​​​, ಇದು ಅತ್ಯಾಚಾರ ಎಂದು ಪರಿಗಣಿಸಿ ಗಂಡ ಮತ್ತು ಅತ್ತೆಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಪ್ರಕರಣ: ಮುಸ್ಲಿಂ ಕಡೆಯ 5 ಅರ್ಜಿಗಳನ್ನು ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಅವಕಾಶ ಇದೆ. ಇಲ್ಲಿ ಮದುವೆಯಿಂದ ಹಿಡಿದು ಪ್ರತಿಯೊಂದು ವಿಚಾರದಲ್ಲೂ ಸಮಾನತೆ ಇದೆ. ಸಾಂಸ್ಕೃತಿಕ ಮತ್ತು ಸಾಮಾಜಿಕ ನಿಯಮಗಳು, ಆರ್ಥಿಕ ಅವಲಂಬನೆ, ಬಡತನ ಮತ್ತು ಮದ್ಯಪಾನ ಇನ್ನಿತರ ಸಂಕಷ್ಟಕ್ಕೆ ಸಿಲುಕಿ ಮಹಿಳೆ ನರಳಾಡುತ್ತಿದ್ದಾಳೆ. ಹಾಗಾಗಿ ಲಿಂಗ ಹಿಂಸೆಯ ಕುರಿತು ‘ಮೌನ’ ಮುರಿಯುವ ಅಗತ್ಯವಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ