AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ-ಕೊವಿಡ್​ 19 ಸ್ಪೆಲ್ಲಿಂಗ್ ಬದಲಿಸಿದರೆ ಸೋಂಕು ನಿರ್ಮೂಲನ ಖಚಿತ; ವೈರಲ್ ಆಗುತ್ತಿದೆ ಸಂಖ್ಯಾಶಾಸ್ತ್ರಜ್ಞನ ಜಾಹೀರಾತು

ಎಸ್​.ವಿ.ಆನಂದ್​ರಾವ್ ಜಾಹೀರಾತಿನ ಕೊನೆಯಲ್ಲಿ ತಮ್ಮ ಫೋನ್​ ನಂಬರ್​ ಕೂಡ ನಮೂದಿಸಿದ್ದು, ಆರೋಗ್ಯ, ಸಂಪತ್ತು, ಮದುವೆ ಸೇರಿ ಯಾವುದೇ ಸಮಸ್ಯೆಯಿದ್ದರೂ ಕರೆ ಮಾಡಬಹುದು ಎಂದೂ ಹೇಳಿಕೊಂಡಿದ್ದಾರೆ.

ಕೊರೊನಾ-ಕೊವಿಡ್​ 19 ಸ್ಪೆಲ್ಲಿಂಗ್ ಬದಲಿಸಿದರೆ ಸೋಂಕು ನಿರ್ಮೂಲನ ಖಚಿತ; ವೈರಲ್ ಆಗುತ್ತಿದೆ ಸಂಖ್ಯಾಶಾಸ್ತ್ರಜ್ಞನ ಜಾಹೀರಾತು
ಜಾಹೀರಾತಿನ ಬ್ಯಾನರ್​
Lakshmi Hegde
|

Updated on: May 09, 2021 | 12:07 PM

Share

ಎಂತೆಂಥಾ ಪ್ರಯತ್ನಗಳನ್ನು ಮಾಡಿದರೂ ಕೊರೊನಾ ನಿರ್ಮೂಲನ ಆಗುತ್ತಿಲ್ಲ. ನಿರ್ಮೂಲನ ಬಿಡಿ.. ನಿಯಂತ್ರಣವೂ ದೊಡ್ಡ ಕಷ್ಟವಾಗಿದೆ. ಔಷಧಿ, ಲಸಿಕೆ, ಕರ್ಫ್ಯೂ, ಲಾಕ್​ಡೌನ್​ ಏನೇ ಇದ್ದರೂ, ಏನೆಲ್ಲ ಪ್ರಯತ್ನ ಮಾಡಿದರೂ ಸೋಂಕಿತರ ಸಂಖ್ಯೆ ಸತತವಾಗಿ ಏರಿಕೆಯಾಗುತ್ತಿದೆ. ಹೀಗಿರುವಾಗ ವ್ಯಕ್ತಿಯೊಬ್ಬ ಒಂದು ಬ್ಯಾನರ್​​ನಲ್ಲಿ ವಿಚಿತ್ರವಾದ ಸಂದೇಶ ಕೊಟ್ಟಿದ್ದಾರೆ. ಈ ಬ್ಯಾನರ್​ನ ಚಿತ್ರವೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿದೆ. ಇದೊಂದು ಜಾಹೀರಾತು ಆಗಿದ್ದು, ಎಲ್ಲರೂ ಅನುಸರಿಸುವಂತೆ ಸಲಹೆ ನೀಡಿದ್ದಾರೆ. ಇದರಲ್ಲಿ ನೀವು Corona ಮತ್ತು Covid 19 ಶಬ್ದದ ಸ್ಪೆಲ್ಲಿಂಗ್ ಬೇರೆ ಇರುವುದನ್ನು ಗಮನಿಸಬಹುದು.

ಈ ವ್ಯಕ್ತಿ ಹೇಳಲು ಹೊರಟಿದ್ದೂ ಅದನ್ನೇ ಆಗಿದೆ. ನೀವು Corona ಎಂದು ಬರೆಯುವ ಬದಲು CARONAA ಎಂದೂ, Covid 19 ಎಂದು ಬರೆಯುವ ಬದಲು COVVIYD-19 ಎಂದು ಒಂದು ಬ್ಯಾನರ್​​ ಮೇಲೆ ಬರೆಸಿ ಸಾರ್ವಜನಿಕ ಸ್ಥಳದಲ್ಲಿ ಕಟ್ಟಿ. ಅಥವಾ ಮನೆ ಬಾಗಿಲು ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಕೂಡ ಹೀಗೆ ಸ್ಪೆಲ್ಲಿಂಗ್​ (ಕಾಗುಣಿತ) ಬರೆಯಿರಿ. ನೋಡುತ್ತಿರಿ ವಿಶ್ವದಿಂದಲೇ ಕೊರೊನಾ ಮಾಯವಾಗುತ್ತದೆ ಎಂದು ಬರೆದಿದ್ದಾರೆ. ಇದು ಖಂಡಿತವಾಗಿಯೂ ಸತ್ಯ..ಸಂಖ್ಯಾಶಾಸ್ತ್ರಕ್ಕೆ ಅಷ್ಟು ಬಲವಿದೆ ಎಂದು ಹೇಳಿದ್ದಾರೆ.

ಈ ಜಾಹೀರಾತು ರಚಿಸಿದವರು ಸ್ಟೆನೋಗ್ರಾಫರ್​ ಎಸ್​.ವಿ.ಆನಂದ್​ರಾವ್. ಸಂಖ್ಯಾಶಾಸ್ತ್ರದಲ್ಲಿ ಸಿಕ್ಕಾಪಟೆ ನಂಬಿಕೆ ಹೊಂದಿರುವ ಇವರು, ತಮ್ಮ ಹೆಸರಿಗೆ ಹೆಚ್ಚುವರಿಯಾಗಿ ಎನ್​ಎಸ್​ ಮತ್ತು ಡಿಎಸ್​ ಸೇರಿಸಿಕೊಂಡಿದ್ದಾರೆ.   ಮೂಲತಃ ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆಯವರು ಎಂಬುದು ಅವರು ಹಾಕಿದ ಜಾಹೀರಾತಿನಿಂದ ಗೊತ್ತಾಗುತ್ತದೆ. ಜಾಹೀರಾತಿನ ಕೊನೆಯಲ್ಲಿ ತಮ್ಮ ಫೋನ್​ ನಂಬರ್​ ಕೂಡ ನಮೂದಿಸಿದ್ದು, ಆರೋಗ್ಯ, ಸಂಪತ್ತು, ಮದುವೆ ಸೇರಿ ಯಾವುದೇ ಸಮಸ್ಯೆಯಿದ್ದರೂ ಕರೆ ಮಾಡಬಹುದು ಎಂದೂ ಹೇಳಿಕೊಂಡಿದ್ದಾರೆ.

ಇವರು ಟ್ವೀಟ್ ಮಾಡಿರುವ ಬ್ಯಾನರ್​ ಚಿತ್ರ ಸಿಕ್ಕಾಪಟೆ ವೈರಲ್ ಆಗಿದೆ. ಹಾಗೇ ಕಾಮೆಂಟ್​ಗಳನ್ನೂ ಮಾಡಿದ್ದಾರೆ. ನಾವು ಕೊರೊನಾ, ಕೊವಿಡ್​ 19 ಶಬ್ದಗಳ ಕಾಗುಣಿತ ಬದಲಿಸುವ ಬದಲು ದೇಶದ ಎಲ್ಲ ರಾಜಕಾರಣಿಗಳ ಹೆಸರಿನ ಸ್ಪೆಲ್ಲಿಂಗ್ ಬದಲಿಸೋಣ. ಇದು ದೇಶಕ್ಕೆ ಅದೃಷ್ಟವನ್ನು ಹೊತ್ತು ತರುತ್ತದೆ ಎಂದು ಒಬ್ಬರು ಕಾಮೆಂಟ್​ ಮಾಡಿದ್ದರೆ, ಇನ್ನೊಬ್ಬರು, ಕೊರೊನಾ ವಿಶ್ವದಿಂದ ನಿರ್ಮೂಲನ ಆಗುತ್ತದೆ ಎಂದರೆ ಏನು ಬೇಕಾದರೂ ಮಾಡಲು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಾವೇರಿಯಲ್ಲಿ ಹೆತ್ತವ್ವಳ ನೆನಪಿಗೊಂದು ದೇವಾಲಯ; ತಾಯಿಯ ಮೂರ್ತಿ ಇಟ್ಟು ಪೂಜೆ ಸಲ್ಲಿಸುತ್ತಿರುವ ಮಕ್ಕಳು

ಚಿಕಿತ್ಸೆ ಫಲಿಸದೇ ತುಮಕೂರು ವಾರ್ತಾ ಇಲಾಖೆ ಉಪನಿರ್ದೇಶಕ ಮಂಜುನಾಥ್​ ಕೊರೊನಾ ಸೋಂಕಿಗೆ ಬಲಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ