AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ-ಕೊವಿಡ್​ 19 ಸ್ಪೆಲ್ಲಿಂಗ್ ಬದಲಿಸಿದರೆ ಸೋಂಕು ನಿರ್ಮೂಲನ ಖಚಿತ; ವೈರಲ್ ಆಗುತ್ತಿದೆ ಸಂಖ್ಯಾಶಾಸ್ತ್ರಜ್ಞನ ಜಾಹೀರಾತು

ಎಸ್​.ವಿ.ಆನಂದ್​ರಾವ್ ಜಾಹೀರಾತಿನ ಕೊನೆಯಲ್ಲಿ ತಮ್ಮ ಫೋನ್​ ನಂಬರ್​ ಕೂಡ ನಮೂದಿಸಿದ್ದು, ಆರೋಗ್ಯ, ಸಂಪತ್ತು, ಮದುವೆ ಸೇರಿ ಯಾವುದೇ ಸಮಸ್ಯೆಯಿದ್ದರೂ ಕರೆ ಮಾಡಬಹುದು ಎಂದೂ ಹೇಳಿಕೊಂಡಿದ್ದಾರೆ.

ಕೊರೊನಾ-ಕೊವಿಡ್​ 19 ಸ್ಪೆಲ್ಲಿಂಗ್ ಬದಲಿಸಿದರೆ ಸೋಂಕು ನಿರ್ಮೂಲನ ಖಚಿತ; ವೈರಲ್ ಆಗುತ್ತಿದೆ ಸಂಖ್ಯಾಶಾಸ್ತ್ರಜ್ಞನ ಜಾಹೀರಾತು
ಜಾಹೀರಾತಿನ ಬ್ಯಾನರ್​
Lakshmi Hegde
|

Updated on: May 09, 2021 | 12:07 PM

Share

ಎಂತೆಂಥಾ ಪ್ರಯತ್ನಗಳನ್ನು ಮಾಡಿದರೂ ಕೊರೊನಾ ನಿರ್ಮೂಲನ ಆಗುತ್ತಿಲ್ಲ. ನಿರ್ಮೂಲನ ಬಿಡಿ.. ನಿಯಂತ್ರಣವೂ ದೊಡ್ಡ ಕಷ್ಟವಾಗಿದೆ. ಔಷಧಿ, ಲಸಿಕೆ, ಕರ್ಫ್ಯೂ, ಲಾಕ್​ಡೌನ್​ ಏನೇ ಇದ್ದರೂ, ಏನೆಲ್ಲ ಪ್ರಯತ್ನ ಮಾಡಿದರೂ ಸೋಂಕಿತರ ಸಂಖ್ಯೆ ಸತತವಾಗಿ ಏರಿಕೆಯಾಗುತ್ತಿದೆ. ಹೀಗಿರುವಾಗ ವ್ಯಕ್ತಿಯೊಬ್ಬ ಒಂದು ಬ್ಯಾನರ್​​ನಲ್ಲಿ ವಿಚಿತ್ರವಾದ ಸಂದೇಶ ಕೊಟ್ಟಿದ್ದಾರೆ. ಈ ಬ್ಯಾನರ್​ನ ಚಿತ್ರವೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿದೆ. ಇದೊಂದು ಜಾಹೀರಾತು ಆಗಿದ್ದು, ಎಲ್ಲರೂ ಅನುಸರಿಸುವಂತೆ ಸಲಹೆ ನೀಡಿದ್ದಾರೆ. ಇದರಲ್ಲಿ ನೀವು Corona ಮತ್ತು Covid 19 ಶಬ್ದದ ಸ್ಪೆಲ್ಲಿಂಗ್ ಬೇರೆ ಇರುವುದನ್ನು ಗಮನಿಸಬಹುದು.

ಈ ವ್ಯಕ್ತಿ ಹೇಳಲು ಹೊರಟಿದ್ದೂ ಅದನ್ನೇ ಆಗಿದೆ. ನೀವು Corona ಎಂದು ಬರೆಯುವ ಬದಲು CARONAA ಎಂದೂ, Covid 19 ಎಂದು ಬರೆಯುವ ಬದಲು COVVIYD-19 ಎಂದು ಒಂದು ಬ್ಯಾನರ್​​ ಮೇಲೆ ಬರೆಸಿ ಸಾರ್ವಜನಿಕ ಸ್ಥಳದಲ್ಲಿ ಕಟ್ಟಿ. ಅಥವಾ ಮನೆ ಬಾಗಿಲು ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಕೂಡ ಹೀಗೆ ಸ್ಪೆಲ್ಲಿಂಗ್​ (ಕಾಗುಣಿತ) ಬರೆಯಿರಿ. ನೋಡುತ್ತಿರಿ ವಿಶ್ವದಿಂದಲೇ ಕೊರೊನಾ ಮಾಯವಾಗುತ್ತದೆ ಎಂದು ಬರೆದಿದ್ದಾರೆ. ಇದು ಖಂಡಿತವಾಗಿಯೂ ಸತ್ಯ..ಸಂಖ್ಯಾಶಾಸ್ತ್ರಕ್ಕೆ ಅಷ್ಟು ಬಲವಿದೆ ಎಂದು ಹೇಳಿದ್ದಾರೆ.

ಈ ಜಾಹೀರಾತು ರಚಿಸಿದವರು ಸ್ಟೆನೋಗ್ರಾಫರ್​ ಎಸ್​.ವಿ.ಆನಂದ್​ರಾವ್. ಸಂಖ್ಯಾಶಾಸ್ತ್ರದಲ್ಲಿ ಸಿಕ್ಕಾಪಟೆ ನಂಬಿಕೆ ಹೊಂದಿರುವ ಇವರು, ತಮ್ಮ ಹೆಸರಿಗೆ ಹೆಚ್ಚುವರಿಯಾಗಿ ಎನ್​ಎಸ್​ ಮತ್ತು ಡಿಎಸ್​ ಸೇರಿಸಿಕೊಂಡಿದ್ದಾರೆ.   ಮೂಲತಃ ಆಂಧ್ರಪ್ರದೇಶದ ಅನಂತಪುರಂ ಜಿಲ್ಲೆಯವರು ಎಂಬುದು ಅವರು ಹಾಕಿದ ಜಾಹೀರಾತಿನಿಂದ ಗೊತ್ತಾಗುತ್ತದೆ. ಜಾಹೀರಾತಿನ ಕೊನೆಯಲ್ಲಿ ತಮ್ಮ ಫೋನ್​ ನಂಬರ್​ ಕೂಡ ನಮೂದಿಸಿದ್ದು, ಆರೋಗ್ಯ, ಸಂಪತ್ತು, ಮದುವೆ ಸೇರಿ ಯಾವುದೇ ಸಮಸ್ಯೆಯಿದ್ದರೂ ಕರೆ ಮಾಡಬಹುದು ಎಂದೂ ಹೇಳಿಕೊಂಡಿದ್ದಾರೆ.

ಇವರು ಟ್ವೀಟ್ ಮಾಡಿರುವ ಬ್ಯಾನರ್​ ಚಿತ್ರ ಸಿಕ್ಕಾಪಟೆ ವೈರಲ್ ಆಗಿದೆ. ಹಾಗೇ ಕಾಮೆಂಟ್​ಗಳನ್ನೂ ಮಾಡಿದ್ದಾರೆ. ನಾವು ಕೊರೊನಾ, ಕೊವಿಡ್​ 19 ಶಬ್ದಗಳ ಕಾಗುಣಿತ ಬದಲಿಸುವ ಬದಲು ದೇಶದ ಎಲ್ಲ ರಾಜಕಾರಣಿಗಳ ಹೆಸರಿನ ಸ್ಪೆಲ್ಲಿಂಗ್ ಬದಲಿಸೋಣ. ಇದು ದೇಶಕ್ಕೆ ಅದೃಷ್ಟವನ್ನು ಹೊತ್ತು ತರುತ್ತದೆ ಎಂದು ಒಬ್ಬರು ಕಾಮೆಂಟ್​ ಮಾಡಿದ್ದರೆ, ಇನ್ನೊಬ್ಬರು, ಕೊರೊನಾ ವಿಶ್ವದಿಂದ ನಿರ್ಮೂಲನ ಆಗುತ್ತದೆ ಎಂದರೆ ಏನು ಬೇಕಾದರೂ ಮಾಡಲು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಾವೇರಿಯಲ್ಲಿ ಹೆತ್ತವ್ವಳ ನೆನಪಿಗೊಂದು ದೇವಾಲಯ; ತಾಯಿಯ ಮೂರ್ತಿ ಇಟ್ಟು ಪೂಜೆ ಸಲ್ಲಿಸುತ್ತಿರುವ ಮಕ್ಕಳು

ಚಿಕಿತ್ಸೆ ಫಲಿಸದೇ ತುಮಕೂರು ವಾರ್ತಾ ಇಲಾಖೆ ಉಪನಿರ್ದೇಶಕ ಮಂಜುನಾಥ್​ ಕೊರೊನಾ ಸೋಂಕಿಗೆ ಬಲಿ

Follow Us
Lakshmi Hegde
Lakshmi Hegde
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ