AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priyanka Gandhi: ಕಾಂಗ್ರೆಸ್​ಗೆ ಅಧಿಕಾರ ಕೊಡಿ, ಕೃಷಿ ಕಾಯ್ದೆ ರದ್ದು ಮಾಡುತ್ತೇವೆ- ಪ್ರಿಯಾಂಕಾ ಗಾಂಧಿ

ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲು ಇನ್ನೂ ಒಂದು ವರ್ಷ ಬಾಕಿ ಇದೆ. ಹೀಗಿರುವಾಗಲೇ, ರಾಜ್ಯದಲ್ಲಿ​ ರೈತರ ಜತೆ ಕಾಂಗ್ರೆಸ್ ಸಭೆಗಳನ್ನು ನಡೆಸುತ್ತಿದೆ.

Priyanka Gandhi: ಕಾಂಗ್ರೆಸ್​ಗೆ ಅಧಿಕಾರ ಕೊಡಿ, ಕೃಷಿ ಕಾಯ್ದೆ ರದ್ದು ಮಾಡುತ್ತೇವೆ- ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ
ರಾಜೇಶ್ ದುಗ್ಗುಮನೆ
| Edited By: |

Updated on: Feb 10, 2021 | 8:26 PM

Share

ನವದೆಹಲಿ: ಕಾಂಗ್ರೆಸ್​ಗೆ ಅಧಿಕಾರ ಕೊಡಿ, ನಾವು ಕೃಷಿ ಕಾಯ್ದೆಯನ್ನು ರದ್ದು ಮಾಡುತ್ತೇವೆ ಎಂದು ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶದಲ್ಲಿ ಗುಡುಗಿದ್ದಾರೆ. ಈ ಮೂಲಕ ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್​ ಇದೇ ವಿಚಾರವನ್ನು ಅಸ್ತ್ರವಾಗಿ ಬಳಕೆ ಮಾಡಿಕೊಳ್ಳುವ ಸೂಚನೆ ನೀಡಿದ್ದಾರೆ.

ಉತ್ತರ ಪ್ರದೇಶದ ಸಹರಾನ್​ಪುರದಲ್ಲಿ ಕಿಸಾನ್​ ಪಂಚಾಯತ್​ ಕಾರ್ಯಕ್ರಮದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ, ಬಿಜೆಪಿ ವಿರುದ್ಧ ಹರಿಹಾಯ್ದರು. ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಮೂರು ಕೃಷಿ ಕಾಯ್ದೆಗಳು ಅಪಾಯ ತಂದೊಡ್ಡುವಂತಹದು. ನಮಗೆ ಅಧಿಕಾರ ನೀಡಿದರೆ, ಈ ಮೂರು ಕಾಯ್ದೆಗಳನ್ನು ರದ್ದು ಮಾಡುತ್ತೇವೆ. ಈ ಕಾಯ್ದೆ ರದ್ದಾಗುವವರೆಗೂ ನಮ್ಮ ಹೋರಾಟ ನಡೆಯಲಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಕಾನೂನಿನಿಂದ ಕನಿಷ್ಠ ಬೆಂಬಲ ಬೆಲೆ ಎನ್ನುವ ಆಯ್ಕೆ ರೈತರಿಂದ ಕೈತಪ್ಪಲಿದೆ. ಇದರಿಂದ ರೈತರ ಧ್ವನಿ ಕುಗ್ಗಿ ಹೋಗಿ, ಕೋಟ್ಯಾಧಿಪತಿಗಳ ಧ್ವನಿ ಏರಲಿದೆ ಎಂದು ಅವರು ಆರೋಪಿಸಿದರು.

ಸಹರಾನ್​ಪುರದಲ್ಲಿ ಪ್ರಿಯಾಂಕಾ ಬರುವುದಕ್ಕೂ ಮೊದಲೇ ಕೊರೊನಾ ಕಾರಣ ನೀಡಿ ಹೆಚ್ಚು ಜನ ಸೇರುವುದರ ಮೇಲೆ ನಿಷೇಧ ಹೇರಲಾಗಿತ್ತು. ಇದು ಕಾಂಗ್ರೆಸ್​ ಆಕ್ರೋಶಕ್ಕೆ ಕಾರಣವಾಗಿತ್ತು. ಕಾಂಗ್ರೆಸ್ ವಿರುದ್ಧ ಬಿಜೆಪಿ ಹೀನಾಯ ತಂತ್ರಗಳನ್ನು ಉಪಯೋಗಿಸುತ್ತಿದೆ ಎಂದು ಆರೋಪಿಸಿದರು.

ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲು ಇನ್ನೂ ಒಂದು ವರ್ಷ ಬಾಕಿ ಇದೆ. ಹೀಗಿರುವಾಗಲೇ, ರಾಜ್ಯದಲ್ಲಿ​ ರೈತರ ಜತೆ ಕಾಂಗ್ರೆಸ್ ಸಭೆಗಳನ್ನು ನಡೆಸುತ್ತಿದೆ. ಈ ಮೂಲಕ ಬಿಜೆಪಿಯನ್ನು ಸೋಲಿಸಲು ಈಗಿನಿಂದಲೇ ತಂತ್ರ ರೂಪಿಸುತ್ತಿದೆ.

ಇದನ್ನೂ ಓದಿ: ಬೆಂಬಲಿಸಿ ರಾಷ್ಟ್ರಪತಿ ಭೇಟಿಗೆ ತೆರಳಿದ ನಿಯೋಗ; ಪ್ರಿಯಾಂಕಾ ಗಾಂಧಿ ವಶಕ್ಕೆ ಪಡೆದು, ಬಿಡುಗಡೆ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!