AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ತಲೆಗೆ ಗುಂಡು ಹಾರಿಸಬೇಕು: ಆರ್​ಜೆಡಿ ನಾಯಕನ ವಿವಾದಾತ್ಮಕ ಹೇಳಿಕೆ

ಪ್ರಧಾನಿ ಮೋದಿ ತಲೆಗೆ ಗುಂಡು ಹಾರಿಸಿದರೆ ತಪ್ಪೇನು ಎಂದು ಆರ್​ಜೆಡಿ ನಾಯಕ ಅವಧೇಶ್​ ಸಿಂಗ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಇಂಡಿಯಾ ಬ್ಲಾಕ್​ ಸಭೆಯಲ್ಲಿ ಪ್ರಧಾನಿ ಮೋದಿಗೆ ಗುಂಡು ಹಾರಿಸುವ ಕುರಿತು ಅವರು ಮಾತಣಾಡಿದ್ದು, ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ನೀಡಿ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.

ಮೋದಿ ತಲೆಗೆ ಗುಂಡು ಹಾರಿಸಬೇಕು: ಆರ್​ಜೆಡಿ ನಾಯಕನ ವಿವಾದಾತ್ಮಕ ಹೇಳಿಕೆ
ನಯನಾ ರಾಜೀವ್
|

Updated on: Mar 20, 2024 | 10:58 AM

Share

ಪ್ರಧಾನಿ ನರೇಂದ್ರ ಮೋದಿ(Narendra Modi) ವಿರುದ್ಧ ಆರ್​ಜೆಡಿ ನಾಯಕ ಅವಧೇಶ್​ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪ್ರಧಾನಿ ಮೋದಿ ತಲೆಗೆ ಗುಂಡು ಹಾರಿಸುವ ಬಗ್ಗೆ ಅವರು ಮಾತನಾಡಿದ್ದಾರೆ. ಮೋದಿ ತಲೆಗೆ ಗುಂಡು ಹಾರಿಸಿದರೆ ತಪ್ಪೇನು ಎಂದು ಪ್ರಶ್ನಿಸಿರುವ ವಿಡಿಯೋದ ತುಣುಕು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಿಜೆಪಿಯು ಈ ಐದು ಸೆಕೆಂಡುಗಳ ವಿಡಿಯೋ ತುಣುಕನ್ನು ಹಂಚಿಕೊಂಡಿದ್ದು, ಜಾರ್ಖಂಡ್​ ಡಿಜಿಪಿ ಹಾಗೂ ಚುನಾವಣಾ ಆಯೋಗಕ್ಕೆ ದೂರು ನೀಡಿ ಕ್ರಮಕ್ಕೆ ಆಗ್ರಹಿಸಿದೆ.

‘‘ತಮ್ಮ ಸೋಲು ಹತ್ತಿರವಾಗುತ್ತಿರುವುದನ್ನು ನೋಡಿ, ಎಲ್ಲಾ ಪಕ್ಷಗಳು ಮತ್ತು ಅವರ ನಾಯಕರು ತಮ್ಮ ಮಾನಸಿಕ ಸಮತೋಲನವನ್ನು ಕಳೆದುಕೊಂಡಿದ್ದಾರೆ’’ ಎಂದು ಬಾಬುಲಾಲ್​ ಮರಾಂಡಿ ಬರೆದಿದ್ದಾರೆ.

ಇಂಡಿಯಾ ಮೈತ್ರಿಕೂಟದ ಯಾವುದೇ ಪಿತೂರಿ ಪ್ರಧಾನಿ ಮೋದಿಯವರ ಮೇಲೆ ಪರಿಣಾಮ ಬೀರುವುದಿಲ್ಲ ಏಕೆಂದರೆ ಅವರ 140ಕೋಟಿ ಜನರ ಕುಟುಂಬವು ಅವರ ಬೆಂಬಲಕ್ಕೆ ನಿಂತಿದೆ ಎಂದು ಹೇಳಿದ್ದಾರೆ. ಈ 5 ಸೆಕೆಂಡ್ ವೀಡಿಯೋದಲ್ಲಿ ಸಭೆ ನಡೆಯುತ್ತಿರುವುದನ್ನು ಕಾಣಬಹುದು, ಇದು ಇಂಡಿಯಾ ಬ್ಲಾಕ್ ನಾಯಕರ ಸಭೆ ಎಂದು ಬಿಜೆಪಿ ಹೇಳಿದೆ.

ಅವಧೇಶ್​ ವಿಡಿಯೋ ತುಣುಕು

ಅದೊಂದೇ ವಾಕ್ಯ ವಿಡಿಯೋದಲ್ಲಿದೆ ಅದನ್ನು ಹೊರತುಪಡಿಸಿ ಅವರ ಮಾತಿನ ಹಿಂದಿನ ಅಥವಾ ಮುಂದಿನ ವಾಕ್ಯವನ್ನು ಹಂಚಿಕೊಳ್ಳಲಾಗಿಲ್ಲ.

ಮತ್ತಷ್ಟು ಓದಿ: ಡಿಎಂಕೆ, ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ ಮತ್ತು ಕುಟುಂಬ ಆಡಳಿತ: ತಮಿಳುನಾಡಿನಲ್ಲಿ ಪ್ರಧಾನಿ ಮೋದಿ

ಏತನ್ಮಧ್ಯೆ, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸೋಮವಾರ ಚುನಾವಣಾ ನಿರ್ಣಾಯಕ ರಾಜ್ಯವಾದ ಬಿಹಾರದಲ್ಲಿ ಐದು ಪಕ್ಷಗಳ ಒಕ್ಕೂಟದ ಸೀಟು ಹಂಚಿಕೆ ವ್ಯವಸ್ಥೆಯನ್ನು ಘೋಷಿಸಿತು, ಅದರ 40 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) 2019 ರಂತೆಯೇ 17 ಸ್ಥಾನಗಳಲ್ಲಿ ಹೋರಾಡುತ್ತದೆ ಮತ್ತು ಅದರ ಪ್ರಮುಖ ಮಿತ್ರ ಪಕ್ಷವಾದ ಜನತಾ ದಳ (ಯುನೈಟೆಡ್) 16 ರಲ್ಲಿ ಹೋರಾಡುತ್ತದೆ, 2019 ಕ್ಕಿಂತ ಒಂದು ಕಡಿಮೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ