AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಮ್ಮೆ ಯೋಗಿ ಸರ್ಕಾರ ಆಡಳಿತಕ್ಕೆ ಬಂದರೆ, ಅಸಾದುದ್ದೀನ್​ ಓವೈಸಿ ಜನಿವಾರ ಧರಿಸಿ, ರಾಮಜಪ ಮಾಡುತ್ತಾರೆ: ಉತ್ತರಪ್ರದೇಶ ಸಚಿವ

ಭೂಪೇಂದ್ರ ಸಿಂಗ್ ಚೌಧರಿ ಅವರು ಮೂಲತಃ ಮೊರಾದಾಬಾದ್​ನವರಾಗಿದ್ದು, ರಾಜ್ಯ ವಿಧಾನಪರಿಷತ್​ ಸದಸ್ಯರಾಗಿದ್ದಾರೆ. ಶಮ್ಲಿಯಲ್ಲಿ  ನಡೆದ ಯುವಜನರ ಸಮಾವೇಶದಲ್ಲಿ ಈ ಮಾತುಗಳನ್ನಾಡಿದ್ದಾರೆ.

ಮತ್ತೊಮ್ಮೆ ಯೋಗಿ ಸರ್ಕಾರ ಆಡಳಿತಕ್ಕೆ ಬಂದರೆ, ಅಸಾದುದ್ದೀನ್​ ಓವೈಸಿ ಜನಿವಾರ ಧರಿಸಿ, ರಾಮಜಪ ಮಾಡುತ್ತಾರೆ: ಉತ್ತರಪ್ರದೇಶ ಸಚಿವ
ಅಸಾದುದ್ದೀನ್ ಒವೈಸಿ
TV9 Web
| Edited By: |

Updated on: Dec 27, 2021 | 9:04 AM

Share

ಉತ್ತರ ಪ್ರದೇಶದಲ್ಲೇನಾದರೂ ಮುಂದಿನ ಅವಧಿಗೆ ಕೂಡ ಯೋಗಿ ಆದಿತ್ಯನಾಥ್​ ಸರ್ಕಾರ ಅಧಿಕಾರಕ್ಕೆ ಬಂದರೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್​ ಓವೈಸಿ ಜನಿವಾರ (ಹಿಂದುಗಳಲ್ಲಿ ಬ್ರಾಹ್ಮಣರು ಸೇರಿ ಕೆಲವೇ ಸಮುದಾಯದವರು ಧರಿಸುವ ಯಜ್ಞೋಪವೀತ) ಧರಿಸಲು ಶುರು ಮಾಡುತ್ತಾರೆ. ಅಷ್ಟೇ ಅಲ್ಲ, ಶ್ರೀರಾಮನಾಮ ಜಪವನ್ನೂ ಭಜಿಸಲು ಪ್ರಾರಂಭ ಮಾಡುತ್ತಾರೆ ಎಂದು ಉತ್ತರ ಪ್ರದೇಶದ ಪಂಚಾಯಿತಿ ರಾಜ್​ ಸಚಿವ ಭೂಪೇಂದ್ರ ಸಿಂಗ್​ ಚೌಧರಿ ಹೇಳಿದ್ದಾರೆ.  ಹಾಗೇ, ರಾಹುಲ್ ಗಾಂಧಿ ಜನಿವಾರ ಧರಿಸಿದ್ದು, ಅಖಿಲೇಶ್​ ಯಾದವ್ ಹನುಮಾನ್​ ದೇಗುಲಕ್ಕೆ ಭೇಟಿ ಕೊಟ್ಟ ಘಟನೆಗಳ ಸಾಲಿಗೇ, ಈ ಓವೈಸಿ ಜನಿವಾರ ಧರಿಸಿ, ರಾಮನಾಮ ಜಪಿಸುವುದೂ ಸೇರಲಿದೆ ಎಂದು ವ್ಯಂಗ್ಯವಾಡಿದ್ದಾರೆ.  

ಭೂಪೇಂದ್ರ ಸಿಂಗ್ ಚೌಧರಿ ಅವರು ಮೂಲತಃ ಮೊರಾದಾಬಾದ್​ನವರಾಗಿದ್ದು, ರಾಜ್ಯ ವಿಧಾನಪರಿಷತ್​ ಸದಸ್ಯರಾಗಿದ್ದಾರೆ. ಶಮ್ಲಿಯಲ್ಲಿ  ನಡೆದ ಯುವಜನರ ಸಮಾವೇಶದಲ್ಲಿ ಈ ಮಾತುಗಳನ್ನಾಡಿದ್ದಾರೆ.  ಅಷ್ಟೇ ಅಲ್ಲ, ಪಿಟಿಐ ಜತೆ ಮಾತನಾಡುವಾಗಲೂ ಇದೇ ಮಾತುಗಳನ್ನು ಪುನರುಚ್ಚರಿಸಿದ್ದಾರೆ. ಖಂಡಿತವಾಗಿಯೂ ನಾನು ಹೇಳಿದ್ದು ಆಗಿಯೇ ಆಗುತ್ತದೆ ಎಂದಿದ್ದಾರೆ. ನಾವು ಬಿಜೆಪಿ ಅಜೆಂಡಾ ಮುಂದುವರಿಸುತ್ತೇವೆ. ನಮ್ಮ ಅಜೆಂಡಾದಿಂದಾಗಿಯೇ ಅಂದು ರಾಹುಲ್​ ಗಾಂಧಿ ಜನಿವಾರ ಹಾಕಿದ್ದು, ಅಖಿಲೇಶ್​ ಯಾದವ್​ ಆಂಜನೇಯ ದೇವಸ್ಥಾನಕ್ಕೆ ಹೋಗಿದ್ದು ಎಂದು ಸಚಿವರು ಹೇಳಿದ್ದಾರೆ. ಕೇವಲ ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೊಡಗಿರುವವರು ರಾಮನ ಅಸ್ತಿತ್ವವನ್ನೇ ಒಪ್ಪಿಕೊಳ್ಳದೆ, ಅವನನ್ನು ಕಾಲ್ಪನಿಕ ಎಂದವರೆಲ್ಲ ಈಗ ಜನಿವಾರ ಧರಿಸುತ್ತಿದ್ದಾರೆ..ದೇಗುಲಗಳಿಗೆ ಭೇಟಿ ಕೊಡುತ್ತಿದ್ದಾರೆ ಎಂದು ಪರೋಕ್ಷವಾಗಿ ಕಾಂಗ್ರೆಸ್​ ವಿರುದ್ಧ ಹರಿಹಾಯ್ದರು.

2007ರ ಸೆಪ್ಟೆಂಬರ್​​ನಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್​ ಸರ್ಕಾರ, ಶ್ರೀರಾಮ ಮತ್ತು ರಾಮಾಯಣದಲ್ಲಿ ಬರುವ ಇತರರ ಅಸ್ತಿತ್ವವನ್ನು ಪ್ರಶ್ನಿಸಿತ್ತು. ಶ್ರೀರಾಮ ಇದ್ದ ಎಂಬುದಕ್ಕೆ ಐತಿಹಾಸಿಕವಾಗಿ ಯಾವುದೇ ಪುರಾವೆಗಳೂ ಇಲ್ಲ ಎಂದು ಸುಪ್ರಿಂಕೋರ್ಟ್​ಗೆ ಅಫಿಡಿವಿಟ್​ ಸಲ್ಲಿಸಿತ್ತು.  ಅದನ್ನೇ ಈಗ ಸಚಿವರು ಹೇಳಿದ್ದಾರೆ. ಅಸಾದುದ್ದೀನ್​ ಓವೈಸಿ ಬಿಜೆಪಿಯ ವಿರೋಧಕರು. ಅವರು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ 100 ಕ್ಷೇತ್ರಗಳಲ್ಲಿ ತಮ್ಮ ಪಕ್ಷ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಆದರೆ ಅಯೋಧ್ಯೆಯಿಂದಲೇ ತಮ್ಮ ಪ್ರಚಾರವನ್ನು ಶುರು ಮಾಡಿದ್ದಾರೆ.

ಇದನ್ನೂ ಓದಿ: ಸಲ್ಮಾನ್​ ಖಾನ್​ ಜನ್ಮದಿನ ಸಂಭ್ರಮ; 56ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡ ಸ್ಟಾರ್​ ನಟ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ