AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಮ್ಮೆ ಯೋಗಿ ಸರ್ಕಾರ ಆಡಳಿತಕ್ಕೆ ಬಂದರೆ, ಅಸಾದುದ್ದೀನ್​ ಓವೈಸಿ ಜನಿವಾರ ಧರಿಸಿ, ರಾಮಜಪ ಮಾಡುತ್ತಾರೆ: ಉತ್ತರಪ್ರದೇಶ ಸಚಿವ

ಭೂಪೇಂದ್ರ ಸಿಂಗ್ ಚೌಧರಿ ಅವರು ಮೂಲತಃ ಮೊರಾದಾಬಾದ್​ನವರಾಗಿದ್ದು, ರಾಜ್ಯ ವಿಧಾನಪರಿಷತ್​ ಸದಸ್ಯರಾಗಿದ್ದಾರೆ. ಶಮ್ಲಿಯಲ್ಲಿ  ನಡೆದ ಯುವಜನರ ಸಮಾವೇಶದಲ್ಲಿ ಈ ಮಾತುಗಳನ್ನಾಡಿದ್ದಾರೆ.

ಮತ್ತೊಮ್ಮೆ ಯೋಗಿ ಸರ್ಕಾರ ಆಡಳಿತಕ್ಕೆ ಬಂದರೆ, ಅಸಾದುದ್ದೀನ್​ ಓವೈಸಿ ಜನಿವಾರ ಧರಿಸಿ, ರಾಮಜಪ ಮಾಡುತ್ತಾರೆ: ಉತ್ತರಪ್ರದೇಶ ಸಚಿವ
ಅಸಾದುದ್ದೀನ್ ಒವೈಸಿ
TV9 Web
| Edited By: |

Updated on: Dec 27, 2021 | 9:04 AM

Share

ಉತ್ತರ ಪ್ರದೇಶದಲ್ಲೇನಾದರೂ ಮುಂದಿನ ಅವಧಿಗೆ ಕೂಡ ಯೋಗಿ ಆದಿತ್ಯನಾಥ್​ ಸರ್ಕಾರ ಅಧಿಕಾರಕ್ಕೆ ಬಂದರೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್​ ಓವೈಸಿ ಜನಿವಾರ (ಹಿಂದುಗಳಲ್ಲಿ ಬ್ರಾಹ್ಮಣರು ಸೇರಿ ಕೆಲವೇ ಸಮುದಾಯದವರು ಧರಿಸುವ ಯಜ್ಞೋಪವೀತ) ಧರಿಸಲು ಶುರು ಮಾಡುತ್ತಾರೆ. ಅಷ್ಟೇ ಅಲ್ಲ, ಶ್ರೀರಾಮನಾಮ ಜಪವನ್ನೂ ಭಜಿಸಲು ಪ್ರಾರಂಭ ಮಾಡುತ್ತಾರೆ ಎಂದು ಉತ್ತರ ಪ್ರದೇಶದ ಪಂಚಾಯಿತಿ ರಾಜ್​ ಸಚಿವ ಭೂಪೇಂದ್ರ ಸಿಂಗ್​ ಚೌಧರಿ ಹೇಳಿದ್ದಾರೆ.  ಹಾಗೇ, ರಾಹುಲ್ ಗಾಂಧಿ ಜನಿವಾರ ಧರಿಸಿದ್ದು, ಅಖಿಲೇಶ್​ ಯಾದವ್ ಹನುಮಾನ್​ ದೇಗುಲಕ್ಕೆ ಭೇಟಿ ಕೊಟ್ಟ ಘಟನೆಗಳ ಸಾಲಿಗೇ, ಈ ಓವೈಸಿ ಜನಿವಾರ ಧರಿಸಿ, ರಾಮನಾಮ ಜಪಿಸುವುದೂ ಸೇರಲಿದೆ ಎಂದು ವ್ಯಂಗ್ಯವಾಡಿದ್ದಾರೆ.  

ಭೂಪೇಂದ್ರ ಸಿಂಗ್ ಚೌಧರಿ ಅವರು ಮೂಲತಃ ಮೊರಾದಾಬಾದ್​ನವರಾಗಿದ್ದು, ರಾಜ್ಯ ವಿಧಾನಪರಿಷತ್​ ಸದಸ್ಯರಾಗಿದ್ದಾರೆ. ಶಮ್ಲಿಯಲ್ಲಿ  ನಡೆದ ಯುವಜನರ ಸಮಾವೇಶದಲ್ಲಿ ಈ ಮಾತುಗಳನ್ನಾಡಿದ್ದಾರೆ.  ಅಷ್ಟೇ ಅಲ್ಲ, ಪಿಟಿಐ ಜತೆ ಮಾತನಾಡುವಾಗಲೂ ಇದೇ ಮಾತುಗಳನ್ನು ಪುನರುಚ್ಚರಿಸಿದ್ದಾರೆ. ಖಂಡಿತವಾಗಿಯೂ ನಾನು ಹೇಳಿದ್ದು ಆಗಿಯೇ ಆಗುತ್ತದೆ ಎಂದಿದ್ದಾರೆ. ನಾವು ಬಿಜೆಪಿ ಅಜೆಂಡಾ ಮುಂದುವರಿಸುತ್ತೇವೆ. ನಮ್ಮ ಅಜೆಂಡಾದಿಂದಾಗಿಯೇ ಅಂದು ರಾಹುಲ್​ ಗಾಂಧಿ ಜನಿವಾರ ಹಾಕಿದ್ದು, ಅಖಿಲೇಶ್​ ಯಾದವ್​ ಆಂಜನೇಯ ದೇವಸ್ಥಾನಕ್ಕೆ ಹೋಗಿದ್ದು ಎಂದು ಸಚಿವರು ಹೇಳಿದ್ದಾರೆ. ಕೇವಲ ಅಲ್ಪಸಂಖ್ಯಾತರ ಓಲೈಕೆಯಲ್ಲಿ ತೊಡಗಿರುವವರು ರಾಮನ ಅಸ್ತಿತ್ವವನ್ನೇ ಒಪ್ಪಿಕೊಳ್ಳದೆ, ಅವನನ್ನು ಕಾಲ್ಪನಿಕ ಎಂದವರೆಲ್ಲ ಈಗ ಜನಿವಾರ ಧರಿಸುತ್ತಿದ್ದಾರೆ..ದೇಗುಲಗಳಿಗೆ ಭೇಟಿ ಕೊಡುತ್ತಿದ್ದಾರೆ ಎಂದು ಪರೋಕ್ಷವಾಗಿ ಕಾಂಗ್ರೆಸ್​ ವಿರುದ್ಧ ಹರಿಹಾಯ್ದರು.

2007ರ ಸೆಪ್ಟೆಂಬರ್​​ನಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್​ ಸರ್ಕಾರ, ಶ್ರೀರಾಮ ಮತ್ತು ರಾಮಾಯಣದಲ್ಲಿ ಬರುವ ಇತರರ ಅಸ್ತಿತ್ವವನ್ನು ಪ್ರಶ್ನಿಸಿತ್ತು. ಶ್ರೀರಾಮ ಇದ್ದ ಎಂಬುದಕ್ಕೆ ಐತಿಹಾಸಿಕವಾಗಿ ಯಾವುದೇ ಪುರಾವೆಗಳೂ ಇಲ್ಲ ಎಂದು ಸುಪ್ರಿಂಕೋರ್ಟ್​ಗೆ ಅಫಿಡಿವಿಟ್​ ಸಲ್ಲಿಸಿತ್ತು.  ಅದನ್ನೇ ಈಗ ಸಚಿವರು ಹೇಳಿದ್ದಾರೆ. ಅಸಾದುದ್ದೀನ್​ ಓವೈಸಿ ಬಿಜೆಪಿಯ ವಿರೋಧಕರು. ಅವರು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ 100 ಕ್ಷೇತ್ರಗಳಲ್ಲಿ ತಮ್ಮ ಪಕ್ಷ ಸ್ಪರ್ಧಿಸುವುದಾಗಿ ಹೇಳಿದ್ದಾರೆ. ಆದರೆ ಅಯೋಧ್ಯೆಯಿಂದಲೇ ತಮ್ಮ ಪ್ರಚಾರವನ್ನು ಶುರು ಮಾಡಿದ್ದಾರೆ.

ಇದನ್ನೂ ಓದಿ: ಸಲ್ಮಾನ್​ ಖಾನ್​ ಜನ್ಮದಿನ ಸಂಭ್ರಮ; 56ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡ ಸ್ಟಾರ್​ ನಟ

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?