AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಜಾ ಜೊತೆ ಸಿಕ್ಕಿಬಿದ್ದ ಐಐಟಿ ಬಾಬಾ; ಅದು ಪ್ರಸಾದವೆಂದು ಸಮಜಾಯಿಷಿ!

ಗಾಂಜಾ ಹೊಂದಿದ್ದಕ್ಕಾಗಿ ಐಐಟಿ ಬಾಬಾ ವಿರುದ್ಧ ಪ್ರಕರಣ ದಾಖಲಾಗಿದೆ. ಆತನನ್ನು ಬಂಧಿಸಲಾಗಿದ್ದು, ಬಳಿಕ ಜಾಮೀನಿನ ಮೇಲೆ ಬಿಡಲಾಗಿದೆ. ಆದರೆ, ಅದು ಗಾಂಜಾ ಅಲ್ಲ ಪ್ರಸಾದ ಎಂದು ಅವರು ಸಮಜಾಯಿಷಿ ನೀಡಿದ್ದಾರೆ. ಮಹಾ ಕುಂಭಮೇಳದ ಸಮಯದಲ್ಲಿ ಜನಪ್ರಿಯರಾದ ಐಐಟಿ ಬಾಬಾ ಅಭಯ್ ಸಿಂಗ್ ಅವರನ್ನು ಜೈಪುರದಲ್ಲಿ ಗಾಂಜಾ ಹೊಂದಿದ್ದಲ್ಲಿ ಪತ್ತೆಯಾದ ನಂತರ ಬಂಧಿಸಲಾಗಿತ್ತು.

ಗಾಂಜಾ ಜೊತೆ ಸಿಕ್ಕಿಬಿದ್ದ ಐಐಟಿ ಬಾಬಾ; ಅದು ಪ್ರಸಾದವೆಂದು ಸಮಜಾಯಿಷಿ!
Iit Baba
ಸುಷ್ಮಾ ಚಕ್ರೆ
|

Updated on: Mar 03, 2025 | 9:50 PM

Share

ಜೈಪುರ (ಮಾರ್ಚ್ 3): ಮಹಾ ಕುಂಭಮೇಳದ ಸಮಯದಲ್ಲಿ ಬಹಳ ಫೇಮಸ್ ಆದ, ಐಐಟಿ ಬಾಬಾ ಎಂದೇ ಜನಪ್ರಿಯರಾಗಿರುವ ಅಭಯ್ ಸಿಂಗ್ ಅವರನ್ನು ಗಾಂಜಾ ಇಟ್ಟುಕೊಂಡಿದ್ದಕ್ಕಾಗಿ ಬಂಧಿಸಲಾಗಿದೆ. ಜೈಪುರದಲ್ಲಿ ಬಂಧಿಸಲ್ಪಟ್ಟ ಅವರ ವಿರುದ್ಧ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ (ಎನ್‌ಡಿಪಿಎಸ್) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಅಭಯ್ ಸಿಂಗ್ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ ಬಾಂಬೆ) ಪದವೀಧರರಾಗಿದ್ದು, ಮಹಾ ಕುಂಭದಲ್ಲಿ “ಐಐಟಿ ಬಾಬಾ” ಎಂದೇ ಜನಪ್ರಿಯರಾದರು. ಅವರು ಆಧ್ಯಾತ್ಮಿಕತೆಗೆ ಕಾರಣವಾದ ಸತ್ಯದ ಅನ್ವೇಷಣೆಯಲ್ಲಿ ಅಲ್ಲಿಗೆ ಹೋಗಿದ್ದರು ಎಂದು ಹೇಳಿಕೊಂಡಿದ್ದರು.

ಇದನ್ನೂ ಓದಿ: 3 ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದ ಮಹಾಕುಂಭ; ಈ ಉತ್ಸವದ ಕುರಿತ 7 ಅಚ್ಚರಿಯ ಸಂಗತಿಗಳಿವು

ರಿದ್ಧಿ ಸಿದ್ಧಿ ಪ್ರದೇಶದ ಹೋಟೆಲ್‌ನಲ್ಲಿ ಉಳಿದುಕೊಂಡು ಗದ್ದಲ ಸೃಷ್ಟಿಸುತ್ತಿದ್ದಾರೆ ಎಂಬ ಮಾಹಿತಿ ಪಡೆದ ನಂತರ ಐಐಟಿ ಬಾಬಾ ಅವರನ್ನು ಬಂಧಿಸಲಾಯಿತು. ಪೊಲೀಸರು ಆ ಸ್ಥಳಕ್ಕೆ ತಲುಪಿ ಅವರಿಂದ ಗಾಂಜಾವನ್ನು ವಶಪಡಿಸಿಕೊಂಡರು. ಆದರೂ ಗಾಂಜಾ ಬಹಳ ಕಡಿಮೆ ಪ್ರಮಾಣದಲ್ಲಿತ್ತು. ಅವರ ಬಳಿ ದೊರೆತ ಗಾಂಜಾದ ಪ್ರಮಾಣವು ಅನುಮತಿಸಲಾದ ಮಿತಿಯೊಳಗೆ ಇದ್ದುದರಿಂದ ಪೊಲೀಸರು ಆತನನ್ನು ಸ್ವಲ್ಪ ಸಮಯದ ಬಂಧನದ ನಂತರ ಬಿಡುಗಡೆ ಮಾಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಧನದಿಂದ ಬಿಡುಗಡೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಐಐಟಿ ಬಾಬಾ ಅಭಯ್ ಸಿಂಗ್, ಅದು ಗಾಂಜಾ ಅಲ್ಲ “ಪ್ರಸಾದ” ಎಂದು ಹೇಳಿದ್ದಾರೆ. ತಮ್ಮ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಕೂಡ ದೃಢಪಡಿಸಿದ್ದಾರೆ.

ಇದನ್ನೂ ಓದಿ: ತೊಂದರೆಯಾಗಿದ್ದರೆ ಕ್ಷಮಿಸಿ; ಮಹಾಕುಂಭದ ಮುಕ್ತಾಯದ ವೇಳೆ ಭಕ್ತರಿಗೆ ಪ್ರಧಾನಿ ಮೋದಿ ಸಂದೇಶ

‘ಐಐಟಿ ಬಾಬಾ’ ಅಭಯ್ ಸಿಂಗ್ ಯಾರು?:

ಐಐಟಿ ಬಾಬಾ ಅಭಯ್ ಸಿಂಗ್ ಐಐಟಿ ಬಾಂಬೆಯ ಹಳೆಯ ವಿದ್ಯಾರ್ಥಿ ಮತ್ತು ಮಾಜಿ ಏರೋಸ್ಪೇಸ್ ಎಂಜಿನಿಯರ್. ಅವರು ಶೈಕ್ಷಣಿಕ ಕ್ಷೇತ್ರ ಬಿಟ್ಟು ಸನ್ಯಾಸತ್ವ ಸ್ವೀಕರಿಸಿದ್ದು, ಮಹಾ ಕುಂಭದಲ್ಲಿ ಪಾಲ್ಗೊಂಡಿದ್ದರು. ಟಿವಿ ಚಾನೆಲ್ ಒಂದರ ಸಂದರ್ಶನದ ಬಳಿಕ ಅಭಯ್ ಸಿಂಗ್ ಐಐಟಿ ಬಾಬಾ ಎಂದೇ ಪ್ರಸಿದ್ಧರಾದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ