AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಜಾ ಜೊತೆ ಸಿಕ್ಕಿಬಿದ್ದ ಐಐಟಿ ಬಾಬಾ; ಅದು ಪ್ರಸಾದವೆಂದು ಸಮಜಾಯಿಷಿ!

ಗಾಂಜಾ ಹೊಂದಿದ್ದಕ್ಕಾಗಿ ಐಐಟಿ ಬಾಬಾ ವಿರುದ್ಧ ಪ್ರಕರಣ ದಾಖಲಾಗಿದೆ. ಆತನನ್ನು ಬಂಧಿಸಲಾಗಿದ್ದು, ಬಳಿಕ ಜಾಮೀನಿನ ಮೇಲೆ ಬಿಡಲಾಗಿದೆ. ಆದರೆ, ಅದು ಗಾಂಜಾ ಅಲ್ಲ ಪ್ರಸಾದ ಎಂದು ಅವರು ಸಮಜಾಯಿಷಿ ನೀಡಿದ್ದಾರೆ. ಮಹಾ ಕುಂಭಮೇಳದ ಸಮಯದಲ್ಲಿ ಜನಪ್ರಿಯರಾದ ಐಐಟಿ ಬಾಬಾ ಅಭಯ್ ಸಿಂಗ್ ಅವರನ್ನು ಜೈಪುರದಲ್ಲಿ ಗಾಂಜಾ ಹೊಂದಿದ್ದಲ್ಲಿ ಪತ್ತೆಯಾದ ನಂತರ ಬಂಧಿಸಲಾಗಿತ್ತು.

ಗಾಂಜಾ ಜೊತೆ ಸಿಕ್ಕಿಬಿದ್ದ ಐಐಟಿ ಬಾಬಾ; ಅದು ಪ್ರಸಾದವೆಂದು ಸಮಜಾಯಿಷಿ!
Iit Baba
ಸುಷ್ಮಾ ಚಕ್ರೆ
|

Updated on: Mar 03, 2025 | 9:50 PM

Share

ಜೈಪುರ (ಮಾರ್ಚ್ 3): ಮಹಾ ಕುಂಭಮೇಳದ ಸಮಯದಲ್ಲಿ ಬಹಳ ಫೇಮಸ್ ಆದ, ಐಐಟಿ ಬಾಬಾ ಎಂದೇ ಜನಪ್ರಿಯರಾಗಿರುವ ಅಭಯ್ ಸಿಂಗ್ ಅವರನ್ನು ಗಾಂಜಾ ಇಟ್ಟುಕೊಂಡಿದ್ದಕ್ಕಾಗಿ ಬಂಧಿಸಲಾಗಿದೆ. ಜೈಪುರದಲ್ಲಿ ಬಂಧಿಸಲ್ಪಟ್ಟ ಅವರ ವಿರುದ್ಧ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ (ಎನ್‌ಡಿಪಿಎಸ್) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಅಭಯ್ ಸಿಂಗ್ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ ಬಾಂಬೆ) ಪದವೀಧರರಾಗಿದ್ದು, ಮಹಾ ಕುಂಭದಲ್ಲಿ “ಐಐಟಿ ಬಾಬಾ” ಎಂದೇ ಜನಪ್ರಿಯರಾದರು. ಅವರು ಆಧ್ಯಾತ್ಮಿಕತೆಗೆ ಕಾರಣವಾದ ಸತ್ಯದ ಅನ್ವೇಷಣೆಯಲ್ಲಿ ಅಲ್ಲಿಗೆ ಹೋಗಿದ್ದರು ಎಂದು ಹೇಳಿಕೊಂಡಿದ್ದರು.

ಇದನ್ನೂ ಓದಿ: 3 ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಿದ ಮಹಾಕುಂಭ; ಈ ಉತ್ಸವದ ಕುರಿತ 7 ಅಚ್ಚರಿಯ ಸಂಗತಿಗಳಿವು

ರಿದ್ಧಿ ಸಿದ್ಧಿ ಪ್ರದೇಶದ ಹೋಟೆಲ್‌ನಲ್ಲಿ ಉಳಿದುಕೊಂಡು ಗದ್ದಲ ಸೃಷ್ಟಿಸುತ್ತಿದ್ದಾರೆ ಎಂಬ ಮಾಹಿತಿ ಪಡೆದ ನಂತರ ಐಐಟಿ ಬಾಬಾ ಅವರನ್ನು ಬಂಧಿಸಲಾಯಿತು. ಪೊಲೀಸರು ಆ ಸ್ಥಳಕ್ಕೆ ತಲುಪಿ ಅವರಿಂದ ಗಾಂಜಾವನ್ನು ವಶಪಡಿಸಿಕೊಂಡರು. ಆದರೂ ಗಾಂಜಾ ಬಹಳ ಕಡಿಮೆ ಪ್ರಮಾಣದಲ್ಲಿತ್ತು. ಅವರ ಬಳಿ ದೊರೆತ ಗಾಂಜಾದ ಪ್ರಮಾಣವು ಅನುಮತಿಸಲಾದ ಮಿತಿಯೊಳಗೆ ಇದ್ದುದರಿಂದ ಪೊಲೀಸರು ಆತನನ್ನು ಸ್ವಲ್ಪ ಸಮಯದ ಬಂಧನದ ನಂತರ ಬಿಡುಗಡೆ ಮಾಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಧನದಿಂದ ಬಿಡುಗಡೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಐಐಟಿ ಬಾಬಾ ಅಭಯ್ ಸಿಂಗ್, ಅದು ಗಾಂಜಾ ಅಲ್ಲ “ಪ್ರಸಾದ” ಎಂದು ಹೇಳಿದ್ದಾರೆ. ತಮ್ಮ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಕೂಡ ದೃಢಪಡಿಸಿದ್ದಾರೆ.

ಇದನ್ನೂ ಓದಿ: ತೊಂದರೆಯಾಗಿದ್ದರೆ ಕ್ಷಮಿಸಿ; ಮಹಾಕುಂಭದ ಮುಕ್ತಾಯದ ವೇಳೆ ಭಕ್ತರಿಗೆ ಪ್ರಧಾನಿ ಮೋದಿ ಸಂದೇಶ

‘ಐಐಟಿ ಬಾಬಾ’ ಅಭಯ್ ಸಿಂಗ್ ಯಾರು?:

ಐಐಟಿ ಬಾಬಾ ಅಭಯ್ ಸಿಂಗ್ ಐಐಟಿ ಬಾಂಬೆಯ ಹಳೆಯ ವಿದ್ಯಾರ್ಥಿ ಮತ್ತು ಮಾಜಿ ಏರೋಸ್ಪೇಸ್ ಎಂಜಿನಿಯರ್. ಅವರು ಶೈಕ್ಷಣಿಕ ಕ್ಷೇತ್ರ ಬಿಟ್ಟು ಸನ್ಯಾಸತ್ವ ಸ್ವೀಕರಿಸಿದ್ದು, ಮಹಾ ಕುಂಭದಲ್ಲಿ ಪಾಲ್ಗೊಂಡಿದ್ದರು. ಟಿವಿ ಚಾನೆಲ್ ಒಂದರ ಸಂದರ್ಶನದ ಬಳಿಕ ಅಭಯ್ ಸಿಂಗ್ ಐಐಟಿ ಬಾಬಾ ಎಂದೇ ಪ್ರಸಿದ್ಧರಾದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?