AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಐಟಿ ಬಾಂಬೆಯಲ್ಲಿ ವಿದ್ಯಾರ್ಥಿ ಸೋಗಿನಲ್ಲಿ ಬಂದು 14 ದಿನ ಕ್ಯಾಂಪಸ್​​ನಲ್ಲಿದ್ದ ಮಂಗಳೂರು ಯುವಕ

ಐಐಟಿ ಬಾಂಬೆಯಲ್ಲಿ ವಿದ್ಯಾರ್ಥಿ ಸೋಗಿನಲ್ಲಿ 14 ದಿನಗಳ ಕಾಲ ಕ್ಯಾಂಪಸ್​​ನಲ್ಲಿದ್ದ ಮಂಗಳೂರು ಯುವಕನನ್ನು ಬಂಧಿಸಲಾಗಿದೆ. ಭಾರಿ ಭದ್ರತಾ ಲೋಪವಾಗಿದ್ದು ಐಐಟಿ ಬಾಂಬೆ ವಿರುದ್ಧ ಪ್ರಶ್ನೆಗಳ ಸುರಿಮಳೆಯೇ ಬಂದಿದೆ. ಯುವಕನ ಹೆಸರು ಬಿಲಾಲ್ ಅಹ್ಮದ್ ಫಯಾಜ್ ಅಹ್ಮದ್ ತೇಲಿ ಎಂದು ಗುರುತಿಸಲಾಗಿದೆ. ಜೂನ್ 17 ರಂದು ಕ್ಯಾಂಪಸ್ ಭದ್ರತಾ ತಂಡವು ಆತನನ್ನು ಹಿಡಿದು ಪೊವೈ ಪೊಲೀಸರಿಗೆ ಹಸ್ತಾಂತರಿಸಿದೆ.

ಐಐಟಿ ಬಾಂಬೆಯಲ್ಲಿ ವಿದ್ಯಾರ್ಥಿ ಸೋಗಿನಲ್ಲಿ ಬಂದು 14 ದಿನ ಕ್ಯಾಂಪಸ್​​ನಲ್ಲಿದ್ದ ಮಂಗಳೂರು ಯುವಕ
ಐಐಟಿ ಬಾಂಬೆ
ನಯನಾ ರಾಜೀವ್
|

Updated on: Jun 25, 2025 | 12:45 PM

Share

ಮುಂಬೈ, ಜೂನ್ 25: ಐಐಟಿ ಬಾಂಬೆ(IIT Bombay)ಯಲ್ಲಿ ವಿದ್ಯಾರ್ಥಿ ಸೋಗಿನಲ್ಲಿ 14 ದಿನಗಳ ಕಾಲ ಕ್ಯಾಂಪಸ್​​ನಲ್ಲಿದ್ದ ಮಂಗಳೂರು ಯುವಕನನ್ನು ಬಂಧಿಸಲಾಗಿದೆ. ಭಾರಿ ಭದ್ರತಾ ಲೋಪ ಇದಾಗಿದ್ದು  ಪ್ರಶ್ನೆಗಳ ಸುರಿಮಳೆಯೇ ಬಂದಿದೆ. ಯುವಕನ ಹೆಸರು ಬಿಲಾಲ್ ಅಹ್ಮದ್ ಫಯಾಜ್ ಅಹ್ಮದ್ ತೇಲಿ. ಜೂನ್ 17 ರಂದು ಕ್ಯಾಂಪಸ್ ಭದ್ರತಾ ತಂಡವು ಆತನನ್ನು ಹಿಡಿದು ಪೊವೈ ಪೊಲೀಸರಿಗೆ ಹಸ್ತಾಂತರಿಸಿದೆ.

ಭದ್ರತೆಯನ್ನು ತಪ್ಪಿಸಿ ಕ್ಯಾಂಪಸ್‌ಗೆ ಹೇಗೆ ಪ್ರವೇಶಿಸಿದ್ದ ಮತ್ತು ರಾತ್ರಿ ಎಲ್ಲಿ ಕಳೆದಿದ್ದ ಎಂಬುದರ ಕುರಿತು ಈಗ ತನಿಖೆ ನಡೆಸಲಾಗುತ್ತಿದೆ. ಈ ಯುವಕ ಯಾವುದೋ ದೊಡ್ಡ ಪಿತೂರಿ ಮಾಡಲು ಇಲ್ಲಿಗೆ ಬಂದಿರುವ ಅನುಮಾನವಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಐಐಟಿ ಬಾಂಬೆಯ ಭದ್ರತೆ ಮತ್ತು ಜಾಗೃತ ಇಲಾಖೆ ಸಲ್ಲಿಸಿದ ಎಫ್‌ಐಆರ್ ಪ್ರಕಾರ, ರಾಹುಲ್ ದತ್ತಾರಾಮ್ ಪಾಟೀಲ್ ಸಂಸ್ಥೆಯ ಉದ್ಯೋಗಿಯಾಗಿದ್ದು ಅವರೇ ದೂರು ದಾಖಲಿಸಿದ್ದಾರೆ.

ಜೂನ್ 4 ರಂದು CREST ವಿಭಾಗದ ಅಧಿಕಾರಿ ಶಿಲ್ಪಾ ಕೋಟಿಕ್ಕಲ್ ಅವರು ಅನುಮಾನಾಸ್ಪದ ಯುವಕನೊಬ್ಬ ತಮ್ಮ ಕಚೇರಿಗೆ ಪ್ರವೇಶಿಸುವುದನ್ನು ಕಂಡರು, ಕೂಡಲೇ ಹೋಗಿ ಪ್ರಶ್ನಿಸಿದಾಗ ಮತ್ತು ಆತನ ಗುರುತಿನ ಚೀಟಿ ಕೇಳಿದಾಗ, ಅಲ್ಲಿಂದ ಪರಾರಿಯಾಗಿದ್ದ.

ಮತ್ತಷ್ಟು ಓದಿ: QS World University Rankings: ಐಐಟಿ ಡೆಲ್ಲಿ ಭಾರತದ ನಂ. 1 ಯೂನಿವರ್ಸಿಟಿ; ಎಂಐಟಿ ವಿಶ್ವದಲ್ಲೇ ಬೆಸ್ಟ್

ನಂತರ ಸಿಸಿಟಿವಿ ಫೂಟೇಜ್ ಮೂಲಕ ಶಂಕಿತ ಮುಖವನ್ನು ಗುರುತಿಸಿ ಐಐಟಿಯ ಭದ್ರತಾ ತಂಡ ಕೂಡಲೇ ಪ್ರಿಂಟ್ ಔಟ್ ಹಿಡಿದು ಕ್ಯಾಂಪಸ್ ಪೂರ್ತಿ ಹುಡುಕಾಡಿತ್ತು. ಜೂನ್ 17ರಂದು ಸಂಜೆ 4 ಗಂಟೆ ಸುಮಾರಿಗೆ ಕೋಟಿಕ್ಕಲ್ ಮತ್ತೆ ಆ ಯುವಕನನ್ನು ನೋಡಿದ್ದಾರೆ. ಭದ್ರತಾ ಸಿಬ್ಬಂದಿಗಳಾದ ಕಿಶೋರ್ ಕುಂಭಾರ್ ಮತ್ತು ಶ್ಯಾಮ್ ಘೋಡ್ವಿಂದೆ ಕೂಡಲೇ ಆತನನ್ನು ಬಂಧಿಸಿದ್ದಾರೆ.

ಆರೋಪಿ ವಿಚಾರಣೆ ಸಮಯದಲ್ಲಿ ಹೇಳಿದ್ದೇನು? ಬಿಲಾಲ್ ತೇಲಿ ಜೂನ್ 2 ರಿಂದ ಜೂನ್ 7 ರವರೆಗೆ ಮತ್ತು ಜೂನ್ 10 ರಿಂದ ಜೂನ್ 17 ರವರೆಗೆ ಹಲವು ಹಾಸ್ಟೆಲ್‌ಗಳಲ್ಲಿ ಉಳಿದುಕೊಂಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಸುಮಾರು 13,000 ವಿದ್ಯಾರ್ಥಿಗಳು (ಯುಜಿ, ಪಿಜಿ ಮತ್ತು ಪಿಎಚ್‌ಡಿ) ವಾಸಿಸುತ್ತಿದ್ದಾರೆ.

ಪೊವೈ ಪೊಲೀಸರು ಆರೋಪಿಯನ್ನು ಐಐಟಿ ಪೊವೈ ಕ್ಯಾಂಪಸ್‌ನಿಂದ ಬಂಧಿಸಿದ್ದಾರೆ. ಹೊರಗಿನವರು ಎರಡು ವಾರಗಳ ಕಾಲ ಕ್ಯಾಂಪಸ್‌ನಲ್ಲಿ ಹೇಗೆ ಉಳಿಯಬಹುದು ಎಂದು ಪ್ರಶ್ನಿಸಿದ್ದಾರೆ. ಪೊಲೀಸರು ಭಾರತೀಯ ದಂಡ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 329(3) ಮತ್ತು 329(4) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಪೊಲೀಸ್ ವಶದಲ್ಲಿದ್ದಾನೆ. ಬಿಲಾಲ್ ಬಂದ ಹಿಂದಿನ ಉದ್ದೇಶವೇನು, ಆತ ಯಾರೊಂದಿಗೆ ಸಂಪರ್ಕದಲ್ಲಿದ್ದಾನೆ ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

​​

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ