AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಐಟಿ ಬಾಂಬೆ ಕ್ಯಾಂಟೀನ್​ನಲ್ಲಿ ಸಸ್ಯಾಹಾರಿಗಳಿಗೆ ಮಾತ್ರ ಪ್ರವೇಶ ಪೋಸ್ಟರ್​, ಹುಟ್ಟುಹಾಕಿತೊಂದು ವಿವಾದ

IIT Bombay: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ-ಬಾಂಬೆ  ಹಾಸ್ಟೆಲ್‌ನಲ್ಲಿರುವ ಕ್ಯಾಂಟೀನ್‌ನ ಗೋಡೆಗಳ ಮೇಲೆ ಸಸ್ಯಾಹಾರಿಗಳು ಮಾತ್ರ ಎಂದು ಬರೆದಿರುವ ಪೋಸ್ಟರ್‌ಗಳು ಕೋಲಾಹಲವನ್ನು ಸೃಷ್ಟಿಸಿವೆ

ಐಐಟಿ ಬಾಂಬೆ ಕ್ಯಾಂಟೀನ್​ನಲ್ಲಿ ಸಸ್ಯಾಹಾರಿಗಳಿಗೆ ಮಾತ್ರ ಪ್ರವೇಶ ಪೋಸ್ಟರ್​, ಹುಟ್ಟುಹಾಕಿತೊಂದು ವಿವಾದ
ಐಐಟಿ ಬಾಂಬೆ ಹಾಸ್ಟೆಲ್ ಕ್ಯಾಂಟೀನ್ ಪೋಸ್ಟರ್
ನಯನಾ ರಾಜೀವ್
|

Updated on: Jul 31, 2023 | 10:48 AM

Share

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ-ಬಾಂಬೆ(IIT Bombay)  ಹಾಸ್ಟೆಲ್‌ನಲ್ಲಿರುವ ಕ್ಯಾಂಟೀನ್‌ನ ಗೋಡೆಗಳ ಮೇಲೆ ಸಸ್ಯಾಹಾರಿಗಳು ಮಾತ್ರ ಎಂದು ಬರೆದಿರುವ ಪೋಸ್ಟರ್‌ಗಳು ಕೋಲಾಹಲವನ್ನು ಸೃಷ್ಟಿಸಿವೆ. ಇಲ್ಲಿಯ ವಿದ್ಯಾರ್ಥಿಗಳು ಆಹಾರದಲ್ಲಿ ತಾರತಮ್ಯದ ಬಗ್ಗೆ ಪ್ರಸ್ತಾಪಿಸಿದ್ದಾರೆ. ಸಂಸ್ಥೆಯ ಹಾಸ್ಟೆಲ್ ಸಂಖ್ಯೆ 12 ರ ಕ್ಯಾಂಟೀನ್‌ನ ಗೋಡೆಗಳ ಮೇಲೆ ಕಳೆದ ವಾರ ಸಸ್ಯಾಹಾರಿಗಳಿಗೆ ಮಾತ್ರ ಇಲ್ಲಿ ಕುಳಿತುಕೊಳ್ಳಲು ಅವಕಾಶವಿದೆ ಎಂಬ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ ಎಂದು ವಿದ್ಯಾರ್ಥಿ ಪ್ರತಿನಿಧಿಯೊಬ್ಬರು ಹೇಳಿದ್ದಾರೆ.

ಈ ಪೋಸ್ಟರ್​ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಹಾಸ್ಟೆಲ್ ಕ್ಯಾಂಟೀನ್‌ನಲ್ಲಿ ಊಟ ಮಾಡಲು ಪ್ರತ್ಯೇಕ ಮಾರ್ಗಸೂಚಿ ಇಲ್ಲ. ಪೋಸ್ಟರ್‌ಗಳ ಬಗ್ಗೆ ತಿಳಿದಿದ್ದರೂ ಕ್ಯಾಂಟೀನ್‌ನಲ್ಲಿ ಯಾರು ಹಾಕಿದ್ದಾರೆ ಎಂಬುದು ತಿಳಿದಿಲ್ಲ ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮತ್ತಷ್ಟು ಓದಿ:  ಐಐಟಿಗಳಲ್ಲಿ ಸರಣಿ ಆತ್ಮಹತ್ಯೆ ಪ್ರಕರಣ; ವಿದ್ಯಾರ್ಥಿಗಳೊಂದಿಗೆ ಸಂಪರ್ಕ ಸಾಧಿಸಲು ಹೊಸ ಮಾರ್ಗಗಳನ್ನು ಪರಿಚಯಿಸಲಿರುವ ಐಐಟಿ

ವಿದ್ಯಾರ್ಥಿ ಸಂಘಟನೆ ಅಂಬೇಡ್ಕರ್ ಪೆರಿಯಾರ್ ಫುಲೆ ಸ್ಟಡಿ ಸರ್ಕಲ್ (ಎಪಿಪಿಎಸ್‌ಸಿ) ಪ್ರತಿನಿಧಿಗಳು ಘಟನೆಯನ್ನು ಖಂಡಿಸಿದರು ಮತ್ತು ಪೋಸ್ಟರ್‌ಗಳನ್ನು ಹರಿದು ಹಾಕಿದರು. ಘಟನೆಯ ನಂತರ ಹಾಸ್ಟೆಲ್ ಪ್ರಧಾನ ಕಾರ್ಯದರ್ಶಿ ಎಲ್ಲಾ ವಿದ್ಯಾರ್ಥಿಗಳಿಗೆ ಇಮೇಲ್ ಕಳುಹಿಸಿದ್ದಾರೆ, ಜೈನ ಆಹಾರ ವಿತರಣೆಗೆ ಕೌಂಟರ್ ಇದೆ ಎಂದು ತಿಳಿಸಿದ್ದಾರೆ.

ಆದರೆ ಜೈನ್ ಊಟ ಮಾಡುವವರಿಗೆ ಕುಳಿತುಕೊಳ್ಳಲು ವಿಶೇಷ ಸ್ಥಳವಿಲ್ಲ, ಕೆಲವು ಮಂದಿ ಕೆಲವು ಪ್ರದೇಶಗಳನ್ನು ಜೈನ ಆಸನ ಪ್ರದೇಶಗಳು ಎಂದು ಬಲವಂತವಾಗಿ ಗೊತ್ತುಪಡಿಸಿದ ವರದಿಗಳಿವೆ.ಮಾಂಸಾಹಾರಿ ಆಹಾರವನ್ನು ತರುವ ವ್ಯಕ್ತಿಗಳನ್ನು ಆ ಪ್ರದೇಶಗಳಲ್ಲಿ ಕುಳಿತುಕೊಳ್ಳಲು ಅನುಮತಿಸುತ್ತಿಲ್ಲ. ಈ ನಡವಳಿಕೆ ಸ್ವೀಕಾರಾರ್ಹವಲ್ಲ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ