AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಐಟಿ ಕಾನ್ಪುರದ ಪಿಎಚ್​ಡಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ, ತಿಂಗಳಲ್ಲಿ ಮೂರನೇ ಘಟನೆ

ಐಐಟಿ ಕಾನ್ಪುರದ ಪಿಎಚ್​ಡಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ (ಐಐಟಿ-ಕಾನ್ಪುರ) ಪಿಎಚ್‌ಡಿ ವಿದ್ಯಾರ್ಥಿನಿ ಗುರುವಾರ ಬೆಳಗ್ಗೆ ತನ್ನ ಹಾಸ್ಟೆಲ್ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಒಂದು ತಿಂಗಳಲ್ಲಿ ಸಂಸ್ಥೆಯಲ್ಲಿ ನಡೆದ ಇಂತಹ ಮೂರನೇ ಘಟನೆ ಇದಾಗಿದೆ.

ಐಐಟಿ ಕಾನ್ಪುರದ ಪಿಎಚ್​ಡಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ, ತಿಂಗಳಲ್ಲಿ ಮೂರನೇ ಘಟನೆ
ಸಾವುImage Credit source: India Today
ನಯನಾ ರಾಜೀವ್
|

Updated on: Jan 18, 2024 | 3:32 PM

Share

ಐಐಟಿ ಕಾನ್ಪುರ(IIT Kanpur)ದ ಪಿಎಚ್​ಡಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (ಐಐಟಿ-ಕಾನ್ಪುರ) ಪಿಎಚ್‌ಡಿ ವಿದ್ಯಾರ್ಥಿನಿ ಗುರುವಾರ ಬೆಳಗ್ಗೆ ತನ್ನ ಹಾಸ್ಟೆಲ್ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಒಂದು ತಿಂಗಳಲ್ಲಿ ಸಂಸ್ಥೆಯಲ್ಲಿ ನಡೆದ ಇಂತಹ ಮೂರನೇ ಘಟನೆ ಇದಾಗಿದೆ.

ಪೊಲೀಸರ ಪ್ರಕಾರ, ಸಂಶೋಧನಾ ವಿದ್ಯಾರ್ಥಿ ಪ್ರಿಯಾಂಕಾ ಜಾರ್ಖಂಡ್‌ನ ದುಮ್ಕಾ ಮೂಲದವರು, ಪ್ರಿಯಾಂಕಾ ಅವರ ತಂದೆ ನರೇಂದ್ರ ಜೈಸ್ವಾಲ್ ಅವರ ಹಾಸ್ಟೆಲ್‌ನ ಮ್ಯಾನೇಜರ್ ಅನ್ನು ಸಂಪರ್ಕಿಸಿದ ನಂತರ ವಿಷಯ ಬೆಳಕಿಗೆ ಬಂದಿದೆ, ಅವರ ಕರೆಗಳಿಗೆ ಮಗಳು ಉತ್ತರಿಸುತ್ತಿಲ್ಲ ಎಂದು ತಿಳಿಸಿದ್ದರು.

ಹಾಸ್ಟೆಲ್ ಮ್ಯಾನೇಜರ್ ರಿತು ಪಾಂಡೆ, ತನ್ನ ಹಾಸ್ಟೆಲ್ ರೂಮ್ ತಲುಪಿದಾಗ ಬಾಗಿಲು ಒಳಗಿನಿಂದ ಲಾಕ್ ಆಗಿರುವುದು ಕಂಡು ಬಂತು. ಬಹಳ ಹೊತ್ತಾದರೂ ಪ್ರಿಯಾಂಕಾ ಬಾಗಿಲು ತೆರೆಯದೇ ಇದ್ದಾಗ ಪಾಂಡೆ ಬಲವಂತವಾಗಿ ಆಕೆಯ ಕೋಣೆಗೆ ನುಗ್ಗಿದ್ದರು. ಸೀಲಿಂಗ್ ಫ್ಯಾನ್‌ಗೆ ವಿದ್ಯಾರ್ಥಿನಿ ನೇಣು ಬಿಗಿದುಕೊಂಡಿರುವುದನ್ನು ಕಂಡು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಓದಿ: ಐಐಟಿ ಗುವಾಹಟಿಯ ವಿದ್ಯಾರ್ಥಿನಿ ಹೊಸ ವರ್ಷದ ಪಾರ್ಟಿ ಬಳಿಕ ಹೋಟೆಲ್​ ರೂಂನಲ್ಲಿ ಶವವಾಗಿ ಪತ್ತೆ

ಫೋರೆನ್ಸಿಕ್ಸ್ ತಂಡದೊಂದಿಗೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಐಐಟಿ-ಕಾನ್ಪುರ ಆಡಳಿತದ ಮೂಲಗಳ ಪ್ರಕಾರ, ಪ್ರಿಯಾಂಕಾ ಅವರು ಡಿಸೆಂಬರ್ 29, 2023 ರಂದು ಕೆಮಿಕಲ್ ಎಂಜಿನಿಯರಿಂಗ್‌ನಲ್ಲಿ ಸಂಸ್ಥೆಯ ಪಿಎಚ್‌ಡಿಗೆ ಪ್ರವೇಶ ಪಡೆದಿದ್ದಳು.

ಘಟನೆಯ ಬಗ್ಗೆ ಪ್ರಿಯಾಂಕಾ ಅವರ ಕುಟುಂಬಕ್ಕೆ ತಿಳಿಸಲಾಯಿತು ಮತ್ತು ಅವರು ಶೀಘ್ರದಲ್ಲೇ ಕಾನ್ಪುರಕ್ಕೆ ತೆರಳಿದ್ದಾರೆ. ಕಳೆದ ಡಿಸೆಂಬರ್‌ನಲ್ಲಿ, ಮಂಗಳವಾರ ಕಾನ್ಪುರದ ಐಐಟಿಯ ಹಾಸ್ಟೆಲ್ ಕೊಠಡಿಯೊಳಗೆ ಸಂಶೋಧನಾ ವಿದ್ಯಾರ್ಥಿಯೊಬ್ಬ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು . ಪಲ್ಲವಿ ಚಿಲ್ಕಾ ಐಐಟಿ ಕಾನ್ಪುರದಲ್ಲಿ ಜೈವಿಕ ವಿಜ್ಞಾನ ಮತ್ತು ಜೈವಿಕ ಇಂಜಿನಿಯರಿಂಗ್ ವಿಭಾಗದಿಂದ ತಮ್ಮ ಪೋಸ್ಟ್‌ಡಾಕ್ಟರಲ್ ಸಂಶೋಧನೆಯನ್ನು ಮುಂದುವರಿಸುತ್ತಿದ್ದರು.

ಪಿಟಿಐ ಸುದ್ದಿ ಸಂಸ್ಥೆಯ ವರದಿಯ ಪ್ರಕಾರ, ಸ್ವಚ್ಛತಾ ಸಿಬ್ಬಂದಿ ಮಧ್ಯಾಹ್ನ ಚಿಲ್ಕಾ ಅವರ ರೂಮಿನ ಬಾಗಿಲು ತಟ್ಟಿದ್ದರು ಮತ್ತು ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ನಂತರ ವ್ಯಕ್ತಿ ಒಳಗೆ ಇಣುಕಿ ನೋಡಿದಾಗ ಚಿಲ್ಕಾ ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ