AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾಷಣ ಮಾಡುವಾಗ ವೇದಿಕೆ ಮೇಲೆಯೇ ಕುಸಿದು ಬಿದ್ದು ಐಐಟಿ ಕಾನ್ಪುರದ ಹಿರಿಯ ಪ್ರಾಧ್ಯಾಪಕ ನಿಧನ

ಐಐಟಿ ಕಾನ್ಪುರದ ಹಿರಿಯ ಪ್ರಾಧ್ಯಾಪಕರೊಬ್ಬರು ವಿಶ್ವವಿದ್ಯಾಲಯದಲ್ಲಿ ಹಳೆಯ ವಿದ್ಯಾರ್ಥಿಗಳನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದ ವೇಳೆ ಹೃದಯಸ್ತಂಭನದಿಂದ ಸಾವನ್ನಪ್ಪಿದ್ದಾರೆ. ಸಮೀರ್ ಖಂಡೇಕರ್ ಐಐಟಿ ಕಾನ್ಪುರ ಸಭಾಂಗಣದಲ್ಲಿ ನಡೆದ ಹಳೆ ವಿದ್ಯಾರ್ಥಿಗಳ ಸಮಾವೇಶದಲ್ಲಿ ಭಾಷಣ ಮಾಡುತ್ತಿದ್ದರು.

ಭಾಷಣ ಮಾಡುವಾಗ ವೇದಿಕೆ ಮೇಲೆಯೇ ಕುಸಿದು ಬಿದ್ದು ಐಐಟಿ ಕಾನ್ಪುರದ ಹಿರಿಯ ಪ್ರಾಧ್ಯಾಪಕ ನಿಧನ
ಸಮೀರ್Image Credit source: India Today
ನಯನಾ ರಾಜೀವ್
|

Updated on: Dec 24, 2023 | 8:07 AM

Share

ಐಐಟಿ ಕಾನ್ಪುರದ ಹಿರಿಯ ಪ್ರಾಧ್ಯಾಪಕರೊಬ್ಬರು ವಿಶ್ವವಿದ್ಯಾಲಯದಲ್ಲಿ ಹಳೆಯ ವಿದ್ಯಾರ್ಥಿಗಳನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದ ವೇಳೆ ಹೃದಯಸ್ತಂಭನದಿಂದ ಸಾವನ್ನಪ್ಪಿದ್ದಾರೆ. ಸಮೀರ್ ಖಂಡೇಕರ್ ಐಐಟಿ ಕಾನ್ಪುರ ಸಭಾಂಗಣದಲ್ಲಿ ನಡೆದ ಹಳೆಯ ವಿದ್ಯಾರ್ಥಿಗಳ ಸಮಾವೇಶದಲ್ಲಿ ಭಾಷಣ ಮಾಡುತ್ತಿದ್ದರು.

ಖಂಡೇಕರ್ ಅವರು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವ ಮಾರ್ಗಗಳ ಬಗ್ಗೆ ಮಾತನಾಡುತ್ತಿದ್ದರು. ಖಂಡೇಕರ್ ಇದ್ದಕ್ಕಿದ್ದಂತೆ ಅಸ್ವಸ್ಥರಾದರು, ಎದೆಯಲ್ಲಿ ಸ್ಬಲ್ಪ ನೋವು ಕಾಣಿಸಿಕೊಂಡಿತ್ತು. ಅವರು ಭಾವುಕರಾಗಿದ್ದಾರೆ ಎಂದು ವಿದ್ಯಾರ್ಥಿಗಳು ಭಾವಿಸಿದ್ದರು. ಸ್ವಲ್ಪ ಸಮಯದ ನಂತರ ಬೆವರು ಬರಲು ಶುರುವಾಗಿತ್ತು. ವೇದಿಕೆ ಮೇಲೆಯೇ ಕುಸಿದು ಬಿದ್ದರು. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯ ನೀರಜ್ ಕುಮಾರ್ ಪ್ರಕಾರ, ಆಸ್ಪತ್ರೆಗೆ ಕರೆತರುವ ಮೊದಲೇ ಖಂಡೇಕರ್ ಮೃತಪಟ್ಟಿದ್ದರು.

ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿರುವ ಪ್ರೊಫೆಸರ್ ಅವರ ಮಗ ತನ್ನ ತಂದೆಯ ಅಂತ್ಯಕ್ರಿಯೆಯನ್ನು ನಡೆಸಲಿದ್ದಾರೆ. ಖಂಡೇಕರ್ ಅವರು 2019 ರಿಂದ ಕೊಲೆಸ್ಟ್ರಾಲ್‌ನಿಂದ ಬಳಲುತ್ತಿದ್ದರು ಮತ್ತು ನಿರಂತರ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರು. ಅವರು ತಂದೆ-ತಾಯಿ, ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

ಮತ್ತಷ್ಟು ಓದಿ: ಸ್ಪಂದನಾ ಸಾವಿನ ಬೆನ್ನಲ್ಲೇ ಮತ್ತೊಂದು ಶಾಕ್; ಮಂಡ್ಯ ಮೂಲದ ಕಿರುತೆರೆ ನಟ ಹೃದಯಾಘಾತದಿಂದ ನಿಧನ

ಮಧ್ಯಪ್ರದೇಶದ ಜಬಲ್‌ಪುರದಲ್ಲಿ ಜನಿಸಿದ ಖಾಂಡೇಕರ್ ಐಐಟಿ ಕಾನ್ಪುರದಲ್ಲಿ ಬಿ.ಟೆಕ್ ಓದಿದ್ದು, ಪಿಎಚ್‌ಡಿಗಾಗಿ ಜರ್ಮನಿಗೆ ತೆರಳಿದ್ದರು. 2004 ರಲ್ಲಿ, ಅವರು ಐಐಟಿ ಕಾನ್ಪುರದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಸೇರಿದರು, ನಂತರ ಅವರು ಸಹ ಪ್ರಾಧ್ಯಾಪಕರಾದರು. ನಂತರ ಅವರನ್ನು ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥರಾಗಿದ್ದರು. ಅವರ ಹೆಸರಿಗೆ ಎಂಟು ಪೇಟೆಂಟ್‌ಗಳೂ ಇವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!